February 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

170ಗಂಟೆಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶನ ನೀಡಿ ಗೋಲ್ಡನ್‌ ಬುಕ್‌ ಆಫ್‌ ವರ್ಲ್ಡ್ ನಲ್ಲಿ ಹೆಸರು ದಾಖಲಿಸಿದ  ಮಂಗಳೂರಿನ ರೆಮೋನಾ ಪಿರೇರಾ

ಕಥೊಲಿಕ್ ಸಭಾ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ ಕೇಂದ್ರೀಯ ಅಧ್ಯಕ್ಷ ಸಂತೋಷ್ ಡಿಸೋಜ ಬಜ್ಪೆ

ಏಳು ದಿನಗಳ ಕಾಲ ನಿರಂತರ ನೃತ್ಯದೊಂದಿಗೆ 170 ಗಂಟೆ ಸತತವಾಗಿ ಭರತನಾಟ್ಯ ಪ್ರದರ್ಶನ ನೀಡಿ ಗೋಲ್ಡನ್‌ ಬುಕ್‌ ಆಫ್‌ ವರ್ಲ್ಡ್ ನಲ್ಲಿ ಹೆಸರು ದಾಖಲಿಸಿದ ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ಅಂತಿಮ ಬಿ.ಎ. ವಿದ್ಯಾರ್ಥಿನಿ ರೆಮೋನಾ ಎವೆಟ್‌ ಪಿರೇರಾರವರನ್ನು ಕಥೊಲಿಕ್‌ ಸಭಾ ಮಂಗ್ಳುರ್ ಪ್ರದೇಶ್‌ (ರಿ.) ಅಭಿನಂದನೆಗಳನ್ನು ಸಲ್ಲಿಸಿದೆ.

ಜುಲಾಯಿ 21ರ ಸೋಮವಾರ ಬೆಳಗ್ಗಿನಿಂದ ಮೊದಲ್ಗೊಂಡು ಜುಲಾಯಿ 28ರ ಸೋಮವಾರ ಸಂಜೆಯ ತನಕ ಏಳು ದಿನ ಹಗಲು ರಾತ್ರಿ ನಿರಂತರವಾಗಿ ಭರತನಾಟ್ಯದ ವಿವಿಧ ಪ್ರಕಾರಗಳಾದ ಅಲೆರಿಪ್ಪು, ಜತಿಸ್ವರಂ, ಶಬ್ದಂ, ವರ್ಣಂ, ಪದಂ, ತಿಲ್ಲಾನಗಳ ಜತೆಗೆ ಸೆಮಿಕ್ಲಾಸಿಕ್, ದೇವರ ನಾಮಗಳಿಗೆ ಭರತನಾಟ್ಯ ಪ್ರದರ್ಶನ ನೀಡಿದ ರೆಮೋನಾ ಪಿರೇರಾರವರ ಸಾಧನೆ ಅಸಾಧಾರಣವಾದುದು. ಈ ಸಾಧನೆ ಎಲ್ಲರಿಗೂ ಮಾದರಿಯಾಗಿದೆ. ಅವರು ಈ ನಾಟ್ಯ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಿ ಉತ್ತುಂಗಕ್ಕೇರಲಿ ಎಂದು ಕಥೊಲಿಕ್‌ ಸಭಾ ಶುಭ ಹಾರೈಸುತ್ತದೆ. ಜತೆಗೆ ರೆಮೊನಾರವರಿಗೆ ಈ ಸಾಧನೆ ಮಾಡಲು ಅವಕಾಶ ಮಾಡಿಕೊಟ್ಟ ಮಂಗಳೂರಿನ ಸೈಂಟ್ ಅಲೋಶಿಯಸ್‌ ವಿಶ್ವ ವಿದ್ಯಾನಿಲಯ ಪರಿಗಣಿತ ಹಾಗೂ ನೃತ್ಯ ಗುರಿ ವಿದ್ಯಾ ಮುರಳೀಧರ್‌ ರವರಿಗೂ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಕೇಂದ್ರೀಯ ಅಧ್ಯಕ್ಷ ಸಂತೋಷ್ ಡಿಸೋಜ ಬಜ್ಪೆ ಮತ್ತು ಪದಾಧಿಕಾರಿಗಳು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

You may also like

News

ದಾಯ್ಜಿವರ್ಲ್ಡ್@25: ಮಾನವೀಯ ಮೌಲ್ಯಗಳ ಮಾಧ್ಯಮ ಕ್ರಾಂತಿ – ಅನಿವಾಸಿ ಉದ್ಯಮಿ ಡಾ. ರೊನಾಲ್ಡ್ ಕೊಲಾಸೊ ಶ್ಲಾಘನೆ

ಮಂಗಳೂರು: “ಕೇವಲ ಸುದ್ದಿ ಪ್ರಸಾರ ಮಾಡುವುದಷ್ಟೇ ಅಲ್ಲದೆ, ಸಂಕಷ್ಟದಲ್ಲಿರುವವರಿಗೆ ನೆರವಾಗುವ ಮೂಲಕ ‘ ದಾಯ್ಜಿವರ್ಲ್ಡ್ ‘ ಮಾಧ್ಯಮ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಮಾಡಿದೆ,” ಎಂದು ಅನಿವಾಸಿ ಭಾರತೀಯ
News

ಮಂಗಳೂರಿನಲ್ಲಿ ಸಂತ ಆಂತೋನಿ ಪುಣ್ಯ ಅವಶೇಷಗಳ ಹಬ್ಬದ ಭವ್ಯ ಆಚರಣೆ

ನಮ್ಮ ಮಾತುಗಳು ಇತರರಿಗೆ ನೋವು ನೀಡುವ ಬದಲು ಭರವಸೆ ಮತ್ತು ಸಾಂತ್ವನ ನೀಡುವಂತಿರಲಿ – ನಿವೃತ್ತ ಆರ್ಚ್ ಬಿಷಪ್ ಡಾ| ಬರ್ನಾರ್ಡ್ ಮೊರಾಸ್ ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ

You cannot copy content of this page