July 8, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ

ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕರಿಮಣೇಲು ಇದರ ಶಿಕ್ಷಕ ರಕ್ಷಕ ಸಂಘದ ಸಭೆಯು ಜುಲಾಯ್ 16ರಂದು ಬುಧವಾರ ಜರಗಿತು. ಶಾಲಾ ಸಂಚಾಲಕರಾದ ವಂದನೀಯ ಫಾದರ್ ಎಡ್ವಿನ್ ಸಂತೋಷ್ ಮೋನಿಸ್ ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ನಿವೃತ್ತ ಶಿಕ್ಷಕ ಎಲ್.ಜೆ. ಫೆರ್ನಾಂಡಿಸ್ ರವರು ಮಕ್ಕಳ ಶಿಕ್ಷಣದಲ್ಲಿ ಹೆತ್ತವರ ಪಾತ್ರದ ಬಗ್ಗೆ ಮಾತಾಡಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ವಂದನೀಯ ಫಾದರ್ ಎಡ್ವಿನ್ ಸಂತೋಷ್ ಮೋನಿಸ್ ರವರು ಸಹಕಾರಕ್ಕಾಗಿ ಹೆತ್ತವರನ್ನು ಅಭಿನಂದಿಸಿದರು. ಶಾಲಾ ಮುಖ್ಯ ಶಿಕ್ಷಕಿ ಮಾರ್ಸೆಲಿನ್ ಪಿರೇರಾ ಸರ್ವರನ್ನು ಸ್ವಾಗತಿಸಿದರು. ಸುಮಲತಾ ವರದಿಯನ್ನು ವಾಚಿಸಿದರು. ಶಿಕ್ಷಕಿ ಮೀನಾ ಮೋನಿಸ್ ಕಾರ್ಯಕ್ರಮ ನಿರೂಪಿಸಿದರು. ಸುಪ್ರೀತ ವಂದಿಸಿದರು. ದಿನೇಶ್ ಗೌಡ, ಪಂಚಾಯತ್ ಸದಸ್ಯ ಜಿನ್ನು ಮತ್ತು ಗಾಯತ್ರಿ ಉಪಸ್ಥಿತರಿದ್ದರು.

You may also like

News

ಪುತ್ತೂರಿನಲ್ಲಿ ಯುವತಿಗೆ ಚಾಕು ತೋರಿಸಿ ಬೆದರಿಕೆ ಹಾಕಿದ ಆರೋಪ – ಸತ್ಯಾಂಶ ಬಿಚ್ಚಿಟ್ಟ ಪೊಲೀಸರು

ಉಭಯ ಕಡೆಯಿಂದ ದೂರು ದಾಖಲು! ಸುಳ್ಳು ಸುದ್ದಿ ಅಥವಾ ವದಂತಿಗಳನ್ನು ಹಬ್ಬಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ – ಜಿಲ್ಲಾ SP ಡಾ. ಅರುಣ್ ಕೆ. ಯುವತಿಯೊಬ್ಬಳು
News

ವೇಗದ ಅಬ್ಬರಕ್ಕೆ ವಿದ್ಯಾರ್ಥಿ ಬಲಿ – ವಾಹನ ಸಮೇತ ಚಾಲಕ ಪರಾರಿ

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಐಟಿಐ ವಿದ್ಯಾರ್ಥಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮತ್ತೋರ್ವ ವಿದ್ಯಾರ್ಥಿ

You cannot copy content of this page