November 7, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮದುವೆಯಾಗಲು ನಿರಾಕರಿಸಿ ವಂಚನೆ – ಆರೋಪಿ ಕೃಷ್ಣ ಜೆ. ರಾವ್ ಬಂಧನ

ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಪ್ರಕರಣದ ಆರೋಪಿ 21 ವರ್ಷ ಪ್ರಾಯದ ಕೃಷ್ಣ ಜೆ. ರಾವ್ ಇವನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ತನ್ನ ವಿರುದ್ದ ಪ್ರಕರಣ ದಾಖಲಾದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ.

ಈ ಬಗ್ಗೆ ಜೂನ್ 24ರಂದು ದಕ್ಷಿಣ ಕನ್ನಡ ಮಹಿಳಾ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ:49/2025, ಕಲಂ:64(1), 69 ಬಿ.ಎನ್.ಎಸ್‌. 2023 ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣಾ ಪೊಲೀಸರು ಜುಲಾಯಿ 04ರಂದು ಶುಕ್ರವಾರ ರಾತ್ರಿ ಮೈಸೂರಿನ ಟಿ. ನರಸಿಪುರ ಎಂಬಲ್ಲಿ ವಶಕ್ಕೆ ಪಡೆದು ಠಾಣೆಗೆ ಕರೆತಂದಿರುತ್ತಾರೆ.

ಹೈಸ್ಕೂಲ್ ಓದುವ ಸಂದರ್ಭ ಸಹಪಾಠಿಯಾಗಿದ್ದು ಪ್ರಸ್ತುತ ಪದವಿ ವಿದ್ಯಾರ್ಥಿನಿಯಾಗಿರುವ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿದ್ದ ಆರೋಪಿ ಆಕೆಯನ್ನು ತನ್ನ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಕರೆಸಿ ಬಲವಂತದ ದೈಹಿಕ ಸಂಪರ್ಕ ಬೆಳೆಸಿದ್ದ. ಯುವತಿ ಗರ್ಭವತಿಯಾಗಿದ್ದು ಇತ್ತೀಚೆಗಷ್ಟೆ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆರೋಪಿತನ ವಿಚಾರಣೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

You may also like

News

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ – ಧರ್ಮಸ್ಥಳದಲ್ಲಿ ದ್ವಿ ಸಹಸ್ರ ಮದ್ಯವರ್ಜನ ಶಿಬಿರದ ಸಾವಿರಾರು ಮದ್ಯವರ್ಜಿತರ ಸಮಾವೇಶ

ಬರೆ ಬಾಯಿಮಾತಿನಿಂದ ಪರಿವರ್ತನೆ ಸಾಧ್ಯವಿಲ್ಲ. ಆದುದರಿಂದ ಕಾಯಕದ ಬಗ್ಗೆ ಮಾತು, ಉಪನ್ಯಾಸ ಅಗತ್ಯವಿಲ್ಲ. ಮಾತಿನಲ್ಲಿ ಹೇಳುವುದನ್ನು ಕಾಯಕದಲ್ಲಿ ಮಾಡಿ ತೋರಿಸಬೇಕು ಎಂದು ಬೆಳಗಾವಿ ಜಿಲ್ಲೆ ಹುಕ್ಕೇರಿಯ ಹಿರೇಮಠದ
News

ಶಿರಾಲಿಯ ತೆಗ್ಗಿನಗದ್ದೆ ಗ್ರಾಮದಲ್ಲಿ ಕಾನೂನು ಬಾಹಿರ ಜೂಜಾಟ ದಾಳಿ — 10 ಮಂದಿಯ ಬಂಧನ

ನವೆಂಬರ್ 05ರಂದು ಶಿರಾಲಿಯ ತೆಗ್ಗಿನಗದ್ದೆ ಗ್ರಾಮದಲ್ಲಿ ಕಾನೂನು ಬಾಹಿರವಾಗಿ ಜೂಜಾಟ ನಡೆಸುತ್ತಿದ್ದವರ ಮೇಲೆ ಭಟ್ಕಳ ಗ್ರಾಮಾಂತರ ಪೊಲೀಸ್ ಠಾಣೆಯವರು ದಾಳಿ ನಡೆಸಿ, 10 ಮಂದಿಯ ವಿರುದ್ಧ ಪ್ರಕರಣ

You cannot copy content of this page