July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸರಕಾರಿ ಜಮೀನಿನಲ್ಲಿ ಅಕ್ರಮ ಹೋಲೋ ಬ್ಲಾಕ್ ಕಂಪೆನಿ ನಿರ್ಮಾಣ ಆರೋಪ

ಸರಕಾರಿ ಜಮೀನಿನಲ್ಲಿ ಅಕ್ರಮವಾಗಿ ಶೆಡ್ ನಿರ್ಮಿಸಿ ತಾತ್ಕಾಲಿಕ ನೆಲೆಯಲ್ಲಿ ವಿದ್ಯುತ್ ಸಂಪರ್ಕ ಪಡೆದು ಅಕ್ರಮವಾಗಿ ನಡೆಯುತ್ತಿದ್ದ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಸಾಲೆತ್ತೂರು ಅಗರಿ ಎಂಬಲ್ಲಿನ ಹೋಲೋ ಬ್ಲಾಕ್ ಕಂಪೆನಿ ಮೇಲೆ ಕಂದಾಯ, ಮೆಸ್ಕಾಂ ಮತ್ತು ಗ್ರಾಮ ಪಂಚಾಯತ್ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಮಂಗಳೂರು ಸಹಾಯಕ ಆಯುಕ್ತರಾದ ಹರ್ಷವರ್ಧನ್ ಇವರ ನಿರ್ದೇಶನದ ಮೇಲೆ ಕಂದಾಯ, ಪಂಚಾಯತ್ ಅಧಿಕಾರಿಗಳ ತಂಡ ಜಂಟಿ ದಾಳಿ ನಡೆಸಿದೆ.

ಕಳೆದ ಎಂಟು ವರ್ಷಗಳಿಂದ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಸಾಲೆತ್ತೂರು ಅಗರಿ ಎಂಬಲ್ಲಿನ ಸರ್ವೇ ನಂಬರ್ 512/6 ರ ಸರ್ಕಾರಿ ಜಮೀನಿನಲ್ಲಿ ಕರಾಯಿ ಅಬ್ದುಲ್ ಕರೀಂ ಎಂಬವರು ಅಕ್ರಮವಾಗಿ ಶೆಡ್ ನಿರ್ಮಿಸಿ ಹೋಲೋ ಬ್ಲಾಕ್ ಕಂಪನಿ ನಡೆಸಿದ್ದಾರೆ. ಜಮೀನಿಗೆ ಯಾವುದೇ ದಾಖಲೆಗಳಿಲ್ಲದಿದ್ದರೂ ಮೆಸ್ಕಾಂ ಇಲಾಖೆಯ ಅಧಿಕಾರಿಗಳು ತಾತ್ಕಾಲಿಕ ನೆಲೆಯಲ್ಲಿ ವಿದ್ಯುತ್ ನೀಡಿದ್ದಾರೆ. ಈ ಬಗ್ಗೆ ಕರಾಯಿ ಖಾಲಿದ್ ಎಂಬವರು ನೀಡಿದ ದೂರಿನನ್ವಯ ಅಧಿಕಾರಿಗಳ ತಂಡ ದಾಳಿ ನಡೆದಿದೆ.

ವಿಟ್ಲ ಹೋಬಳಿ ಕಂದಾಯ ನಿರೀಕ್ಷಕ ರವಿ ಎಂ.ಎನ್., ಕೊಳ್ನಾಡು ಗ್ರಾಮ ಆಡಳಿತಾಧಿಕಾರಿ ಕರಿಬಸಪ್ಪ, ಪಿ.ಡಿ.ಒ. ಲಾವಣ್ಯ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

You may also like

News

ಮಂಗಳೂರಿನ ಸಂದೇಶ ಫೌಂಡೇಶನ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಹೊಸ ಅಧ್ಯಾಯ

‘Mangalore IAS – A School for Civil Services’ಗೆ ಚಾಲನೆ ನೀಡಿದ ಬಳ್ಳಾರಿ ಧರ್ಮಕ್ಷೇತ್ರದ ಬಿಷಪ್ ಹೆನ್ರಿ ಡಿಸೋಜ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ
News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು

You cannot copy content of this page