April 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ಥ ಮಹಿಳೆಯಿಂದ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

ಸಂತ್ರಸ್ಥ ಮಹಿಳೆಯ ಗಂಡ ಹಾಗೂ ಕಾವೂರು ಠಾಣಾ ಪೊಲೀಸ್ ಕಾನ್ಸ್ಟೇಬಲ್ ಬಂಧನ

ಮಹಿಳೆಯೊಬ್ಬರ ಮೇಲೆ ಅತ್ಯಾಚಾರದ ಆರೋಪದ ಹಿನ್ನಲೆಯಲ್ಲಿ ಕಾವೂರು ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ಖುದ್ದು ಪೊಲೀಸರೇ ಬಂಧಿಸಿದ್ದಾರೆ. ಮಹಿಳೆಯೊಬ್ಬರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ಅತ್ಯಾಚಾರದ ಬಗ್ಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ದೂರಿನ ಪ್ರಕಾರ ತನ್ನ ಗಂಡನು ಹಣಕ್ಕಾಗಿ ಒತ್ತಾಯಪೂರ್ವಕವಾಗಿ ಬೇರೊಬ್ಬ ಪುರುಷನೊಂದಿಗೆ ದೈಹಿಕ ಸಂಪರ್ಕ ನಡೆಸುವಂತೆ ಮಾಡಿ, ಅದರ ವಿಡಿಯೋವನ್ನು ಚಿತ್ರೀಕರಣ ಮಾಡಿ, ಇತರರೊಂದಿಗೆ ದೈಹಿಕ ಸಂಪರ್ಕ ನಡೆಸುವಂತೆ ಇಲ್ಲವಾದಲ್ಲಿ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿಯ ಬಿಡುವುದಾಗಿ ಬೆದರಿಸಿರುವುದಾಗಿದೆ. ಇದರಿಂದಾಗಿ ಹೆದರಿದ ಸಂತ್ರಸ್ಥ ಮಹಿಳೆಯು ತನಗೆ ಪರಿಚಯವಿರುವ ಕಾವೂರು ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಚಂದ್ರನಾಯ್ಕ್ ನಿಗೆ ಈ ಬಗ್ಗೆ ತಿಳಿಸಿದಾಗ, ಚಂದ್ರನಾಯ್ಕ್ ನು ಸಂತ್ರಸ್ಥೆಯ ಮನೆಗೆ ಹೋಗಿ ಗಂಡನ ಮೊಬೈಲ್‌ನಲ್ಲಿದ್ದ ಪೋಟೋ ಮತ್ತು ವಿಡಿಯೋವನ್ನು ಅಳಿಸಿರುತ್ತಾನೆ.

ಆನಂತರ ಸಂತ್ರಸ್ಥೆಯ ಗಂಡನ ದುಷ್ಪ್ರೇರಣೆಯಂತೆ ಚಂದ್ರನಾಯ್ಕ್ ನು ಸಂತ್ರಸ್ಥ ಮಹಿಳೆಯೊಂದಿಗೆ ಒತ್ತಾಯ ಪೂರ್ವಕವಾಗಿ ಅವಳ ಇಚ್ಚೆಯ ವಿರುದ್ದ ದೈಹಿಕ ಸಂಪರ್ಕ ನಡೆಸಿರುತ್ತಾನೆ. ಸಂತ್ರಸ್ಥೆಯ ದೂರಿನ ಹಿನ್ನಲೆಯಲ್ಲಿ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂತ್ರಸ್ಥ ಮಹಿಳೆಯ ಗಂಡ ಮತ್ತು ಕಾವೂರು ಠಾಣಾ ಪೊಲೀಸ್ ಕಾನ್ಸ್ಟೇಬಲ್ ಚಂದ್ರನಾಯ್ಕ್ ನನ್ನು ದಸ್ತಗಿರಿ ಮಾಡಲಾಗಿರುತ್ತದೆ. ಪ್ರಕರಣದ ತನಿಖೆ ಮುಂದುವರೆದಿದೆ.

 

You may also like

News

ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ – ಏಪ್ರಿಲ್ 18ಕ್ಕೆ ಪೂರ್ವಭಾವಿ ಸಭೆ ಹಾಗೂ ಸ್ವಾಗತ ಸಮಿತಿ ರಚನೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಘಟಕದ ಸಹಯೋಗದಲ್ಲಿ ಮೇ 12ರಂದು ನಡೆಯಲಿರುವ ‘ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ’ದ ಸಿದ್ಧತೆಗಳು
News

ಮಂಗಳೂರು ಧರ್ಮಕ್ಷೇತ್ರದ ವಿವಿಧ ಧರ್ಮಗುರುಗಳ 2026 ನೇ ಸಾಲಿನ ವರ್ಗಾವಣೆ ಪಟ್ಟಿ ಪ್ರಕಟ

ಬಿಷಪ್ ಪರಮ ಪೂಜ್ಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರ ಆದೇಶ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ

You cannot copy content of this page