November 8, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಜ್ಪೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಿಂಡರ್ ಗಾರ್ಟನ್ ಮಕ್ಕಳೊಂದಿಗೆ ಪರಿಸರ ಹಾಗೂ ಹಸಿರು ದಿನ ಆಚರಣೆ

ಬಜ್ಪೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಿಂಡರ್ ಗಾರ್ಟನ್ (ಕೆ.ಜಿ.) ವಿಭಾಗದ ಮಕ್ಕಳೊಂದಿಗೆ ಪರಿಸರ ದಿನ ಹಾಗೂ ಹಸಿರು ದಿನವನ್ನು ಜುಲಾಯ್ 21ರಂದು ಸೋಮವಾರ ಉತ್ಸಾಹಭರಿತವಾಗಿ ಆಚರಿಸಲಾಯಿತು.

ಈ ವಿಶೇಷ ದಿನದ ಅಂಗವಾಗಿ ಮಕ್ಕಳು ಹಸಿರು ಬಟ್ಟೆ ಧರಿಸಿ, ಹಸಿರು ಸಸ್ಯಗಳನ್ನು ನೆಟ್ಟು ಪರಿಸರದ ಮಹತ್ವವನ್ನು ಅರಿತುಕೊಂಡರು. ಕಾರ್ಯಕ್ರಮದ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಚೈತ್ರರವರು ಮಾತನಾಡಿ, “ಪರಿಸರವನ್ನು ಉಳಿಸುವುದು ಮುಂದಿನ ಪೀಳಿಗೆಗೆ ಉತ್ತಮ ಭವಿಷ್ಯ ಕಟ್ಟುವ ಮೊದಲ ಹೆಜ್ಜೆ. ಇಂತಹ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿ ಪರಿಸರ ಅರಿವು ಮೂಡುವುದು ಆಶಾಸ್ಪದವಾಗಿದೆ” ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

ಶಾಲಾ ಮುಖ್ಯ ಶಿಕ್ಷಕಿ ವಂದನೀಯ ಭಗಿನಿ ವೀಣಾ ಡಿಸೋಜರವರು ಮಕ್ಕಳಿಗೆ ಪರಿಸರ ಸಂರಕ್ಷಣೆ, ಗಿಡಗಳ ಮಹತ್ವ ಮತ್ತು ಪ್ರಕೃತಿಯ ಕುರಿತಾದ ವಿಷಯದ ಬಗ್ಗೆ ತಿಳಿವು ನೀಡಿದರು. ವಿವಿಧ ಚಟುವಟಿಕೆಗಳು ಮತ್ತು ನೃತ್ಯಗಳ ಮೂಲಕ ಮಕ್ಕಳು ತಮ್ಮ ಸೃಜನ ಶೀಲತೆಯನ್ನು ಪ್ರದರ್ಶಿಸಿದರು. ಮುಖ್ಯ ಶಿಕ್ಷಕರು ನೀಡಿದ ಚಟುವಟಿಕೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಬಹುಮಾಗಳನ್ನು ಕೊಟ್ಟು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. ವಿದ್ಯಾರ್ಥಿಗಳು ಹಾಗೂ ಕೆ.ಜಿ. ಶಿಕ್ಷಕರು ಈ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.

You may also like

News

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಡಳಿತ ಮಂಡಳಿ ಚುನಾವಣೆ 2025-28

ನವಂಬರ್ 9ರಂದು ನಾಳೆ ಜಿದ್ದಾಜಿದ್ದಿನ ಹೋರಾಟಕ್ಕೆ ಅಖಾಡ ಸಿದ್ಧ ಘಟಾನುಘಟಿಗಳ ನಡುವೆ ನಡೆಯಲಿದೆ ಫೈಟ್ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ದಕ್ಷಿಣ ಕನ್ನಡ ಜಿಲ್ಲಾ ಘಟಕದ
News

ಸೈಂಟ್ ತೆರೆಸಾ ಆಫ್ ಲಿಶುಕ್ಸ್ ರವರ ಸಂತ ಪದವಿಯ ಶತಮಾನೋತ್ಸವ

ನಾಳೆ ನವೆಂಬರ್ 9ರಂದು ಬೆಂದೂರ್ ಚರ್ಚ್ ಇಲ್ಲಿ ದಿವ್ಯ ಬಲಿಪೂಜೆ   ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾರವರ ನೇತೃತ್ವ ಸೈಂಟ್ ತೆರೆಸಾ ಆಫ್

You cannot copy content of this page