August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಾಣಿಯಲ್ಲಿ ಮಹಿಳಾ ನಾಯಕತ್ವ ಜಾಗೃತಿ, ಸ್ವ ಉದ್ಯೋಗ ತರಬೇತಿ ಮತ್ತು ಬ್ಯಾಂಕಿಂಗ್ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ

ಬಂಟ್ವಾಳ ತಾಲೂಕಿನ ಮಾಣಿ ಗ್ರಾಮ ಪಂಚಾಯತ್ ಇದರ ಸಹಾಭಾಗೀತ್ವದೊಂದಿಗೆ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನ (ರಿ.) ಮಂಗಳೂರು ಹಾಗೂ ಬ್ಯಾಂಕ್ ಆಫ್ ಬರೋಡ ಮಾಣಿ ಶಾಖೆ ಇದರ ಆಶ್ರಯದಲ್ಲಿ ಮಹಿಳಾ ನಾಯಕತ್ವ ಜಾಗೃತಿ, ಸ್ವ ಉದ್ಯೋಗ ತರಬೇತಿ ಮತ್ತು ಬ್ಯಾಂಕಿಂಗ್ ಸೌಲಭ್ಯಗಳ ಮಾಹಿತಿ ಕಾರ್ಯಾಗಾರವು ಜುಲಾಯ್ 15ರಂದು ಮಂಗಳವಾರ ಮಾಣಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾತನಾಡಿ, ಮಹಿಳೆಯರು ಸ್ವ ಉದ್ಯೋಗ ಮಾಡುವ ಮೂಲಕ ಸ್ವಾವಲಂಬಿಗಳಾಗಿ ಬದುಕಲು ಇಂತಹ ತರಬೇತಿಗಳು ಅಗತ್ಯ ಎಂದರು. ಕಾರ್ಯಕ್ರಮವನ್ನು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಆಡಳಿತ ಮಂಡಳಿ ಸದಸ್ಯ ಸುರೇಂದ್ರ ಹೆಗ್ಡೆ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಮಣಿಪಾಲ ಭಾರತೀಯ ವಿಕಾಸ ಟ್ರಸ್ಟ್ ಇದರ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯ ಮಾಹಿತಿ ನೀಡಿದರು.

ಮಾಣಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಜಾತ ಪೂಜಾರಿ, ಸದಸ್ಯರುಗಳಾದ ಇಬ್ರಾಹಿಂ ಕೆ. ಮಾಣಿ, ಬಾಲಕೃಷ್ಣ ಆಳ್ವ ಕೊಡಾಜೆ, ನಾರಾಯಣ ಶೆಟ್ಟಿ ತೋಟ, ಸೀತಾ, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜ್ಯೋತಿ ರಾಜ್, ಬ್ಯಾಂಕ್ ಆಫ್ ಬರೋಡಾ ಮಾಣಿ ಶಾಖೆಯ  ವ್ಯವಸ್ಥಾಪಕ ಅಭಿಲಾಷ್ ಅಜಿತ್, ಬಂಟ್ವಾಳ ಆರ್ಥಿಕ ಸಾಕ್ಷರತಾ ಕೇಂದ್ರದ ಅನುಷಾ, ಬ್ಯಾಂಕ್ ಆಫ್ ಬರೋಡಾ ಮಂಗಳೂರು ಪ್ರಾದೇಶಿಕ ಕಛೇರಿಯ ಆದ್ಯತೆಯ ವಿಭಾಗದ ಉಸ್ತುವಾರಿ ಶ್ರೀರಾಮ್, ಆರ್ಥಿಕ ಸೇರ್ಪಡೆ ಉಸ್ತುವಾರಿ ಪ್ರಜ್ವಲ್ ಅತಿಥಿಗಳಾಗಿ ಭಾಗವಹಿಸಿದ್ದರು.

You may also like

News

ಧರ್ಮಸ್ಥಳದಲ್ಲಿ ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ

ಆಯುರ್ವೇದದಿಂದ ಪಂಚೇಂದ್ರಿಯಗಳ ಬಲವರ್ಧನೆ, ಆರೋಗ್ಯಭಾಗ್ಯ ಸಾಧ್ಯ – ವೈದ್ಯ ಮನೀಷಾ ಕೋಟೆಕಾರ್ ಉಜಿರೆ: ಸಾವಿರಾರು ವರ್ಷಗಳ ಪಾರಂಪರಿಕ ಪರಂಪರೆಯನ್ನು ಹೊಂದಿರುವ ಆಯುರ್ವೇದ ಪದ್ಧತಿಯ ಮೂಲಕ ದೇಹದ ಪಂಚೇಂದ್ರಿಯಗಳನ್ನು
News

ಸಿಬ್ಬಂದಿ ಕೊರತೆ ನೀಗಿಸಲು ಮೆಸ್ಕಾಂಗೆ 395 ಪವರ್‌ಮ್ಯಾನ್‌ಗಳು – ಅಧ್ಯಕ್ಷ ಕೆ. ಹರೀಶ್ ಕುಮಾರ್

ಮಂಗಳೂರು: ವಿದ್ಯುತ್ ಸರಬರಾಜು ಮತ್ತು ನಿರ್ವಹಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮೆಸ್ಕಾಂ ವ್ಯಾಪ್ತಿಗೆ 395 ಹೊಸ ಪವರ್‌ಮ್ಯಾನ್‌ಗಳನ್ನು ನೇಮಕ ಮಾಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.

You cannot copy content of this page