August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಡ್ರಗ್ ಪೆಡ್ಲರ್ ಬೀದರ್ ಮೂಲದ ಖ್ಯಾತ ವೈದ್ಯನ ಬಂಧನ

ಮಂಗಳೂರು ಪೊಲೀಸರು ಮಾದಕ ವಸ್ತುಗಳ ವಿರುದ್ಧ ಸಮರ ಮುಂದುವರೆಸಿದ್ದು, ಡ್ರಗ್ ಪೆಡ್ಲರ್ ಆಗಿದ್ದ ವೈದ್ಯನನ್ನು ಬಂಧಿಸಿದ್ದಾರೆ. ಬೀದರ್ ಮೂಲದ ವೈದ್ಯ ಪ್ರಜ್ವಲ್ ಪಿಣ್ಯಾಸ್ ಬಂಧಿತ ಆರೋಪಿ. ಡ್ರಗ್ ಜಾಲವೊಂದು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದಿಂದ ಡ್ರಗ್ಸ್ ಪೂರೈಸುತ್ತಿತ್ತು. ವೈದ್ಯನ ಬಂಧನದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಡ್ರಗ್ಸ್ ಜಾಲದ ಬಗ್ಗೆ ಹಲವು ಸ್ಫೋಟಕ ಮಾಹಿತಿಗಳು ಲಭ್ಯವಾಗಿವೆ.

ಬೀದರ್ ಮೂಲದ ವೈದ್ಯ ಪ್ರಜ್ವಲ್, ಪ್ರಸ್ತುತ ಬೆಂಗಳೂರಿನ ಕೋಡಿಪಾಳ್ಯ ನಿವಾಸಿಯಾಗಿದ್ದು, ಪ್ರಜ್ವಲ್ ಹಾಗೂ ಇತರ ಪೆಡ್ಲರ್ ಗಳು ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಕೆಲ ದಿನಗಳ ಹಿಂದೆ ಡ್ರಗ್ಸ್ ಪ್ರಕರಣ ಸಂಬಂಧ ಮಂಗಳೂರು ಪೊಲೀಸರು ಆರು ಆರೋಪಿಗಳನ್ನು ಬಂಧಿಸಿದ್ದರು. ಬಂಧಿತರನ್ನು ತೀವ್ರ ವಿಚಾರಣೆ ನಡೆಸಿದಾಗ ವೈದ್ಯ ಪ್ರಜ್ವಲ್ ಪಿಣ್ಯಾಸ್ ಹೆಸರು ಬಾಯ್ಬಿಟ್ಟಿದ್ದಾರೆ. ಆತನೇ ಕಿಂಗ್ ಪಿನ್ ಎಂಬುದು ತನಿಖೆಯಲ್ಲಿ ಬಯಲಾಗಿದೆ.

ವೈದ್ಯ ಪ್ರಜ್ವಲ್ ಪಿಣ್ಯಾಸ್ ಈ ಹಿಂದೆ ಮಂಗಳೂರಿನ ಪ್ರತಿಷ್ಟಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯಾಗಿದ್ದ. ಮಂಗಳೂರಿನ ಮೂರು ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳ ಜಾಡು ಹಿಡಿದಾಗ ವೈದ್ಯ ಪ್ರಜ್ವಲ್ ಕರ್ಮಕಾಂಡ ಬಯಲಾಗಿದೆ. ಒಟ್ಟು 9 ಆರೋಪಿಗಳನ್ನು ಬಂಧಿಸಲಾಗಿದೆ.

You may also like

News

ಧರ್ಮಸ್ಥಳದಲ್ಲಿ ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ

ಆಯುರ್ವೇದದಿಂದ ಪಂಚೇಂದ್ರಿಯಗಳ ಬಲವರ್ಧನೆ, ಆರೋಗ್ಯಭಾಗ್ಯ ಸಾಧ್ಯ – ವೈದ್ಯ ಮನೀಷಾ ಕೋಟೆಕಾರ್ ಉಜಿರೆ: ಸಾವಿರಾರು ವರ್ಷಗಳ ಪಾರಂಪರಿಕ ಪರಂಪರೆಯನ್ನು ಹೊಂದಿರುವ ಆಯುರ್ವೇದ ಪದ್ಧತಿಯ ಮೂಲಕ ದೇಹದ ಪಂಚೇಂದ್ರಿಯಗಳನ್ನು
News

ಸಿಬ್ಬಂದಿ ಕೊರತೆ ನೀಗಿಸಲು ಮೆಸ್ಕಾಂಗೆ 395 ಪವರ್‌ಮ್ಯಾನ್‌ಗಳು – ಅಧ್ಯಕ್ಷ ಕೆ. ಹರೀಶ್ ಕುಮಾರ್

ಮಂಗಳೂರು: ವಿದ್ಯುತ್ ಸರಬರಾಜು ಮತ್ತು ನಿರ್ವಹಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮೆಸ್ಕಾಂ ವ್ಯಾಪ್ತಿಗೆ 395 ಹೊಸ ಪವರ್‌ಮ್ಯಾನ್‌ಗಳನ್ನು ನೇಮಕ ಮಾಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.

You cannot copy content of this page