May 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಾಲ್ದನೆ ಚರ್ಚ್ ICYM ಘಟಕದಿಂದ ‘ಬುಕ್ ಡ್ರೈವ್’ ಕಾರ್ಯಕ್ರಮ

ಯುವ ಜನರಲ್ಲಿ ಪುಸ್ತಕ ಓದುವ ಹವ್ಯಾಸವನ್ನು ಬೆಳೆಸುವ ಉದ್ದೇಶದಿಂದ ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಸಂತ ತೆರೆಸಾ ಚರ್ಚ್ ಪಾಲ್ದನೆ ಇದರ ICYM ಘಟಕವು ‘ಬುಕ್ ಡ್ರೈವ್’ ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಯೋಜನೆಯಡಿ ICYM ಸದಸ್ಯರು ಚರ್ಚ್ ಸದಸ್ಯರಿಂದ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಅವುಗಳನ್ನು ಚರ್ಚ್ ನ ಆಸಕ್ತ ಸದಸ್ಯರಿಗೆ ಅವರವರಿಗೆ ಬೇಕಾಗಿರುವ ಪುಸ್ತಕಗಳನ್ನು ಉಚಿತವಾಗಿ ವಿತರಿಸಿದರು.

ಈ ಕಾರ್ಯಕ್ರಮವನ್ನು ಚರ್ಚ್ ಪ್ರಧಾನ ಧರ್ಮಗುರು ವಂದನೀಯ ಫಾದರ್ ರಿಚ್ಚರ್ಡ್ ಅಲೋಶಿಯಸ್‌ ಕುವೆಲ್ಲೊರವರು ಉದ್ಘಾಟಿಸಿದರು. ಬಳಿಕ ಅವರು ಮಾತನಾಡಿ, ICYM ಸಂಘಟನೆಯು ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಆಧುನಿಕ ಮೊಬೈಲ್‌ ಯುಗದಲ್ಲಿ ಪುಸ್ತಕದ ಓದುವಿಕೆ ಕಡಿಮೆಯಾಗಿದೆ. ಇಂತಹ ಸಂದರ್ಭದಲ್ಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ನಿಟ್ಟಿನಲ್ಲಿ ICYM ‘ಬುಕ್‌ ಡ್ರೈವ್’ ಎಂಬ ಯೋಜನೆ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ಚರ್ಚ್ ಪಾಲನಾ ಸಮಿತಿಯ ಕಾರ್ಯದರ್ಶಿ ಆಸ್ಟಿನ್‌ ಮೊಂತೇರೊ, ICYM ಸಚೇತಕ ಹಾಗೂ ಮದರ್ ತೆರೆಸಾ ವಾರ್ಡಿನ ಮುಖ್ಯಸ್ಥ ರೋಷನ್‌ ಮೊಂತೇರೊ, ಘಟಕದ ಅಧ್ಯಕ್ಷ ವಿಲೀಶಾ ಬ್ರ್ಯಾಗ್ಸ್ ಹಾಗೂ ಕಾರ್ಯದರ್ಶಿ ವಿಶೆಲ್‌ ಲೋಬೊ ಉಪಸ್ಥಿತರಿದ್ದರು.  ಬುಕ್ ಡ್ರೈವ್ ಅಂಗವಾಗಿ ಮೊದಲ ಹಂತದಲ್ಲಿ ಕಥೆ, ಕಾದಂಬರಿ, ಮಾರ್ಕೆಟಿಂಗ್, ಡಿಜಿಟಲ್‌ ಸಂಬಂಧಿತ ಪುಸ್ತಕಗಳು, ಮಕ್ಕಳ ಚಾರ್ಟ್ ಗಳು, ಧಾರ್ಮಿಕ ಮತ್ತು ಆರೋಗ್ಯ ಸಂಬಂಧಿತ ಪುಸ್ತಕಗಳು, ವಿಡಂಬನಾತ್ಮಕ ಬರಹಗಳು ಮತ್ತಿತರ ಸುಮಾರು 800 ಪುಸ್ತಕಗಳನ್ನು ಸಂಗ್ರಹಿಸಲಾಗಿದೆ.

You may also like

News

Mumbai Archbishop Cardinal Oswald Gracias Offers Solace to Residents of Saint Anthony’s Ashram

MANGALURU: His Eminence Cardinal Oswald Gracias, Archbishop of Mumbai and a member of the Pope’s Council of Cardinals, paid a
News

ಸೂರಿಕುಮೇರು – ಮಾಣಿಯಲ್ಲಿ ಅದ್ದೂರಿ ‘ಅನ್ಫಾಲ್ ರೆಸ್ಟೋರೆಂಟ್’ ಮೇ 3ರಂದು ಉದ್ಘಾಟನೆ

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಭಾಗಿ ಉದ್ಘಾಟನಾ ಭವ್ಯ ಸಮಾರಂಭದಲ್ಲಿ ಮೂವರು ಸಾಧಕರಾದ ಚೇತನ್ ರೈ, ನಾಗರಾಜ್ ಶೆಟ್ಟಿ ಹಾಗೂ ಯಾಸೀರ್ ಕಲ್ಲಡ್ಕ

You cannot copy content of this page