July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಛತ್ತೀಸ್‌ಗಢದಲ್ಲಿ ಕೇರಳದ ಇಬ್ಬರು ಕ್ರೈಸ್ತ ಸನ್ಯಾಸಿನಿಯರ ಬಂಧನ

ಕಥೊಲಿಕ್ಸಭಾ ಮಂಗ್ಳುರ್ ಪ್ರದೇಶ್ (ರಿ.) ಖಂಡನೆ

ಛತ್ತೀಸ್‌ಗಢದಲ್ಲಿ ಕೇರಳದ ಕ್ರೈಸ್ತ ಸನ್ಯಾಸಿಯರನ್ನು ಬಂಧಿಸಿರುವ ಘಟನೆಯನ್ನು ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ್‌ (ರಿ.) ತೀವ್ರವಾಗಿ ಖಂಡಿಸುತ್ತದೆ.  ಸಿಸ್ಟರ್ಸ್ ಆಫ್ ಮೇರಿ ಇಮ್ಯಾಕ್ಯುಲೇಟ್ ಆಫ್ ಅಸ್ಸಿಸಿಯ ಸದಸ್ಯರಾದ ತಲಶ್ಶೇರಿಯ ಸಿಸ್ಟರ್ ವಂದನಾ ಫ್ರಾನ್ಸಿಸ್ ಮತ್ತು ಅಂಗಮಾಲಿಯ ಸಿಸ್ಟರ್ ಪ್ರೀತಿ ಮೇರಿ ಎಂಬ ಇಬ್ಬರು ಮಲಯಾಳಿ ಕಥೊಲಿಕ್‌ ಸನ್ಯಾಸಿನಿಯರನ್ನು ಛತ್ತೀಸ್‌ ಗಢದ ನಾರಾಯಣಪುರ ಜಿಲ್ಲೆಯ 18 ರಿಂದ 19 ವರ್ಷದೊಳಗಿನ ಮೂವರು ಮಹಿಳೆಯರು, ಒಬ್ಬ ಯುವಕನೊಂದಿಗೆ ಹೋಗುತ್ತಿದ್ದಾಗ ಬಂಧಿಸಿ ಅವರ ಮೇಲೆ ಭಾರತೀಯ ನ್ಯಾಯ ಸಂಹಿತೆ (BNS) ಮತ್ತು ಛತ್ತೀಸ್‌ಗಢ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ 1968 ರ ಅಡಿಯಲ್ಲಿ ಮಾನವ ಕಳ್ಳಸಾಗಣೆ ಮತ್ತು ಧಾರ್ಮಿಕ ಮತಾಂತರದ ಆರೋಪ ಹೊರಿಸಿರುವುದು ಆಘಾತಕಾರಿ ಸಂಗತಿಯಾಗಿದೆ.

ಮನೆ ಕೆಲಸಕ್ಕಾಗಿ ಮಹಿಳೆಯರನ್ನು ಕರೆದೊಯ್ಯುತ್ತಿದ್ದಾಗ ಅದಕ್ಕೆ ತಡೆಯೊಡ್ಡಿ ಮತಾಂತರ ಆರೋಪ ಹೊರಿಸಿರುವುದು ಖಂಡನೀಯ. ಕ್ರೈಸ್ತ ಸನ್ಯಾಸಿನಿಯರನ್ನು ಕೂಡಲೇ ಬಂಧನದಿಂದ ಬಿಡುಗಡೆ ಮಾಡಬೇಕು. ಹಾಗೂ ಆವರನ್ನು ಬಂಧಿಸಲು ಕಾರಣರಾದವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಥೊಲಿಕ್‌ ಸಭಾ ಮಂಗ್ಳುರ್ ಪ್ರದೇಶ್‌ (ರಿ.) ಇದರ ಕೇಂದ್ರೀಯ ಅಧ್ಯಕ್ಷ ಸಂತೋಷ್‌ ಡಿಸೋಜ ಬಜ್ಪೆ ಮತ್ತು ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page