December 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಾಕಿ ಹಣ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ – ಪ್ರಕರಣ ದಾಖಲು – ಆರೋಪಿ ವಶಕ್ಕೆ

ಬಾಕಿ ಇರಿಸಿದ ದಿನಸಿ ಖರೀದಿ ದುಡ್ಡನ್ನು ಕೇಳಿದ್ದಕ್ಕೆ ಬೆಳ್ತಂಗಡಿ ಕುವೆಟ್ಟು ಗ್ರಾಮದ 50 ವರ್ಷ ಪ್ರಾಯದ ಸದಕುತುಲ್ಲ ಎಂಬವರ ಅಂಗಡಿಗೆ ಉಮೇಶ್ ಬಂಗೇರ ಎಂಬಾತನು ಬೆಂಕಿ ಹಚ್ಚಿದ್ದರಿಂದ 3,000 ರೂಪಾಯಿ ನಷ್ಟ ಉಂಟಾದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಜುಲಾಯ್ 9ರಂದು ಆರೋಪಿತ ಉಮೇಶ್ ಬಂಗೇರ ಅವರಲ್ಲಿ ಬೆಳ್ತಂಗಡಿ ಗುರುವಾಯನಕೆರೆ ಎಂಬಲ್ಲಿ ದಿನಸಿ ಅಂಗಡಿ ವ್ಯಾಪಾರ ಮಾಡಿಕೊಂಡ ಅಂಗಡಿ ಮಾಲೀಕ ಸದಕುತುಲ್ಲ  ಎಂಬವರು ಈ ಮುಂಚೆ ದಿನಸಿ ಖರೀದಿಸಿ ಬಾಕಿ ಇರಿಸಿದ ಹಣವನ್ನು ಕೇಳಿದ್ದರು.

ಅದರಿಂದ ಕೋಪಗೊಂಡ ಬಳಂಜ ಗ್ರಾಮದ ನಿವಾಸಿ ಉಮೇಶ ಬಂಗೇರ ಮರುದಿನ ಬೆಳಿಗ್ಗೆ ಅಂಗಡಿಗೆ ಬೆಂಕಿ ಹಚ್ಚಿದ್ದರಿಂದ ಅಂಗಡಿಗೆ ಅಳವಡಿಸಿದ್ದ ಎರಡು ಫ್ಲೆಕ್ಸ್ ಸುಟ್ಟು ಹೋಗಿ 10 ಪ್ಲಾಸ್ಟಿಕ್ ಉಪ್ಪಿನ ಚೀಲಗಳಿಗೆ ಹಾನಿಯಾಗಿರುತ್ತದೆ. ಮಾಹಿತಿ ಸಿಕ್ಕಿದ ಕೂಡಲೇ ಅಂಗಡಿಗೆ ಧಾವಿಸಿ ಸ್ಥಳೀಯರ ನೆರವಿನಿಂದ ಬೆಂಕಿಯನ್ನು ನಂದಿಸಲಾಗಿದೆ. ಅಂಗಡಿ ಮಾಲೀಕ ಸದಕುತುಲ್ಲ ನೀಡಿದ ದೂರಿನಂತೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆ ಕ್ರ: 56/2025 ಕಲಂ 326(f) 324(2) ಬಿಎನ್ಎಸ್ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ಆರೋಪಿ ಉಮೇಶ್ ಬಂಗೇರನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

You may also like

News

ಮಂಗಳೂರಿನ ಆಯುಷ್ ಇಲಾಖೆಯ ಅವಧಿ ಮೀರಿದ ಔಷಧ ಅಕ್ರಮ—ಸರ್ಕಾರದ ನಿರ್ಲಕ್ಷ್ಯಕ್ಕೆ ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ರೋಶ

ಮಂಗಳೂರಿನ ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧಿಗಳನ್ನು ಪೂರೈಕೆ ಮಾಡಿ ರೋಗಿಗಳ ಜೀವದೊಂದಿಗೆ ಆಟವಾಡಿದ ಗಂಭೀರ ಅಕ್ರಮದ ಕುರಿತಾಗಿ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಶಾಸಕ ವೇದವ್ಯಾಸ ಕಾಮತ್
News

ಪುತ್ತೂರಿಗೆ ಶಾಸಕ ಅಶೋಕ್ ರೈ ಕನಸು ನನಸಾದಂತೆ — ರೂಪಾಯಿ 5 ಕೋಟಿ ವೆಚ್ಚದ ಹೊಸ ತಾಲೂಕು ಪಂಚಾಯತ್ ಕಟ್ಟಡಕ್ಕೆ ನಾಳೆ ಡಿಸೆಂಬರ್ 13ರಂದು ಶಿಲಾನ್ಯಾಸ

ಪುತ್ತೂರಿನ ಅಭಿವೃದ್ಧಿ ಕನಸುಗಳು ಒಂದೊಂದಾಗಿ ಸಫಲವಾಗುತ್ತಿವೆ. ಹಳೆಯ ಮತ್ತು ಅಪರಿಹಾರ್ಯವಾಗಿರುವ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪುತ್ತೂರು ತಾಲೂಕು ಪಂಚಾಯತ್ ಕಚೇರಿಗೆ ಹೊಸ ಕಟ್ಟಡದ ಅಗತ್ಯವನ್ನು ಆಗಲೇ ಗುರುತಿಸಿದ್ದ ಶಾಸಕರಾದ

You cannot copy content of this page