April 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅರಣ್ಯ ಗಸ್ತುಪಾಲಕ ಜಿತೇಶ್ ಪಿ. ರವರಿಗೆ ಮುಖ್ಯಮಂತ್ರಿ ಪದಕ

ಅರಣ್ಯ ಇಲಾಖೆಯ ಬಂಟ್ವಾಳ ವಲಯದ ಗಸ್ತುಪಾಲಕ ಜಿತೇಶ್ ಪಿ.ರವರಿಗೆ ಮುಖ್ಯಮಂತ್ರಿ ಪದಕ ಲಭಿಸಿದೆ. ಇವರು ಸುಮಾರು 20 ವರ್ಷಗಳಿಂದ ಪಂಜ, ಮಂಗಳೂರು, ಬಂಟ್ವಾಳ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಬಂಟ್ವಾಳ ವಲಯದಲ್ಲಿ ಗಸ್ತು ಪಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಮಂಗಳೂರು ವಿಭಾಗದ ಗಸ್ತು ಪಾಲಕ ಹಾಗೂ ಅರಣ್ಯ ವೀಕ್ಷಕರ ಸಂಘದ ಅಧ್ಯಕ್ಷರಾಗಿಯೂ ಕೆಲಸ ಮಾಡುತ್ತಿದ್ದಾರೆ. ಇವರ ಅರಣ್ಯ ಇಲಾಖೆಯಲ್ಲಿನ ದಕ್ಷ, ನಿಷ್ಠೆ ಹಾಗೂ ಪ್ರಾಮಾಣಿಕತೆಯ ಕೆಲಸವನ್ನು ಪರಿಗಣಿಸಿ ಅಕ್ರಮವಾಗಿ ಮರ ಕಡಿಯುವುದು ಮತ್ತು ಕಳ್ಳ ಸಾಗಾಣಿಕೆ ತಡೆಗಟ್ಟುವ ಸಾಧನೆಯ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿರುತ್ತಾರೆ.

You may also like

News

2026-27 ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ – ಮೇ 29ರಿಂದ ತರಗತಿ ಆರಂಭ

2026-27ನೇ ಸಾಲಿನ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದೆ.
News

ಮಗಳನ್ನೇ ಕೊಂದ ತಾಯಿ ನೇಣಿಗೆ ಶರಣು – ವೈಟ್‌ಫೀಲ್ಡ್‌ನಲ್ಲಿ ಕೌಟುಂಬಿಕ ದುರಂತ

ಸಿಲಿಕಾನ್ ಸಿಟಿಯ ವೈಟ್‌ಫೀಲ್ಡ್‌ನ ಇಮ್ಮಡಿಹಳ್ಳಿಯಲ್ಲಿ ಮರುಕಳಿಸದಂತಹ ದಾರುಣ ಘಟನೆಯೊಂದು ನಡೆದಿದೆ. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ತಾಯಿಯೊಬ್ಬರು ತನ್ನ ಸ್ವಂತ ಮಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ತಾವೂ

You cannot copy content of this page