June 8, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಾಕಿ ಹಣ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ – ಪ್ರಕರಣ ದಾಖಲು – ಆರೋಪಿ ವಶಕ್ಕೆ

ಬಾಕಿ ಇರಿಸಿದ ದಿನಸಿ ಖರೀದಿ ದುಡ್ಡನ್ನು ಕೇಳಿದ್ದಕ್ಕೆ ಬೆಳ್ತಂಗಡಿ ಕುವೆಟ್ಟು ಗ್ರಾಮದ 50 ವರ್ಷ ಪ್ರಾಯದ ಸದಕುತುಲ್ಲ ಎಂಬವರ ಅಂಗಡಿಗೆ ಉಮೇಶ್ ಬಂಗೇರ ಎಂಬಾತನು ಬೆಂಕಿ ಹಚ್ಚಿದ್ದರಿಂದ 3,000 ರೂಪಾಯಿ ನಷ್ಟ ಉಂಟಾದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಜುಲಾಯ್ 9ರಂದು ಆರೋಪಿತ ಉಮೇಶ್ ಬಂಗೇರ ಅವರಲ್ಲಿ ಬೆಳ್ತಂಗಡಿ ಗುರುವಾಯನಕೆರೆ ಎಂಬಲ್ಲಿ ದಿನಸಿ ಅಂಗಡಿ ವ್ಯಾಪಾರ ಮಾಡಿಕೊಂಡ ಅಂಗಡಿ ಮಾಲೀಕ ಸದಕುತುಲ್ಲ  ಎಂಬವರು ಈ ಮುಂಚೆ ದಿನಸಿ ಖರೀದಿಸಿ ಬಾಕಿ ಇರಿಸಿದ ಹಣವನ್ನು ಕೇಳಿದ್ದರು.

ಅದರಿಂದ ಕೋಪಗೊಂಡ ಬಳಂಜ ಗ್ರಾಮದ ನಿವಾಸಿ ಉಮೇಶ ಬಂಗೇರ ಮರುದಿನ ಬೆಳಿಗ್ಗೆ ಅಂಗಡಿಗೆ ಬೆಂಕಿ ಹಚ್ಚಿದ್ದರಿಂದ ಅಂಗಡಿಗೆ ಅಳವಡಿಸಿದ್ದ ಎರಡು ಫ್ಲೆಕ್ಸ್ ಸುಟ್ಟು ಹೋಗಿ 10 ಪ್ಲಾಸ್ಟಿಕ್ ಉಪ್ಪಿನ ಚೀಲಗಳಿಗೆ ಹಾನಿಯಾಗಿರುತ್ತದೆ. ಮಾಹಿತಿ ಸಿಕ್ಕಿದ ಕೂಡಲೇ ಅಂಗಡಿಗೆ ಧಾವಿಸಿ ಸ್ಥಳೀಯರ ನೆರವಿನಿಂದ ಬೆಂಕಿಯನ್ನು ನಂದಿಸಲಾಗಿದೆ. ಅಂಗಡಿ ಮಾಲೀಕ ಸದಕುತುಲ್ಲ ನೀಡಿದ ದೂರಿನಂತೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆ ಕ್ರ: 56/2025 ಕಲಂ 326(f) 324(2) ಬಿಎನ್ಎಸ್ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ಆರೋಪಿ ಉಮೇಶ್ ಬಂಗೇರನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

You may also like

News

ಕಂಬಳ ಕೋಣಗಳ ಮಾಲೀಕನಿಗೆ ಹಲ್ಲೆ, ಸುಲಿಗೆ ಯತ್ನ ಪ್ರಕರಣ – ಮೂವರು KCOCA ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು

ಪುತ್ತೂರಿನ ಕಜೆ ಲಾ ಚೇಂಬರ್ಸ್ ಇದರ ಪ್ರಖ್ಯಾತ ವಕೀಲರಾದ ಮಹೇಶ್ ಕಜೆ ಅವರು ಮಂಡಿಸಿದ ವಾದ ಕಂಬಳದಲ್ಲಿ ಗೆದ್ದ ಕೋಣಗಳ ಮಾಲೀಕನಿಗೆ ಅಕ್ರಮ ಪ್ರವೇಶ ಮಾಡಿ ಹಲ್ಲೆ
News

ಮಂಗಳೂರಿನ ದೇರಳಕಟ್ಟೆಯ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ವೀಣಾ ಡೇಸಾ ಇನ್ನಿಲ್ಲ

ಮಂಗಳೂರಿನ ದೇರಳಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ರಾಣಿಪುರದ 49 ವರ್ಷ ಪ್ರಾಯದ ವೀಣಾ ಡೇಸಾ ಅವರು ಜೂನ್ 7ರಂದು ಭಾನುವಾರ

You cannot copy content of this page