February 14, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನೀರುಮಾರ್ಗದ ಕೆಸರು ಗದ್ದೆಯಲ್ಲಿ ಮಾನ್ಸೂನ್ ಸಂಭ್ರಮ  

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತರ ಪತ್ರಕರ್ತರ ಸಂಘ, ಪ್ರೆಸ್ ಕ್ಲಬ್ ಮಂಗಳೂರು, ಪತ್ರಿಕಾಭವನ ಟ್ರಸ್ಟ್ ಹಾಗೂ ಶ್ರೀ ವಿಘ್ನೇಶ್ವರ ಗ್ರಾಮೀಣಾಭಿವೃದ್ಧಿ ಸೇವಾ ಸಮಿತಿ ಪಡು ಸಹಭಾಗಿತ್ವದಲ್ಲಿ ಪತ್ರಕರ್ತರ ತಾಲೂಕು ಸಂಘಗಳ ಒಕ್ಕೂಟದ ಸಹಕಾರದೊಂದಿಗೆ ಜುಲಾಯಿ 27ರಂದು ರವಿವಾರ ನೀರುಮಾರ್ಗ ಪಡು ಬದಿನಡಿ ಸಮೀಪದ ಕೆಸರುಗದ್ದೆಯಲ್ಲಿ ಮಾನ್ಸೂನ್ ಸಂಭ್ರಮ ಕಾರ್ಯಕ್ರಮ ನಡೆಯಿತು.

ವಿಡಿಯೋ ಜರ್ನಲಿಸ್ಟ್ ದಿ. ನಾಗೇಶ್ ಪಡು ವೇದಿಕೆಯಲ್ಲಿ ಬೆಳಗ್ಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು. ಕೆಸರು ಗದ್ದೆಯಲ್ಲಿ ವಿವಿಧ ಸ್ಪರ್ಧೆಯಲ್ಲಿ ಪತ್ರಕರ್ತರು, ವಿದ್ಯಾರ್ಥಿಗಳು ಗ್ರಾಮಸ್ಥರು ಭಾಗವಹಿಸಿದರು. ಈ ಸಂದರ್ಭದಲ್ಲಿ ವಿಶೇಷವಾಗಿ ತುಳುನಾಡಿನ ತಿಂಡಿ- ತಿನಸುಗಳು ವಿಶೇಷ ಆಕರ್ಷಣೆಯಾಗಿತ್ತು. ಪ್ರಗತಿಪರ ಕೃಷಿಕ ಪದ್ಮನಾಭ ಕೋಟ್ಯಾನ್, ಕೆಸರು ಗದ್ದೆ ಕ್ರೀಡಾಕೂಟವನ್ನು ಉದ್ಘಾಟಿ ಸಿದರು‌. ನೀರುಮಾರ್ಗ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಧರ ಚಿಕ್ಕ ಬೆಟ್ಟು ಅಧ್ಯಕ್ಷತೆ ವಹಿಸಿದ್ದರು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ವಿವಿಧ ಸ್ಪರ್ಧೆಗಳಿಗೆ ಚಾಲನೆ ನೀಡಿದರು. ಪಡು ಶ್ರೀ ವಿಘ್ನೇಶ್ವರ ಗ್ರಾಮೀಣಾಭಿವೃದ್ಧಿ ಸೇವಾಸಮಿತಿಯ ಅಧ್ಯಕ್ಷ ಜಯಂತ್ ಅಮೀನ್ ಕೋರೆಟ್ಟು ವೈಯಕ್ತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿದರು.

ಮುಖ್ಯ ಅತಿಥಿಗಳಾಗಿ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಶುಭ ಹಾರೈಸಿದರು. ರಾಜ್ ಕುಮಾರ್ ಶೆಟ್ಟಿ ತಿರುವೈಲು, ಸತೀಶ್ ಅಂಚನ್ ಕಂಪ, ಸಂತೋಷ್ ಕುಮಾರ್, ಗೋಪಾಲ ಕೃಷ್ಣ ಭಂಡಾರಿ ಪಡು, ಕುಂಞಣ್ಣ ಶೆಟ್ಟಿ ಕೋರೆಟ್ಟುಗುತ್ತು, ತಿಲಕ ರಾಜ್ ಕೋರಟ್ಟು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ. ಎನ್., ಮಂಗಳೂರು ಪ್ರೆಸ್ ಕ್ಲಬ್ ನ ಉಪಾಧ್ಯಕ್ಷ ಆರಿಫ್ ಪಡುಬಿದ್ರೆ, ಕಾರ್ಯಕಾರಿ ಸಮಿತಿ ಸದಸ್ಯ ವಿಲ್ಫ್ರೆಡ್ ಡಿಸೋಜ ಮೊದಲಾದವರು ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಕಾರ್ಯದರ್ಶಿ ವಿಜಯ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

You may also like

News

ಚರ್ಚ್ ಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡಿ; ಇದು ಭಾಷಾ ವಿರೋಧವಲ್ಲ, ಕನ್ನಡಿಗರ ಹಕ್ಕಿನ ಪರ ಧ್ವನಿ – ಕ್ರೈಸ್ತ ಸಂಘಟನೆ ಮುಖ್ಯಸ್ಥ ಸ್ಟ್ಯಾನಿ ಪಿಂಟೋ ಬೆಂಗಳೂರು ಸ್ಪಷ್ಟನೆ

ತಪ್ಪು ಮಾಹಿತಿಯನ್ನು ನಂಬಬೇಡಿ; ಸಮುದಾಯದ ಹಿತಕ್ಕಾಗಿ ಒಗ್ಗೂಡಿ ಎಂದು ಕರೆ   ಮಂಗಳೂರು: “ಕರ್ನಾಟಕದ ಚರ್ಚ್ ಗಳಲ್ಲಿ ಮತ್ತು ಕ್ರೈಸ್ತ ಸಂಸ್ಥೆಗಳಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ
News

Mangalore’s First Stellar M22 Commissioned at Father Muller Medical College Hospital

A new milestone in advanced dermatological care was marked on 13 February at Father Muller Medical College Hospital with the

You cannot copy content of this page