September 20, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳ ಗ್ರಾಮಾಂತರ ಠಾಣೆಯ PSI ಖೀರಪ್ಪ ಆತ್ಮಹತ್ಯೆ

ಬಂಟ್ವಾಳ ಗ್ರಾಮಾಂತರ ಠಾಣೆಯ ಕ್ರೈಮ್ ವಿಭಾಗದಲ್ಲಿ PSI ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಇಂದು ಜುಲಾಯ್ 20ರಂದು ಆದಿತ್ಯವಾರ ಸಂಜೆ ಬೆಳಕಿಗೆ ಬಂದಿದೆ. ಮೃತ ಪೊಲೀಸ್ ಅಧಿಕಾರಿಯನ್ನು ಉತ್ತರ ಕನ್ನಡ ಮೂಲದ 54 ವರ್ಷ ಪ್ರಾಯದ ಖೀರಪ್ಪ ಎಂದು ಗುರುತಿಸಲಾಗಿದೆ.

ಬಂಟ್ವಾಳ ಪೇಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಅವರು ಅದೇ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಶಿರಸಿ ಠಾಣೆಯಿಂದ ಕಳೆದ 5 ತಿಂಗಳ ಹಿಂದೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದಿದ್ದರು. ಇವರ ಕುಟುಂಬ ಉತ್ತರ ಕನ್ನಡ ಜಿಲ್ಲೆಯಲ್ಲಿ ವಾಸ್ತವ್ಯ ಇದ್ದು, ಇವರೊಬ್ಬರೇ ಬಂಟ್ವಾಳ ಪೇಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.


ಅವರು ಆದಿತ್ಯವಾರ ಬೆಳಿಗ್ಗೆಯಿಂದ ಕರ್ತವ್ಯಕ್ಕೆ ಬಂದಿರಲಿಲ್ಲ. ಮೊಬೈಲ್ ಕರೆ ಮಾಡಿದರೂ ಸ್ವೀಕರಿಸದೆ ಇದ್ದ ಹಿನ್ನಲೆಯಲ್ಲಿ ಸಂಶಯಗೊಂಡ ಠಾಣಾ ಪೊಲೀಸರು ಸಂಜೆ ವೇಳೆ ಅವರು ವಾಸವಾಗಿರುವ ಬಾಡಿಗೆ ಮನೆಗೆ ಹೋಗಿ ಕರೆದರೂ ಯಾವುದೇ ಪ್ರತಿಕ್ರಿಯೆ ಬಾರದೆ ಇದ್ದಾಗ ಕಿಟಕಿಯಲ್ಲಿ ನೋಡಿದಾಗ ಕೋಣೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ. ವಯುಕ್ತಿಕ ಹಾಗೂ ಹಣಾಕಾಸು ಸಮಸ್ಯೆಗಳಿಂದ ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಿ ಆ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿ, ಬಂಟ್ವಾಳ ನಗರ ಠಾಣೆಯಲ್ಲಿ UDR ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ನಡೆಸುತ್ತಿದ್ದಾರೆ.

You may also like

News

ಸಾಣೂರು ಜಂಕ್ಷನ್‌ನಲ್ಲಿ ಮಾಜಿ ಸಚಿವ ರಮಾನಾಥ ರೈ ಕಾರಿಗೆ ಬಸ್ ಡಿಕ್ಕಿ – ಹಲವರಿಗೆ ಗಾಯ

ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಮುಖಂಡ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಘಟನೆ ಇಂದು ಸೆಪ್ಟೆಂಬರ್ 20ರಂದು ಭಾನುವಾರ ಕಾರ್ಕಳ–ಮೂಡುಬಿದಿರೆ
News

ಬಂಟ್ವಾಳ ಲೋಕ ಅದಾಲತ್ – 12,400 ಪ್ರಕರಣ ಇತ್ಯರ್ಥ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಬಂಟ್ವಾಳದ ಬಿ.ಸಿ. ರೋಡ್ ನ್ಯಾಯಾಲಯದಲ್ಲಿ ಸೆಪ್ಟೆಂಬರ್ 19ರಂದು ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 13,223 ಪ್ರಕರಣಗಳನ್ನು ಪರಿಗಣಿಸಿ,

You cannot copy content of this page