July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

170ಗಂಟೆಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶನ ನೀಡಿ ಗೋಲ್ಡನ್‌ ಬುಕ್‌ ಆಫ್‌ ವರ್ಲ್ಡ್ ನಲ್ಲಿ ಹೆಸರು ದಾಖಲಿಸಿದ  ಮಂಗಳೂರಿನ ರೆಮೋನಾ ಪಿರೇರಾ

ಕಥೊಲಿಕ್ ಸಭಾ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ ಕೇಂದ್ರೀಯ ಅಧ್ಯಕ್ಷ ಸಂತೋಷ್ ಡಿಸೋಜ ಬಜ್ಪೆ

ಏಳು ದಿನಗಳ ಕಾಲ ನಿರಂತರ ನೃತ್ಯದೊಂದಿಗೆ 170 ಗಂಟೆ ಸತತವಾಗಿ ಭರತನಾಟ್ಯ ಪ್ರದರ್ಶನ ನೀಡಿ ಗೋಲ್ಡನ್‌ ಬುಕ್‌ ಆಫ್‌ ವರ್ಲ್ಡ್ ನಲ್ಲಿ ಹೆಸರು ದಾಖಲಿಸಿದ ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ಅಂತಿಮ ಬಿ.ಎ. ವಿದ್ಯಾರ್ಥಿನಿ ರೆಮೋನಾ ಎವೆಟ್‌ ಪಿರೇರಾರವರನ್ನು ಕಥೊಲಿಕ್‌ ಸಭಾ ಮಂಗ್ಳುರ್ ಪ್ರದೇಶ್‌ (ರಿ.) ಅಭಿನಂದನೆಗಳನ್ನು ಸಲ್ಲಿಸಿದೆ.

ಜುಲಾಯಿ 21ರ ಸೋಮವಾರ ಬೆಳಗ್ಗಿನಿಂದ ಮೊದಲ್ಗೊಂಡು ಜುಲಾಯಿ 28ರ ಸೋಮವಾರ ಸಂಜೆಯ ತನಕ ಏಳು ದಿನ ಹಗಲು ರಾತ್ರಿ ನಿರಂತರವಾಗಿ ಭರತನಾಟ್ಯದ ವಿವಿಧ ಪ್ರಕಾರಗಳಾದ ಅಲೆರಿಪ್ಪು, ಜತಿಸ್ವರಂ, ಶಬ್ದಂ, ವರ್ಣಂ, ಪದಂ, ತಿಲ್ಲಾನಗಳ ಜತೆಗೆ ಸೆಮಿಕ್ಲಾಸಿಕ್, ದೇವರ ನಾಮಗಳಿಗೆ ಭರತನಾಟ್ಯ ಪ್ರದರ್ಶನ ನೀಡಿದ ರೆಮೋನಾ ಪಿರೇರಾರವರ ಸಾಧನೆ ಅಸಾಧಾರಣವಾದುದು. ಈ ಸಾಧನೆ ಎಲ್ಲರಿಗೂ ಮಾದರಿಯಾಗಿದೆ. ಅವರು ಈ ನಾಟ್ಯ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಿ ಉತ್ತುಂಗಕ್ಕೇರಲಿ ಎಂದು ಕಥೊಲಿಕ್‌ ಸಭಾ ಶುಭ ಹಾರೈಸುತ್ತದೆ. ಜತೆಗೆ ರೆಮೊನಾರವರಿಗೆ ಈ ಸಾಧನೆ ಮಾಡಲು ಅವಕಾಶ ಮಾಡಿಕೊಟ್ಟ ಮಂಗಳೂರಿನ ಸೈಂಟ್ ಅಲೋಶಿಯಸ್‌ ವಿಶ್ವ ವಿದ್ಯಾನಿಲಯ ಪರಿಗಣಿತ ಹಾಗೂ ನೃತ್ಯ ಗುರಿ ವಿದ್ಯಾ ಮುರಳೀಧರ್‌ ರವರಿಗೂ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಕೇಂದ್ರೀಯ ಅಧ್ಯಕ್ಷ ಸಂತೋಷ್ ಡಿಸೋಜ ಬಜ್ಪೆ ಮತ್ತು ಪದಾಧಿಕಾರಿಗಳು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page