August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳ ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಜಗನ್ನಾಥ ಚೌಟ ಮಾಣಿ ಆಯ್ಕೆ

ಬಂಟ್ವಾಳ ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಜಗನ್ನಾಥ ಚೌಟ ಮಾಣಿ ಬದಿಗುಡ್ಡೆ ಇವರು ಆಯ್ಕೆಯಾಗಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯರಾಗಿ, ಜಿಲ್ಲೆಯ ಹಲವು ದೈವಸ್ಥಾನ ಹಾಗೂ ದೇವಸ್ಥಾನಗಳ ಜೀರ್ಣೋದ್ಧಾರ ಸಮಿತಿಯ ಜವಾಬ್ದಾರಿಯನ್ನು ವಹಿಸಿಕೊಂಡು, ಧಾರ್ಮಿಕವಾಗಿ ಸಾಮಾಜಿಕವಾಗಿ ಜನಾನುರಾಗಿಯಾಗಿರುತ್ತಾರೆ ಮಾತ್ರವಲ್ಲದೆ ಪ್ರಗತಿಪರ ಕೃಷಿಕರೂ ಆಗಿದ್ದಾರೆ.

ಉಪಾಧ್ಯಕ್ಷರಾಗಿ ಐತಪ್ಪ ಬಿ.ಸಿ. ರೋಡ್, ಕಾರ್ಯದರ್ಶಿಯಾಗಿ ಸದಾನಂದ ಆಳ್ವ, ಜೊತೆ ಕಾರ್ಯದರ್ಶಿಯಾಗಿ ಶಿವಪ್ರಸಾದ್ ಶೆಟ್ಟಿ ಸಜಿಪ, ಕೋಶಾಧಿಕಾರಿಯಾಗಿ ಲೋಕೆಶ್ ಶೆಟ್ಟಿ ಕುಳ, ಜೊತೆ ಕೋಶಾಧಿಕಾರಿಯಾಗಿ ಶ್ರೀವಿದ್ಯಾ ರೈ ಬಿ.ಸಿ. ರೋಡ್ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳ ಆಯ್ಕೆಯ ಸಭೆಯು ತಾಲೂಕು ಬಂಟರ ಭವನದ ಸಭಾಂಗಣದಲ್ಲಿ ನಡೆಯಿತು.

ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿ ಕಿರಣ್ ಹೆಗ್ಡೆ ಅನಂತಾಡಿ, ವಿವೇಕ್ ಶೆಟ್ಟಿ ನಗ್ರಿಗುತ್ತು, ಲೋಕನಾಥ ಶೆಟ್ಟಿ ಬಿ.ಸಿ. ರೋಡ್, ಶಾಂತರಾಮ ಶೆಟ್ಟಿ ಬೋಳಂತೂರು ನಡೆಸಿಕೊಟ್ಟರು. ಸಂಘದ ಅಧ್ಯಕ್ಷ ಚಂಡ್ರಹಾಸ ಶೆಟ್ಟಿ ರಂಗೋಲಿ, ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

You may also like

News

ಧರ್ಮಸ್ಥಳದಲ್ಲಿ ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ

ಆಯುರ್ವೇದದಿಂದ ಪಂಚೇಂದ್ರಿಯಗಳ ಬಲವರ್ಧನೆ, ಆರೋಗ್ಯಭಾಗ್ಯ ಸಾಧ್ಯ – ವೈದ್ಯ ಮನೀಷಾ ಕೋಟೆಕಾರ್ ಉಜಿರೆ: ಸಾವಿರಾರು ವರ್ಷಗಳ ಪಾರಂಪರಿಕ ಪರಂಪರೆಯನ್ನು ಹೊಂದಿರುವ ಆಯುರ್ವೇದ ಪದ್ಧತಿಯ ಮೂಲಕ ದೇಹದ ಪಂಚೇಂದ್ರಿಯಗಳನ್ನು
News

ಸಿಬ್ಬಂದಿ ಕೊರತೆ ನೀಗಿಸಲು ಮೆಸ್ಕಾಂಗೆ 395 ಪವರ್‌ಮ್ಯಾನ್‌ಗಳು – ಅಧ್ಯಕ್ಷ ಕೆ. ಹರೀಶ್ ಕುಮಾರ್

ಮಂಗಳೂರು: ವಿದ್ಯುತ್ ಸರಬರಾಜು ಮತ್ತು ನಿರ್ವಹಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮೆಸ್ಕಾಂ ವ್ಯಾಪ್ತಿಗೆ 395 ಹೊಸ ಪವರ್‌ಮ್ಯಾನ್‌ಗಳನ್ನು ನೇಮಕ ಮಾಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.

You cannot copy content of this page