May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಾಕಿ ಹಣ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ – ಪ್ರಕರಣ ದಾಖಲು – ಆರೋಪಿ ವಶಕ್ಕೆ

ಬಾಕಿ ಇರಿಸಿದ ದಿನಸಿ ಖರೀದಿ ದುಡ್ಡನ್ನು ಕೇಳಿದ್ದಕ್ಕೆ ಬೆಳ್ತಂಗಡಿ ಕುವೆಟ್ಟು ಗ್ರಾಮದ 50 ವರ್ಷ ಪ್ರಾಯದ ಸದಕುತುಲ್ಲ ಎಂಬವರ ಅಂಗಡಿಗೆ ಉಮೇಶ್ ಬಂಗೇರ ಎಂಬಾತನು ಬೆಂಕಿ ಹಚ್ಚಿದ್ದರಿಂದ 3,000 ರೂಪಾಯಿ ನಷ್ಟ ಉಂಟಾದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಜುಲಾಯ್ 9ರಂದು ಆರೋಪಿತ ಉಮೇಶ್ ಬಂಗೇರ ಅವರಲ್ಲಿ ಬೆಳ್ತಂಗಡಿ ಗುರುವಾಯನಕೆರೆ ಎಂಬಲ್ಲಿ ದಿನಸಿ ಅಂಗಡಿ ವ್ಯಾಪಾರ ಮಾಡಿಕೊಂಡ ಅಂಗಡಿ ಮಾಲೀಕ ಸದಕುತುಲ್ಲ  ಎಂಬವರು ಈ ಮುಂಚೆ ದಿನಸಿ ಖರೀದಿಸಿ ಬಾಕಿ ಇರಿಸಿದ ಹಣವನ್ನು ಕೇಳಿದ್ದರು.

ಅದರಿಂದ ಕೋಪಗೊಂಡ ಬಳಂಜ ಗ್ರಾಮದ ನಿವಾಸಿ ಉಮೇಶ ಬಂಗೇರ ಮರುದಿನ ಬೆಳಿಗ್ಗೆ ಅಂಗಡಿಗೆ ಬೆಂಕಿ ಹಚ್ಚಿದ್ದರಿಂದ ಅಂಗಡಿಗೆ ಅಳವಡಿಸಿದ್ದ ಎರಡು ಫ್ಲೆಕ್ಸ್ ಸುಟ್ಟು ಹೋಗಿ 10 ಪ್ಲಾಸ್ಟಿಕ್ ಉಪ್ಪಿನ ಚೀಲಗಳಿಗೆ ಹಾನಿಯಾಗಿರುತ್ತದೆ. ಮಾಹಿತಿ ಸಿಕ್ಕಿದ ಕೂಡಲೇ ಅಂಗಡಿಗೆ ಧಾವಿಸಿ ಸ್ಥಳೀಯರ ನೆರವಿನಿಂದ ಬೆಂಕಿಯನ್ನು ನಂದಿಸಲಾಗಿದೆ. ಅಂಗಡಿ ಮಾಲೀಕ ಸದಕುತುಲ್ಲ ನೀಡಿದ ದೂರಿನಂತೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆ ಕ್ರ: 56/2025 ಕಲಂ 326(f) 324(2) ಬಿಎನ್ಎಸ್ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ಆರೋಪಿ ಉಮೇಶ್ ಬಂಗೇರನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page