August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸರಕಾರಿ ಜಮೀನಿನಲ್ಲಿ ಅಕ್ರಮ ಹೋಲೋ ಬ್ಲಾಕ್ ಕಂಪೆನಿ ನಿರ್ಮಾಣ ಆರೋಪ

ಸರಕಾರಿ ಜಮೀನಿನಲ್ಲಿ ಅಕ್ರಮವಾಗಿ ಶೆಡ್ ನಿರ್ಮಿಸಿ ತಾತ್ಕಾಲಿಕ ನೆಲೆಯಲ್ಲಿ ವಿದ್ಯುತ್ ಸಂಪರ್ಕ ಪಡೆದು ಅಕ್ರಮವಾಗಿ ನಡೆಯುತ್ತಿದ್ದ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಸಾಲೆತ್ತೂರು ಅಗರಿ ಎಂಬಲ್ಲಿನ ಹೋಲೋ ಬ್ಲಾಕ್ ಕಂಪೆನಿ ಮೇಲೆ ಕಂದಾಯ, ಮೆಸ್ಕಾಂ ಮತ್ತು ಗ್ರಾಮ ಪಂಚಾಯತ್ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಮಂಗಳೂರು ಸಹಾಯಕ ಆಯುಕ್ತರಾದ ಹರ್ಷವರ್ಧನ್ ಇವರ ನಿರ್ದೇಶನದ ಮೇಲೆ ಕಂದಾಯ, ಪಂಚಾಯತ್ ಅಧಿಕಾರಿಗಳ ತಂಡ ಜಂಟಿ ದಾಳಿ ನಡೆಸಿದೆ.

ಕಳೆದ ಎಂಟು ವರ್ಷಗಳಿಂದ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಸಾಲೆತ್ತೂರು ಅಗರಿ ಎಂಬಲ್ಲಿನ ಸರ್ವೇ ನಂಬರ್ 512/6 ರ ಸರ್ಕಾರಿ ಜಮೀನಿನಲ್ಲಿ ಕರಾಯಿ ಅಬ್ದುಲ್ ಕರೀಂ ಎಂಬವರು ಅಕ್ರಮವಾಗಿ ಶೆಡ್ ನಿರ್ಮಿಸಿ ಹೋಲೋ ಬ್ಲಾಕ್ ಕಂಪನಿ ನಡೆಸಿದ್ದಾರೆ. ಜಮೀನಿಗೆ ಯಾವುದೇ ದಾಖಲೆಗಳಿಲ್ಲದಿದ್ದರೂ ಮೆಸ್ಕಾಂ ಇಲಾಖೆಯ ಅಧಿಕಾರಿಗಳು ತಾತ್ಕಾಲಿಕ ನೆಲೆಯಲ್ಲಿ ವಿದ್ಯುತ್ ನೀಡಿದ್ದಾರೆ. ಈ ಬಗ್ಗೆ ಕರಾಯಿ ಖಾಲಿದ್ ಎಂಬವರು ನೀಡಿದ ದೂರಿನನ್ವಯ ಅಧಿಕಾರಿಗಳ ತಂಡ ದಾಳಿ ನಡೆದಿದೆ.

ವಿಟ್ಲ ಹೋಬಳಿ ಕಂದಾಯ ನಿರೀಕ್ಷಕ ರವಿ ಎಂ.ಎನ್., ಕೊಳ್ನಾಡು ಗ್ರಾಮ ಆಡಳಿತಾಧಿಕಾರಿ ಕರಿಬಸಪ್ಪ, ಪಿ.ಡಿ.ಒ. ಲಾವಣ್ಯ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

You may also like

News

ಧರ್ಮಸ್ಥಳದಲ್ಲಿ ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ

ಆಯುರ್ವೇದದಿಂದ ಪಂಚೇಂದ್ರಿಯಗಳ ಬಲವರ್ಧನೆ, ಆರೋಗ್ಯಭಾಗ್ಯ ಸಾಧ್ಯ – ವೈದ್ಯ ಮನೀಷಾ ಕೋಟೆಕಾರ್ ಉಜಿರೆ: ಸಾವಿರಾರು ವರ್ಷಗಳ ಪಾರಂಪರಿಕ ಪರಂಪರೆಯನ್ನು ಹೊಂದಿರುವ ಆಯುರ್ವೇದ ಪದ್ಧತಿಯ ಮೂಲಕ ದೇಹದ ಪಂಚೇಂದ್ರಿಯಗಳನ್ನು
News

ಸಿಬ್ಬಂದಿ ಕೊರತೆ ನೀಗಿಸಲು ಮೆಸ್ಕಾಂಗೆ 395 ಪವರ್‌ಮ್ಯಾನ್‌ಗಳು – ಅಧ್ಯಕ್ಷ ಕೆ. ಹರೀಶ್ ಕುಮಾರ್

ಮಂಗಳೂರು: ವಿದ್ಯುತ್ ಸರಬರಾಜು ಮತ್ತು ನಿರ್ವಹಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮೆಸ್ಕಾಂ ವ್ಯಾಪ್ತಿಗೆ 395 ಹೊಸ ಪವರ್‌ಮ್ಯಾನ್‌ಗಳನ್ನು ನೇಮಕ ಮಾಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.

You cannot copy content of this page