April 29, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳದ ಫರ್ಲಾ ಚರ್ಚ್ ನಲ್ಲಿ ಉಚಿತ ಆರೋಗ್ಯ ಶಿಬಿರ

ವೆಲಂಕಣಿ ಮಾತೆಗೆ ಸಮರ್ಪಿತ ದೇವಾಲಯ ಫರ್ಲಾ, ಬಂಟ್ವಾಳ ಇಲ್ಲಿಯ ಕಥೊಲಿಕ್ ಸಭಾ ಸಂಘಟನೆ ಹಾಗೂ ಸ್ವಸ್ತ ಆಯೋಗ ಇವರ ಜಂಟಿ ಆಶ್ರಯದಲ್ಲಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ ಕಂಕನಾಡಿ ಹಾಗೂ ತುಂಬೆ ಇವರ ಸಹಯೋಗದಲ್ಲಿ  ಜುಲಾಯ್ 20ರಂದು ಆದಿತ್ಯವಾರ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಚಿತ ಆರೋಗ್ಯ ಕಾರ್ಡ್ ವಿತರಣೆ ಕಾರ್ಯಕ್ರಮವನ್ನು ನಡೆಸಲಾಯಿತು.

ಚರ್ಚ್ ಧರ್ಮಗುರು ವಂದನೀಯ ಫಾದರ್ ಮಾರ್ಕ್ ಅರುಣ್ ಡಿಸೋಜರವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಆಸ್ಪತ್ರೆ ಸಿಬ್ಬಂದಿಯವರ ನಿಸ್ವಾರ್ಥ ಸೇವೆಗೆ ಕೃತಜ್ಞತೆಯನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು. ಕಾರ್ಯಕ್ರಮದಲ್ಲಿ ವಂದನೀಯ ಫಾದರ್ ಗಿಲ್ಬರ್ಟ್ ಮಸ್ಕರೇನಸ್, ಕಥೊಲಿಕ್ ಸಭಾ ಫರ್ಲಾ ಘಟಕದ ಅಧ್ಯಕ್ಷ ಹಾಗೂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ನವೀನ್ ಮಿನೇಜಸ್, ಆಯೋಗಗಳ ಸಂಯೋಜಕಿ ಸುನೀತಾ ರೊಡ್ರಿಗಸ್, ಫಾದರ್ ಮುಲ್ಲರ್ ಆಸ್ಪತ್ರೆಯ ಪರವಾಗಿ ಡಾಕ್ಟರ್ ಚಿನ್ಮಯಿ ಹೆಬ್ಬಾರ್, ಸ್ವಸ್ಥ ಆಯೋಗದ ಸಂಚಾಲಕಿ ‌ಸೆವ್ರಿನ್ ಡಿಸೋಜ ಹಾಗೂ ಕಥೊಲಿಕ್ ಸಭಾ ಕಾರ್ಯದರ್ಶಿ ರೂಪಾ ಮೋರಸ್ ಉಪಸ್ಥಿತರಿದ್ದರು.

ಅನೇಕ ಜನರು ಬೇರೆ ಬೇರೆ ರೀತಿಯ ತಪಾಸಣೆಗಳನ್ನು ಮಾಡಿ ಉಚಿತ ಆರೋಗ್ಯ ಕಾರ್ಡ್ ಪಡೆದರು. ಹಿಲ್ಡಾ ಪಿರೇರಾ ಕಾರ್ಯಕ್ರಮ ನಿರೂಪಿಸಿದರು. ಕಥೊಲಿಕ್ ಸಭಾ ಅಧ್ಯಕ್ಷರು ಸ್ವಾಗತಿಸಿದರು. ಕಾರ್ಯದರ್ಶಿ ವಂದನಾರ್ಪಣೆ ಸಲ್ಲಿಸಿದರು.

You may also like

News

ಬಂಟ್ವಾಳದ ತೌಹೀದ್ ಶಾಲೆಗೆ ಕೀರ್ತಿ ತಂದ ಆಭಿದುನ್ನೀಸ – SSLC ಪರೀಕ್ಷೆಯಲ್ಲಿ ಭರ್ಜರಿ ಸಾಧನೆ

ಇತ್ತೀಚೆಗೆ ಪ್ರಕಟಗೊಂಡ ರಾಜ್ಯ ಮಟ್ಟದ SSLC ಪರೀಕ್ಷಾ ಫಲಿತಾಂಶದಲ್ಲಿ ಬಂಟ್ವಾಳದ ತೌಹೀದ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಆಭಿದುನ್ನೀಸ ಎಂ. ಅವರು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ
News

ಪಾಲ್ದನೆ ಚರ್ಚ್‌ನಲ್ಲಿ ವಿದ್ಯಾರ್ಥಿಗಳಿಗೆ ಭವಿಷ್ಯದ ದಾರಿ – ವೃತ್ತಿ ಮಾರ್ಗದರ್ಶನ ಶಿಬಿರ ಯಶಸ್ವಿ

ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ನಂತರ ಸರಿಯಾದ ವೃತ್ತಿಜೀವನವನ್ನು ಆರಿಸಿಕೊಳ್ಳಲು ನೆರವಾಗುವ ನಿಟ್ಟಿನಲ್ಲಿ, ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಪಾಲ್ದನೆಯ ಸಂತ ತೆರೆಸಾ ಚರ್ಚ್‌ನ ಶೈಕ್ಷಣಿಕ ಆಯೋಗದ ವತಿಯಿಂದ ಇತ್ತೀಚೆಗೆ

You cannot copy content of this page