ಬಂಟ್ವಾಳ ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ ಆರ್.ಎ.ಎಫ್. ಪಡೆಗಳಿಂದ ಪಥ ಸಂಚಲನ
ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆಗಸ್ಟ್ 2ರಂದು ಶನಿವಾರ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಜಂಕ್ಷನ್, ಪಾಣೆಮಂಗಳೂರು, ಶಾಂತಿಯಂಗಡಿ, ಬಿ.ಸಿ. ರೋಡು ಹಾಗೂ ಇತರ ಪ್ರಮುಖ ಪ್ರದೇಶಗಳಲ್ಲಿ ಮತ್ತು ಆಗಸ್ಟ್ 3ರಂದು ಆದಿತ್ಯವಾರ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ, ಕುಂಪಣಮಜಲು ಹಾಗೂ ಇತರ ಪ್ರಮುಖ ಸ್ಥಳಗಳಲ್ಲಿ ಆರ್.ಎ.ಎಫ್. ಪಡೆ ಮತ್ತು ಸ್ಥಳೀಯ ಠಾಣಾ ಅಧಿಕಾರಿ ಹಾಗೂ ಸಿಬ್ಬಂದಿಗಳಿಂದ ಪಥ ಸಂಚಲನ ನಡೆಸಲಾಯಿತು.











