August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ

ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ  ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಮಾಣಿ ವಲಯದ ಶೌರ್ಯ ತಂಡದ ಸದಸ್ಯರು ಶಾಲಾ ಆವರಣದಲ್ಲಿ ವಿವಿಧ ಜಾತಿಯ ಹಣ್ಣು ಹಂಪಲುಗಳ ಗಿಡಗಳನ್ನು ನೆಡುವುದರೊಂದಿಗೆ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಗ್ರಾಮಾಭಿವೃದ್ಧಿ ಯೋಜನೆಯ ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ ಮಾತನಾಡಿ ಹಸಿರು ನಮ್ಮೆಲ್ಲರ ಉಸಿರು ಮುಂದಿನ ಪೀಳಿಗೆಗೆ ಮರ-ಗಿಡಗಳನ್ನು ಬೆಳೆಸಿ ಪೋಷಿಸುವುದು ವಿದ್ಯಾರ್ಥಿಗಳ ಆದ್ಯ ಕರ್ತವ್ಯವೆಂದು ಹೇಳಿದರು. ಈ ಸಂದರ್ಭದಲ್ಲಿ ಪರಿಸರ ಬಗ್ಗೆ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ  ವಿಜೇತರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಮಾಣಿ ವಲಯದ ಶೌರ್ಯ ತಂಡದ ಸಂಯೋಜಕ ಸತೀಶ್, ಶಾಲಾ ಎಸ್.ಡಿ.ಎಮ್.ಸಿ. ಉಪಾಧ್ಯಕ್ಷ ಹರೀಶ್ ಕುಲಾಲ್, ಶೌರ್ಯ ತಂಡದ ಸದಸ್ಯರುಗಳು, ಒಕ್ಕೂಟ ಸೇವಾ ಪ್ರತಿನಿಧಿ ಪುಷ್ಪ, ಮಕ್ಕಳ ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ತ್ರಿವೇಣಿ ರಮೇಶ್ ಸ್ವಾಗತಿಸಿ, ಶಿಕ್ಷಕಿ ದೀಕ್ಷಾ ವಂದಿಸಿ, ಶಿಕ್ಷಕಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಐಸಮ್ಮರವರು ಸಹಕರಿಸಿದರು.

You may also like

News

ಧರ್ಮಸ್ಥಳದಲ್ಲಿ ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ

ಆಯುರ್ವೇದದಿಂದ ಪಂಚೇಂದ್ರಿಯಗಳ ಬಲವರ್ಧನೆ, ಆರೋಗ್ಯಭಾಗ್ಯ ಸಾಧ್ಯ – ವೈದ್ಯ ಮನೀಷಾ ಕೋಟೆಕಾರ್ ಉಜಿರೆ: ಸಾವಿರಾರು ವರ್ಷಗಳ ಪಾರಂಪರಿಕ ಪರಂಪರೆಯನ್ನು ಹೊಂದಿರುವ ಆಯುರ್ವೇದ ಪದ್ಧತಿಯ ಮೂಲಕ ದೇಹದ ಪಂಚೇಂದ್ರಿಯಗಳನ್ನು
News

ಸಿಬ್ಬಂದಿ ಕೊರತೆ ನೀಗಿಸಲು ಮೆಸ್ಕಾಂಗೆ 395 ಪವರ್‌ಮ್ಯಾನ್‌ಗಳು – ಅಧ್ಯಕ್ಷ ಕೆ. ಹರೀಶ್ ಕುಮಾರ್

ಮಂಗಳೂರು: ವಿದ್ಯುತ್ ಸರಬರಾಜು ಮತ್ತು ನಿರ್ವಹಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮೆಸ್ಕಾಂ ವ್ಯಾಪ್ತಿಗೆ 395 ಹೊಸ ಪವರ್‌ಮ್ಯಾನ್‌ಗಳನ್ನು ನೇಮಕ ಮಾಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.

You cannot copy content of this page