October 31, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜೋಕಾಲಿ ಆಟವಾಡುತ್ತಿದ್ದಾಗ ಉಸಿರುಗಟ್ಟಿ 13 ವರ್ಷದ ಬಾಲಕಿಯ ದಾರುಣ ಅಂತ್ಯ

ಭಟ್ಕಳ ತಾಲೂಕಿನ ತೆರ್ನಮಕ್ಕಿ ಸಭಾತಿ ಗ್ರಾಮದಲ್ಲಿ ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ಕುತ್ತಿಗೆಗೆ ಹಗ್ಗ ಸುತ್ತಿಕೊಂಡು 13 ವರ್ಷದ ಬಾಲಕಿ ದಾರುಣವಾಗಿ ಉಸಿರುಗಟ್ಟಿ ಸಾವನ್ನಪ್ಪಿದ ದುರ್ಘಟನೆ ಜುಲಾಯ್ 17ರಂದು ಗುರುವಾರ ನಡೆದಿದೆ. ಮೃತ ಬಾಲಕಿ ಪ್ರಣೀತ ಜಗನ್ನಾಥ ನಾಯ್ಕ ಎಂದು ಗುರುತಿಸಲಾಗಿದ್ದು ಈಕೆ 7ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು.

ಘಟನೆಯ ದಿನ ಶಾಲೆಗೆ ಮಳೆಯ ಕಾರಣದಿಂದ ರಜೆ ಇದ್ದ ಕಾರಣ, ಪ್ರಣೀತ ತನ್ನ ಸಹೋದರಿಯೊಂದಿಗೆ ಮನೆಯ ಬಳಿ ಜೋಕಾಲಿಯಲ್ಲಿ ಆಟವಾಡುತ್ತಿದ್ದಳು. ಈ ವೇಳೆ ಜೋಕಾಲಿಯ ಹಗ್ಗ ತಲೆ ಮತ್ತು ಕುತ್ತಿಗೆಗೆ ಸುತ್ತಿಕೊಂಡು ತೀವ್ರ ಗಂಭೀರ ಪರಿಸ್ಥಿತಿ ಉಂಟಾಗಿದೆ. ಸಹಾಯಕ್ಕಾಗಿ ಕೂಗುವಷ್ಟರಲ್ಲಿ ಉಸಿರುಗಟ್ಟಿ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಘಟನೆಯ ಸಮಯದಲ್ಲಿ ತಾಯಿ ಕೆಲಸಕ್ಕೆ ಹೋಗಿದ್ದ ಕಾರಣ ತಕ್ಷಣ ಯಾವುದೇ ಸಹಾಯ ಲಭ್ಯವಾಗಿಲ್ಲ ಎಂದು ಕುಟುಂಬ ಮೂಲಗಳು ತಿಳಿಸಿವೆ. ಘಟನೆಯ ಬಗ್ಗೆ ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಗ್ರಾಮದ ಜನರಲ್ಲಿ ಈ ದುರ್ಘಟನೆ ಆಘಾತ ಮೂಡಿಸಿದ್ದು, ಎಲ್ಲಾ ಕಡೆ ದುಃಖದ ವಾತಾವರಣ ನಿರ್ಮಾಣವಾಗಿದೆ.

You may also like

News

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ವಿರುದ್ಧದ ಆರೋಪ ಖಂಡನೀಯ — AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್

ರಾಜಕೀಯ ಲಾಭಕ್ಕಾಗಿ ವ್ಯಕ್ತಿತ್ವ ಹಾನಿಗೆ ಯತ್ನಿಸುವಂತ ಹೇಳಿಕೆಗಳನ್ನು ತಕ್ಷಣ ಹಿಂಪಡೆಯಬೇಕು ವಿಧಾನಸಭಾ ಸ್ಪೀಕರ್ ಸನ್ಮಾನ್ಯ ಯು.ಟಿ. ಖಾದರ್ ರವರ ವಿರುದ್ಧ ಶಾಸಕರಾದ ಭರತ್ ಶೆಟ್ಟಿಯವರು ಪತ್ರಿಕಾಗೋಷ್ಠಿಯಲ್ಲಿ ಮಾಡಿದ್ದ
News

ನವೆಂಬರ್ 2ರಂದು ಮಂಗಳೂರು ಆಟೋರಿಕ್ಷಾ ಮತ್ತು ಕಾರು ಚಾಲಕರ ಸಹಕಾರಿ ಸಂಘದ ಸುವರ್ಣ ಮಹೋತ್ಸವ

ಐತಿಹಾಸಿಕ 50 ವರ್ಷದ ಪಯಣ MLC ಐವನ್ ಡಿಸೋಜ ನೇತೃತ್ವದಲ್ಲಿ ಪತ್ರಿಕಾ ಗೋಷ್ಠಿ ಮಂಗಳೂರು ಆಟೋರಿಕ್ಷಾ ಮತ್ತು ಕಾರು ಚಾಲಕರ ಸಹಕಾರಿ ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮವು

You cannot copy content of this page