August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಒಡಹುಟ್ಟಿದವನಿಗೆ ವಿಶ್ವಾಸದ್ರೋಹಗೈದ ಆರೋಪಿ ಬೆನೆಡಿಕ್ಟ್ ಲಸ್ರಾದೊ ಮತ್ತು ಸಹೋದರನಿಗೆ ಷರತ್ತು ಬದ್ದ ಜಾಮೀನು

FIR ಆದ 27 ದಿವಸಗಳ ಬಳಿಕ ಜಾಮೀನು ಮಂಜೂರು ಮಾಡಿದ ಜಿಲ್ಲಾ ಸತ್ರ ನ್ಯಾಯಾಲಯ

ಬಂಟ್ವಾಳ ತಾಲೂಕು ಬರಿಮಾರು ಗ್ರಾಮದ ಪುರುಷಕೋಡಿ ನಿವಾಸಿ ವಲೇರಿಯನ್ ಲಸ್ರಾದೊ ಇವರ ಆಸ್ತಿ ಕಬಳಿಕೆ ಉದ್ದೇಶವನ್ನಿಟ್ಟುಕೊಂಡು, ವೀಲುನಾಮೆ ಯಾನೆ ಮರಣ ಶಾಸನ ದಾಖಲೆಯನ್ನು ಸೃಷ್ಟಿಸಿ ವಂಚನೆ, ವಿಶ್ವಾಸದ್ರೋಹ, ಪ್ರಾಣ ಬೆದರಿಕೆ ಹಾಗೂ ಸುಲಿಗೆ ಮಾಡಿದ್ದಾರೆ ಎನ್ನಲಾದ ಅವರ ಅಣ್ಣಂದಿರಾದ 61 ವರ್ಷ ಪ್ರಾಯದ ಬೆನೆಡಿಕ್ಟ್ ಲಸ್ರಾದೊ ಮತ್ತು 63 ವರ್ಷ ಪ್ರಾಯದ ಫ್ರೆಡ್ರಿಕ್ ಲಸ್ರಾದೊ ಆರೋಪಿಗಳಿಗೆ ಜಿಲ್ಲಾ ಸತ್ರ ನ್ಯಾಯಾಲಯವು FIR ಆದ 27 ದಿವಸಗಳ ಬಳಿಕ ಷರತ್ತುಗಳಿಗೆ ಒಳಪಟ್ಟು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಜೂನ್ 6ರಂದು ವಲೇರಿಯನ್ ಲಸ್ರಾದೊರವರು ತನ್ನ ಒಡ ಹುಟ್ಟಿದ ಸಹೋದರರ ಮೇಲೆ ಲಿಖಿತ ದೂರು ಸಲ್ಲಿಸಿದ್ದರು. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಯವರು ಅಪರಾಧ ಸಂಖ್ಯೆ BNS 64/2025 ರಂತೆ FIR ದಾಖಲಿಸಿದ್ದರು.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page