August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜೋಕಾಲಿ ಆಟವಾಡುತ್ತಿದ್ದಾಗ ಉಸಿರುಗಟ್ಟಿ 13 ವರ್ಷದ ಬಾಲಕಿಯ ದಾರುಣ ಅಂತ್ಯ

ಭಟ್ಕಳ ತಾಲೂಕಿನ ತೆರ್ನಮಕ್ಕಿ ಸಭಾತಿ ಗ್ರಾಮದಲ್ಲಿ ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ಕುತ್ತಿಗೆಗೆ ಹಗ್ಗ ಸುತ್ತಿಕೊಂಡು 13 ವರ್ಷದ ಬಾಲಕಿ ದಾರುಣವಾಗಿ ಉಸಿರುಗಟ್ಟಿ ಸಾವನ್ನಪ್ಪಿದ ದುರ್ಘಟನೆ ಜುಲಾಯ್ 17ರಂದು ಗುರುವಾರ ನಡೆದಿದೆ. ಮೃತ ಬಾಲಕಿ ಪ್ರಣೀತ ಜಗನ್ನಾಥ ನಾಯ್ಕ ಎಂದು ಗುರುತಿಸಲಾಗಿದ್ದು ಈಕೆ 7ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು.

ಘಟನೆಯ ದಿನ ಶಾಲೆಗೆ ಮಳೆಯ ಕಾರಣದಿಂದ ರಜೆ ಇದ್ದ ಕಾರಣ, ಪ್ರಣೀತ ತನ್ನ ಸಹೋದರಿಯೊಂದಿಗೆ ಮನೆಯ ಬಳಿ ಜೋಕಾಲಿಯಲ್ಲಿ ಆಟವಾಡುತ್ತಿದ್ದಳು. ಈ ವೇಳೆ ಜೋಕಾಲಿಯ ಹಗ್ಗ ತಲೆ ಮತ್ತು ಕುತ್ತಿಗೆಗೆ ಸುತ್ತಿಕೊಂಡು ತೀವ್ರ ಗಂಭೀರ ಪರಿಸ್ಥಿತಿ ಉಂಟಾಗಿದೆ. ಸಹಾಯಕ್ಕಾಗಿ ಕೂಗುವಷ್ಟರಲ್ಲಿ ಉಸಿರುಗಟ್ಟಿ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಘಟನೆಯ ಸಮಯದಲ್ಲಿ ತಾಯಿ ಕೆಲಸಕ್ಕೆ ಹೋಗಿದ್ದ ಕಾರಣ ತಕ್ಷಣ ಯಾವುದೇ ಸಹಾಯ ಲಭ್ಯವಾಗಿಲ್ಲ ಎಂದು ಕುಟುಂಬ ಮೂಲಗಳು ತಿಳಿಸಿವೆ. ಘಟನೆಯ ಬಗ್ಗೆ ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಗ್ರಾಮದ ಜನರಲ್ಲಿ ಈ ದುರ್ಘಟನೆ ಆಘಾತ ಮೂಡಿಸಿದ್ದು, ಎಲ್ಲಾ ಕಡೆ ದುಃಖದ ವಾತಾವರಣ ನಿರ್ಮಾಣವಾಗಿದೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page