April 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಒಡಹುಟ್ಟಿದವನಿಗೆ ವಿಶ್ವಾಸದ್ರೋಹಗೈದ ಆರೋಪಿ ಬೆನೆಡಿಕ್ಟ್ ಲಸ್ರಾದೊ ಮತ್ತು ಸಹೋದರನಿಗೆ ಷರತ್ತು ಬದ್ದ ಜಾಮೀನು

FIR ಆದ 27 ದಿವಸಗಳ ಬಳಿಕ ಜಾಮೀನು ಮಂಜೂರು ಮಾಡಿದ ಜಿಲ್ಲಾ ಸತ್ರ ನ್ಯಾಯಾಲಯ

ಬಂಟ್ವಾಳ ತಾಲೂಕು ಬರಿಮಾರು ಗ್ರಾಮದ ಪುರುಷಕೋಡಿ ನಿವಾಸಿ ವಲೇರಿಯನ್ ಲಸ್ರಾದೊ ಇವರ ಆಸ್ತಿ ಕಬಳಿಕೆ ಉದ್ದೇಶವನ್ನಿಟ್ಟುಕೊಂಡು, ವೀಲುನಾಮೆ ಯಾನೆ ಮರಣ ಶಾಸನ ದಾಖಲೆಯನ್ನು ಸೃಷ್ಟಿಸಿ ವಂಚನೆ, ವಿಶ್ವಾಸದ್ರೋಹ, ಪ್ರಾಣ ಬೆದರಿಕೆ ಹಾಗೂ ಸುಲಿಗೆ ಮಾಡಿದ್ದಾರೆ ಎನ್ನಲಾದ ಅವರ ಅಣ್ಣಂದಿರಾದ 61 ವರ್ಷ ಪ್ರಾಯದ ಬೆನೆಡಿಕ್ಟ್ ಲಸ್ರಾದೊ ಮತ್ತು 63 ವರ್ಷ ಪ್ರಾಯದ ಫ್ರೆಡ್ರಿಕ್ ಲಸ್ರಾದೊ ಆರೋಪಿಗಳಿಗೆ ಜಿಲ್ಲಾ ಸತ್ರ ನ್ಯಾಯಾಲಯವು FIR ಆದ 27 ದಿವಸಗಳ ಬಳಿಕ ಷರತ್ತುಗಳಿಗೆ ಒಳಪಟ್ಟು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಜೂನ್ 6ರಂದು ವಲೇರಿಯನ್ ಲಸ್ರಾದೊರವರು ತನ್ನ ಒಡ ಹುಟ್ಟಿದ ಸಹೋದರರ ಮೇಲೆ ಲಿಖಿತ ದೂರು ಸಲ್ಲಿಸಿದ್ದರು. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಯವರು ಅಪರಾಧ ಸಂಖ್ಯೆ BNS 64/2025 ರಂತೆ FIR ದಾಖಲಿಸಿದ್ದರು.

You may also like

News

ಸೈಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಪ್ರೊ-ಚಾನ್ಸಲರ್ ಫಾದರ್ ಮೆಲ್ವಿನ್ ಜೆ. ಪಿಂಟೊ SJ ವಿಧಿವಶ

ಏಪ್ರಿಲ್ 13ರಂದು ಸೋಮವಾರ ಮಂಗಳೂರಿನಲ್ಲಿಯೇ ಅಂತ್ಯಕ್ರಿಯೆ ಸೈಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಪ್ರೊ-ಚಾನ್ಸಲರ್, ಸಂತ ಅಲೋಶಿಯಸ್ ಸಂಸ್ಥೆಗಳ ರೆಕ್ಟರ್ ಹಾಗೂ ಮಂಗಳೂರು ಜೆಸ್ಯೂಟ್ ಎಜುಕೇಶನಲ್ ಸೊಸೈಟಿಯ (MJES)
News

ಪಿಯುಸಿ ಫಲಿತಾಂಶ – ನೇರಳಕಟ್ಟೆಯ ಆಯಿಷಾ ಹೈಫಾ ಮತ್ತು ಮಹಮ್ಮದ್ ಶಫೀರ್‌ ವಿಶಿಷ್ಟ ಶ್ರೇಣಿಯ ಸಾಧನೆ

2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಂಟ್ವಾಳ ತಾಲೂಕಿನ ನೇರಳಕಟ್ಟೆ ಕುಕ್ಕೆರಬೆಟ್ಟಿನ ಇಬ್ಬರು ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ (Distinction) ತೇರ್ಗಡೆಯಾಗಿ ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ.

You cannot copy content of this page