December 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಯುವ ವಕೀಲೆ ರಾಜಶ್ರೀ ಪೂಜಾರಿ ನಿಧನ

ಕಳೆದ ಎರಡು ವರ್ಷಗಳಿಂದ ಮಂಗಳೂರಿನಲ್ಲಿ ವಕೀಲೆಯಾಗಿ ವೃತ್ತಿ ನಿರ್ವಹಿಸುತ್ತಿದ್ದ ಬಹುಮುಖ ಪ್ರತಿಭೆಯುಳ್ಳ ಯುವ ವಕೀಲೆ ರಾಜಶ್ರೀ ಜಯರಾಜ್ ಪೂಜಾರಿಯವರು ಅನಾರೋಗ್ಯದಿಂದ ಇಂದು ಜುಲಾಯ್ 25ರಂದು ಶುಕ್ರವಾರ ವಿಧಿವಶರಾಗಿದ್ದಾರೆ. ತಮ್ಮ ಐದು ವರ್ಷದ 2017 ರಿಂದ 2022 ತನಕ ಕಾನೂನು ಶಿಕ್ಷಣವನ್ನು ಮಂಗಳೂರಿನ SDM ಕಾನೂನು ಕಾಲೇಜಿನಲ್ಲಿ ಪಡೆದುಕೊಂಡಿದ್ದರು.

ಹವ್ಯಾಸದಲ್ಲಿ ಕವಯಿತ್ರಿ, ಬರಹಗಾರ್ತಿ, ಲೇಖಕಿ, ಯುವಸಾಹಿತಿ, ವಾಗ್ಮಿ, ನಿರೂಪಕಿ, ಕಥಾವಾಚಕಿ, ಹಿನ್ನೆಲೆ ಧ್ವನಿ ಕಲಾವಿದೆ, ಯೋಗಪಟು, ರಂಗಭೂಮಿ ಕಲಾವಿದೆ, ಹವ್ಯಾಸಿ ಪ್ರವಾಸಿ, ಪುಸ್ತಕ ಪ್ರೇಮಿಯಾಗಿ ಹೀಗೆ ಹತ್ತು ಹಲವು ವಿಭಿನ್ನ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು. ರಾಜಶ್ರಿಯವರು ಬರೆದ ಅನೇಕ ಕತೆ, ಕವಿತೆ, ಲೇಖನ, ವ್ಯಕ್ತಿ ಪರಿಚಯ, ಪ್ರಬಂಧಗಳು ಇತ್ಯಾದಿ ಉದಯವಾಣಿ, ವಿಜಯವಾಣಿ, ಜಯಕಿರಣ, ವಿಶ್ವವಾಣಿ, ತುಳುನಾಡು ವಾರ್ತೆ, ಪ್ರಜಾವಾಣಿ ಮತ್ತು ಬುಕ್‌ ಬ್ರಹ್ಮ ವೆಬ್ ಸೈಟ್ ಹೀಗೆ ನಾಡಿನ ಅನೇಕ ದಿನಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.

 

You may also like

News

ಮಂಗಳೂರಿನ ಆಯುಷ್ ಇಲಾಖೆಯ ಅವಧಿ ಮೀರಿದ ಔಷಧ ಅಕ್ರಮ—ಸರ್ಕಾರದ ನಿರ್ಲಕ್ಷ್ಯಕ್ಕೆ ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ರೋಶ

ಮಂಗಳೂರಿನ ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧಿಗಳನ್ನು ಪೂರೈಕೆ ಮಾಡಿ ರೋಗಿಗಳ ಜೀವದೊಂದಿಗೆ ಆಟವಾಡಿದ ಗಂಭೀರ ಅಕ್ರಮದ ಕುರಿತಾಗಿ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಶಾಸಕ ವೇದವ್ಯಾಸ ಕಾಮತ್
News

ಪುತ್ತೂರಿಗೆ ಶಾಸಕ ಅಶೋಕ್ ರೈ ಕನಸು ನನಸಾದಂತೆ — ರೂಪಾಯಿ 5 ಕೋಟಿ ವೆಚ್ಚದ ಹೊಸ ತಾಲೂಕು ಪಂಚಾಯತ್ ಕಟ್ಟಡಕ್ಕೆ ನಾಳೆ ಡಿಸೆಂಬರ್ 13ರಂದು ಶಿಲಾನ್ಯಾಸ

ಪುತ್ತೂರಿನ ಅಭಿವೃದ್ಧಿ ಕನಸುಗಳು ಒಂದೊಂದಾಗಿ ಸಫಲವಾಗುತ್ತಿವೆ. ಹಳೆಯ ಮತ್ತು ಅಪರಿಹಾರ್ಯವಾಗಿರುವ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪುತ್ತೂರು ತಾಲೂಕು ಪಂಚಾಯತ್ ಕಚೇರಿಗೆ ಹೊಸ ಕಟ್ಟಡದ ಅಗತ್ಯವನ್ನು ಆಗಲೇ ಗುರುತಿಸಿದ್ದ ಶಾಸಕರಾದ

You cannot copy content of this page