August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೆ.ಪಿ. ಸುಲೈಮಾನ್ ಹಾಜಿ ಕನ್ಯಾನ, ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಸಾಮೂಹಿಕ ವಿವಾಹ  

ಕೆ.ಪಿ. ಸುಲೈಮಾನ್ ಹಾಜಿ ಕನ್ಯಾನ (ಅಬುದಾಬಿ), ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಜುಲಾಯ್ 13ರಂದು ಆದಿತ್ಯವಾರ ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ಹಾಲ್ ನಲ್ಲಿ ನಡೆಯಲಿರುವ ಕೆ.ಪಿ. ಸುಲೈಮಾನ್ ಹಾಜಿ ಕನ್ಯಾನರವರ ಸುಪುತ್ರ  ಫೈಝಲ್ ರವರ ಮದುವೆಯ ಪ್ರಯುಕ್ತ ಆರು ಜೋಡಿಗಳ ಸಾಮೂಹಿಕ ವಿವಾಹ ಸಮಾರಂಭವು ಜುಲಾಯ್ 10ರಂದು ಗುರುವಾರ  ನೇರಳಕಟ್ಟೆ ಜನಪ್ರಿಯ ಗಾರ್ಡನ್ ನಲ್ಲಿ ನಡೆಯಿತು.

ಕೆ.ಪಿ. ಸುಲೈಮಾನ್ ಹಾಜಿ ಕನ್ಯಾನ ಅವರ ನೇತೃತ್ವದಲ್ಲಿ ನಡೆದ ನಿಖಾಹ್ ಕಾರ್ಯಕ್ರಮದಲ್ಲಿ ಸುರಿಬೈಲ್ ದಾರುಲ್ ಅಶ್ ಅರಿಯಾ ಮೆನೇಜರ್ ಮಹಮ್ಮದಾಲಿ ಸಖಾಫಿ ಖುತುಬಾ ನೆರವೇರಿಸಿದರು. ದುವಾಃ ನೆರವೇರಿಸಿದ ಬಹುಃ ಸೈಯ್ಯದ್ ಅಬ್ದುರಹ್ಮಾನ್ ಮಸ್ ಊದ್ ಅಲ್ ಬುಖಾರಿ ಕೂರತ್ ತಂಙಳ್ ರವರು ಕೆ.ಪಿ. ಸುಲೈಮಾನ್ ಹಾಜಿ ಕನ್ಯಾನರವರ ಈ ಪುಣ್ಯ ಕಾರ್ಯಕ್ರಮದ ಬಗ್ಗೆ ವ್ಯಾಪಕ ಮೆಚ್ಚುಗೆ ವ್ಯಕ್ತಪಡಿಸಿದರು.

ಕಡಂಬು ಜುಮಾ ಮಸೀದಿಯ ಖತೀಬ್ ಅಬ್ದುರ್ರಹ್ಮಾನ್ ಸಅದಿ ಉಪಸ್ಥಿತರಿದ್ದರು. ವಿವಿಧ ಮಸೀದಿಗಳ ಉಸ್ತಾದರು ನಿಖಾಹ್ ನೇರವೇರಿಸಿ ಕೊಟ್ಟರು.  ಕೊಡಂಗಾಯಿ ಕಡಂಬುವಿನ ರಹಮತ್ ಅವರು ಸಾಲೆತ್ತೂರು ತಿರುಮಜೆಯ ಶರೀಫ್ ರೊಂದಿಗೆ, ಕೆದಿಲ ಬೀಟಿಗೆಯ ಫಾತಿಮತ್ ಫರ್ಝಾನರವರು ಚಿಕ್ಕಮಗಳೂರು ಟಿಪ್ಪು ನಗರದ ಇಮ್ರಾನ್ ಜೊತೆಗೆ, ಇಳಂತಿಲ ಅಂಡೆತ್ತಡ್ಕದ ಫಾತಿಮಾ ಸುಳ್ಯ ಜಟ್ಟಿಪಳ್ಳದ ಅಬ್ದುಲ್ ರಮ್ಸಾದ್ ಎಂಬ ವರನೊಂದಿಗೆ, ಮಿತ್ತಬಾಗಿಲು ಪೇರಾಡಿಯ ಸಂಬ್ರೀನಾ ಬೆಳ್ತಂಗಡಿ ನೆರಿಯದ ಆರಿಫ್ ಜೊತೆಗೆ, ಪೆರುವಾಯಿ ಮುಚ್ಚಿರಪದವಿನ ಫಾತಿಮತ್ ಶಹನಾಝ್ ಪಾವೂರು ಅಕ್ಕರ ನಗರದ ಮುಹಮ್ಮದ್ ಹರ್ಶದ್ ಜೊತೆಗೆ, ವಿಟ್ಲ ಕಡಂಬುವಿನ ರಂಸೀನಾ ಎಂಬಾಕೆಯು ವಿಟ್ಲ ಮೇಗಿನಪೇಟೆಯ ಇಲ್ಯಾಸ್ ಎಂಬ ವರನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಕೆ.ಪಿ. ಸುಲೈಮಾನ್ ಹಾಜಿ ಕನ್ಯಾನರವರ ಸುಪುತ್ರ ಫೈಝಲ್, ಪ್ರಮುಖರಾದ ಬಿ. ಮಹಮ್ಮದ್ ಕುಂಞಿ ವಿಟ್ಲ, ಅಝೀಝ್ ಬೈಕಂಪಾಡಿ, ಬಿ‌.ಎ. ಶಕೂರ್ ಹಾಜಿ ಕಲ್ಲೇಗ, ಆಶ್ರಫ್ ಕಡಂಬು, ಉಬೈದುಲ್ಲಾ ಕಡಂಬು, ಜಬ್ಬಾರ್ ಪೆರ್ನೆ, ಶಕೀಲ್ ಉಡುಪಿ, ಇಮ್ತಿಯಾಝ್ ಬಂಟ್ವಾಳ, ಉಮ್ಮರ್ ಕನ್ಯಾನ, ಟಿ.ಎಚ್.ಎಂ.ಎ. ಹಮೀದ್ ಉಕ್ಕುಡ, ಹನೀಫ್ ಹಾಜಿ ಉದಯ ಕಲ್ಲೇಗ, ಎಂ.ಎಸ್. ಮುಹಮ್ಮದ್, ಬಶೀರ್ ಹಾಜಿ ಕಬಕ, ಇಬ್ರಾಹಿಂ ಬಾವ, ಮುಹಮ್ಮದ್ ಇಕ್ಬಾಲ್, ವಿ.ಎ. ರಶೀದ್ ವಿಟ್ಲ, ಶಾಫಿ ಕಡಂಬು, ನಿಸಾರ್ ಕಡಂಬು, ನಶ್ವಿ ಕಡಂಬು ಹಾಗೂ ವಿ.ಕೆ. ಇಸ್ಮಾಯಿಲ್ ಹಾಜಿ ಬದ್ರಿಯಾ ಮೊದಲಾದವರು ಉಪಸ್ಥಿತರಿದ್ದರು. ಹಮೀದ್ ಗೋಳ್ತಮಜಲು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

You may also like

News

ಧರ್ಮಸ್ಥಳದಲ್ಲಿ ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ

ಆಯುರ್ವೇದದಿಂದ ಪಂಚೇಂದ್ರಿಯಗಳ ಬಲವರ್ಧನೆ, ಆರೋಗ್ಯಭಾಗ್ಯ ಸಾಧ್ಯ – ವೈದ್ಯ ಮನೀಷಾ ಕೋಟೆಕಾರ್ ಉಜಿರೆ: ಸಾವಿರಾರು ವರ್ಷಗಳ ಪಾರಂಪರಿಕ ಪರಂಪರೆಯನ್ನು ಹೊಂದಿರುವ ಆಯುರ್ವೇದ ಪದ್ಧತಿಯ ಮೂಲಕ ದೇಹದ ಪಂಚೇಂದ್ರಿಯಗಳನ್ನು
News

ಸಿಬ್ಬಂದಿ ಕೊರತೆ ನೀಗಿಸಲು ಮೆಸ್ಕಾಂಗೆ 395 ಪವರ್‌ಮ್ಯಾನ್‌ಗಳು – ಅಧ್ಯಕ್ಷ ಕೆ. ಹರೀಶ್ ಕುಮಾರ್

ಮಂಗಳೂರು: ವಿದ್ಯುತ್ ಸರಬರಾಜು ಮತ್ತು ನಿರ್ವಹಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮೆಸ್ಕಾಂ ವ್ಯಾಪ್ತಿಗೆ 395 ಹೊಸ ಪವರ್‌ಮ್ಯಾನ್‌ಗಳನ್ನು ನೇಮಕ ಮಾಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.

You cannot copy content of this page