ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ
ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕರಿಮಣೇಲು ಇದರ ಶಿಕ್ಷಕ ರಕ್ಷಕ ಸಂಘದ ಸಭೆಯು ಜುಲಾಯ್ 16ರಂದು ಬುಧವಾರ ಜರಗಿತು. ಶಾಲಾ ಸಂಚಾಲಕರಾದ ವಂದನೀಯ ಫಾದರ್ ಎಡ್ವಿನ್ ಸಂತೋಷ್ ಮೋನಿಸ್ ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.


ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ನಿವೃತ್ತ ಶಿಕ್ಷಕ ಎಲ್.ಜೆ. ಫೆರ್ನಾಂಡಿಸ್ ರವರು ಮಕ್ಕಳ ಶಿಕ್ಷಣದಲ್ಲಿ ಹೆತ್ತವರ ಪಾತ್ರದ ಬಗ್ಗೆ ಮಾತಾಡಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ವಂದನೀಯ ಫಾದರ್ ಎಡ್ವಿನ್ ಸಂತೋಷ್ ಮೋನಿಸ್ ರವರು ಸಹಕಾರಕ್ಕಾಗಿ ಹೆತ್ತವರನ್ನು ಅಭಿನಂದಿಸಿದರು. ಶಾಲಾ ಮುಖ್ಯ ಶಿಕ್ಷಕಿ ಮಾರ್ಸೆಲಿನ್ ಪಿರೇರಾ ಸರ್ವರನ್ನು ಸ್ವಾಗತಿಸಿದರು. ಸುಮಲತಾ ವರದಿಯನ್ನು ವಾಚಿಸಿದರು. ಶಿಕ್ಷಕಿ ಮೀನಾ ಮೋನಿಸ್ ಕಾರ್ಯಕ್ರಮ ನಿರೂಪಿಸಿದರು. ಸುಪ್ರೀತ ವಂದಿಸಿದರು. ದಿನೇಶ್ ಗೌಡ, ಪಂಚಾಯತ್ ಸದಸ್ಯ ಜಿನ್ನು ಮತ್ತು ಗಾಯತ್ರಿ ಉಪಸ್ಥಿತರಿದ್ದರು.




