December 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಾಜಿ ಸೈನಿಕರಿಂದ ಗುತ್ತಿಗೆ ನವೀಕರಿಸಲು ಪುತ್ತೂರು ಶಾಸಕ ಅಶೋಕ್ ರೈಯವರಿಗೆ ವಿನಂತಿ ಪತ್ರ

ಕರ್ನಾಟಕದ ವಿವಿಧ ಭಾಗಗಳಲ್ಲಿ ಕರ್ನಾಟಕ ರಾಜ್ಯ ವಿಪತ್ತು ಸ್ಪಂದನಾ ಪಡೆಯ ವಿಪತ್ತು ನಿರ್ವಹಣೆ ಹಾಗೂ ರಕ್ಷಣಾ ಕಾರ್ಯಗಳಿಗೆ ಗುತ್ತಿಗೆ ಆಧಾರದ ಮೇರೆಗೆ ಕಾರ್ಯನಿರ್ವಹಿಸುವ ಮಾಜಿ ಸೈನಿಕರ ಕೆಲಸವು ಇದೇ ವರ್ಷದ ಮೇ 22ರಂದು ಮುಕ್ತಾಯಗೊಂಡಿದೆ. ಆದರೆ ಎರಡು ತಿಂಗಳಾದರೂ ಕೂಡ ಇದನ್ನು ನವೀಕರಿಸಿಲ್ಲ. ಆದುದರಿಂದ ಈ ಕೆಲಸವನ್ನು ಮಾಡುವ ಸುಮಾರು 12 ಜನ ಮಾಜಿ ಸೈನಿಕರು ಇದನ್ನು ನವೀಕರಣಗೊಳಿಸಲು ಸಂಬಂಧಪಟ್ಟ ಸರಕಾರದ ಅಧಿಕಾರಿಗಳ ಗಮನಕ್ಕೆ ತರುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಲಿಖಿತ ಪತ್ರ ಒಂದನ್ನು ನೀಡಿದ್ದಾರೆ.

ಈ ಪತ್ರಕ್ಕೆ ಮಾಜಿ ಸೈನಿಕರಾದ ಸುನಿಲ್ ಕುಮಾರ್, ಅಶೋಕ್ ಎಂ., ರಾಜೇಶ್, ಮೋಹನ್ ಎಸ್., ವಿಶ್ವನಾಥ ಕೊಳ್ಕೆ, ರಂಜಿತ್ ಶೆಟ್ಟಿ, ಜಗದೀಶ್ ಎಂ., ಉಮೇಶ್ ಎನ್., ಶಿವಪ್ರಸಾದ್ ಡಿ.ಕೆ., ದಿನೇಶ್ ಎಸ್., ಪುರಂದರ ಗೌಡ ಹಾಗೂ ಬೇಬಿ ಟಿ. ಸಹಿ ಹಾಕಿದ್ದಾರೆ.

You may also like

News

ಪುತ್ತೂರಿಗೆ ಶಾಸಕ ಅಶೋಕ್ ರೈ ಕನಸು ನನಸಾದಂತೆ — ರೂಪಾಯಿ 5 ಕೋಟಿ ವೆಚ್ಚದ ಹೊಸ ತಾಲೂಕು ಪಂಚಾಯತ್ ಕಟ್ಟಡಕ್ಕೆ ನಾಳೆ ಡಿಸೆಂಬರ್ 13ರಂದು ಶಿಲಾನ್ಯಾಸ

ಪುತ್ತೂರಿನ ಅಭಿವೃದ್ಧಿ ಕನಸುಗಳು ಒಂದೊಂದಾಗಿ ಸಫಲವಾಗುತ್ತಿವೆ. ಹಳೆಯ ಮತ್ತು ಅಪರಿಹಾರ್ಯವಾಗಿರುವ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪುತ್ತೂರು ತಾಲೂಕು ಪಂಚಾಯತ್ ಕಚೇರಿಗೆ ಹೊಸ ಕಟ್ಟಡದ ಅಗತ್ಯವನ್ನು ಆಗಲೇ ಗುರುತಿಸಿದ್ದ ಶಾಸಕರಾದ
News

ಲೋಕಸಭೆಯಲ್ಲಿ ಮಾಜಿ ಸೈನಿಕರ ಪರ ಧ್ವನಿಯೆತ್ತಿದ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ

ಯೋಧರ ಚಿಕಿತ್ಸಾ ತೊಂದರೆ ಗಂಭೀರ – ಖಾಸಗಿ ಆಸ್ಪತ್ರೆಗಳು ಹಿಂದೆ ಸರಿಯುತ್ತಿರುವುದೇ ಆತಂಕ ಕೊಡಗಿನಲ್ಲಿ ECHS ಆಸ್ಪತ್ರೆಗಳ ಕೊರತೆ – ನಿವೃತ್ತ ಯೋಧರು 100–150 ಕಿ.ಮೀ ಪ್ರಯಾಣಿಸುವ

You cannot copy content of this page