ಬೆಳ್ತಂಗಡಿ ಅಂಬೇಡ್ಕರ್ ಭವನ ನಿರ್ಮಾಣ ಯೋಜನೆ ಕಾಮಗಾರಿಗೆ ರೂಪಾಯಿ ಮೂರು ಕೋಟಿ ಅನುದಾನ
ಬೆಳ್ತಂಗಡಿ ತಾಲೂಕು ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣ ಯೋಜನೆ ಕಾಮಗಾರಿಗೆ ಕರ್ನಾಟಕ ರಾಜ್ಯ ಸರಕಾರ ರೂಪಾಯಿ ಮೂರು ಕೋಟಿ ಅನುದಾನ ಮಂಜೂರುಗೊಳಿಸಿದೆ.

ಅನುದಾನ ಮಂಜೂರುಗೊಳಿಸುವಲ್ಲಿ ಸಹಕಾರ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮಂಗಳೂರಿನಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಮಾಲಾಡಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ನಾಗೇಶ್ ಕುಮಾರ್ ಗೌಡ, ಬೆಳ್ತಂಗಡಿ ತಾಲೂಕು ಅಕ್ರಮ ಸಕ್ರಮ ಸಮಿತಿಯ ನಾಮನಿರ್ದೇಶಿತ ಸದಸ್ಯ ಶ್ರೀಧರ್ ಕಳೆಂಜ, ಬೆಳ್ತಂಗಡಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯ ನೇಮಿರಾಜ ಕಿಲ್ಲೂರು ಉಪಸ್ಥಿತರಿದ್ದರು.




