February 18, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರಾಜ್ಯದಲ್ಲಿ ಶಾಲಾ ವೇಳೆಯಲ್ಲಿ ಶಿಕ್ಷಕರು ಮೊಬೈಲ್ ಬಳಸುವಂತಿಲ್ಲ – ಶಿಕ್ಷಣ ಇಲಾಖೆಯ ಮಹತ್ವದ ಆದೇಶ

ರಾಜ್ಯದಲ್ಲಿ ಶಾಲಾ ವೇಳೆಯಲ್ಲಿ ಶಿಕ್ಷಕರ ಮೊಬೈಲ್ ಬಳಕೆಯನ್ನು ನಿಯಂತ್ರಣಕ್ಕೆ ಒಳವಡಿಸುವ ಕುರಿತು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಶಿಕ್ಷಕರು ಕಾರ್ಯನಿರ್ವಹಿಸುತ್ತಿರುವ ಸಂದರ್ಭದಲ್ಲಿ ಶಾಲೆಗಳಲ್ಲಿ ಮೊಬೈಲ್ ಉಪಯೋಗಿಸುತ್ತಿರುವುದರಿಂದ ಬೋಧನಾ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವುದು ತಿಳಿದುಬಂದಿದೆ.

ಶಾಲೆಗಳಲ್ಲಿ ಉತ್ತಮ ವಾತಾವರಣವನ್ನು ಕಲ್ಪಿಸುವ ಸಲುವಾಗಿ ಮೊಬೈಲ್ ಗಳ ಬಳಕೆಯನ್ನು ಉಲ್ಲೇಖಿತ ಆದೇಶಗಳ ರೀವಾ ಈಗಾಗಲೇ ನಿಷೇದಿಸಲಾಗಿರುತ್ತದೆ.
ಶಾಲಾ ಮುಖ್ಯಶಿಕ್ಷಕರಿಗೆ ವಿನಾಯಿತಿ ನೀಡಲಾಗಿದ್ದರೂ ಸಹ ಅವರು ತಮ್ಮ ಬೋಧನಾ ಕಾರ್ಯದ ಅವಧಿಯಲ್ಲಿ ಮೊಬೈಲ್ ಗಳನ್ನು ಬಳಸುವುದನ್ನು ನಿಷೇಧಿಸಿದೆ ಹಾಗೂ ಯಾವುದೇ ಶಾಲೆಗಳಲ್ಲಿ ಶಾಲಾ ವೇಳೆಯಲ್ಲಿ ಮೊಬೈಲ್ ಉಪಯೋಗಿಸುತ್ತಿರುವುದು ಗಮನಕ್ಕೆ ಬಂದಲ್ಲಿ ಅಥವಾ ಈ ಸಂಬಂಧ ದೂರುಗಳು ಬಂದಲ್ಲಿ ಶಾಲೆಯ ಮುಖ್ಯ ಶಿಕ್ಷಕರೇ ಹೊಣೆಗಾರರಾಗುತ್ತಾರೆಂದು ತಿಳಿಸಿದೆ.

ಆದ್ದರಿಂದ, ಶಾಲೆಗಳ ಶಿಸ್ತನ್ನು ಕಾಪಾಡಿ, ವಿದ್ಯಾರ್ಥಿಗಳ ಕಲಿಕೆಗೆ ಅಡ್ಡಿಯಾಗದಂತೆ ಕ್ರಮವಹಿಸುವ ಸಲುವಾಗಿ, ತಾಲೂಕಿನ ಪ್ರತಿಯೊಂದು ಶಾಲೆಯ ಮುಖ್ಯೋಪಾಧ್ಯಾಯರು ತಮ್ಮ ಶಾಲೆಯ ಎಲ್ಲಾ ಶಿಕ್ಷಕರು ಹಾಗೂ ಸಿಬ್ಬಂದಿಗಳು ಮೊಬೈಲ್ ಉಪಯೋಗವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಈ ಕೆಳಗಿನ ಕ್ರಮವನ್ನು ತಕ್ಷಣದಿಂದಲೇ ಅನುಷ್ಠಾನಗೊಳಿಸಲು ತಿಳಿಸಿದೆ.

  1. ಮುಖ್ಯೋಪಾಧ್ಯಾಯರನ್ನು ಹೊರತುಪಡಿಸಿ ಇತರೆ ಎಲ್ಲಾ ಭೋದಕ ಸಿಬ್ಬಂದಿಯು ಪ್ರಾರ್ಥನೆ ಬಳಿಕ ತಮ್ಮ ಮೊಬೈಲನ್ನು ಮುಖ್ಯೋಪಾಧ್ಯಾಯರ ಸುಪರ್ದಿಯಲ್ಲಿ ಹಸ್ತಾಂತರಿಸಬೇಕು.
  2. ತರಗತಿಗಳ ಅವಧಿಯಲ್ಲಿ ಮೊಬೈಲ್ ಬಳಕೆ ನಿಷಿದ್ಧವಾಗಿರಬೇಕು.
  3. ವಿದ್ಯಾರ್ಥಿಗಳಿಗೆ ಹೆಚ್ಚಿನ ಮೊಬೈಲ್ ಬಳಕೆಯಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಲು ಸೂಚಿಸಿದೆ.
    ಈ ಸೂಚನೆಯ ಪ್ರಭಾವದಿಂದ ವಿದ್ಯಾಭ್ಯಾಸದ ಗುಣಮಟ್ಟ ಹೆಚ್ಚಳವಾಗಲಿದೆ ಎಂಬ ನಿರೀಕ್ಷೆಯಿದೆ.

You may also like

News

ಅಧಿಕಾರಕ್ಕಿಂತ ಸಮುದಾಯದ ಹಿತವೇ ಮುಖ್ಯ – MLC ಐವನ್ ಡಿಸೋಜ ಕಾರ್ಯವೈಖರಿಗೆ ಹಿರಿಯ ಪತ್ರಕರ್ತ ಹ್ಯಾರಿ ಡಿಸೋಜ ಬೆಂಗಳೂರು ಮೆಚ್ಚುಗೆ

ಬೆಂಗಳೂರು: ರಾಜಕಾರಣಿಗಳು ಸಾಮಾನ್ಯವಾಗಿ ಅಧಿಕಾರವನ್ನು ಉಳಿಸಿಕೊಳ್ಳಲು ಸ್ವಾರ್ಥದ ರಾಜಕಾರಣ ಮಾಡುವುದು ಸಹಜ. ಆದರೆ, ಫೆಬ್ರವರಿ 17ರಂದು ಮಂಗಳವಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ
News

ಮೆಸ್ಕಾಂ ಗ್ರಾಹಕರ ಸಲಹಾ ಸಮಿತಿ ಸದಸ್ಯರಾಗಿ ಸ್ಟೀವನ್ ಡಿಸೋಜ ಆಯ್ಕೆ

ಮಂಗಳೂರು ವಿದ್ಯುಚ್ಚಕ್ತಿ ಸರಬರಾಜು ಕಂಪನಿ ನಿಯಮಿತ (ಮೆಸ್ಕಾಂ) ವ್ಯಾಪ್ತಿಯ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿ ಚರ್ಚಿಸಿ, ಪರಿಣಾಮಕಾರಿಯಾಗಿ ಪರಿಹರಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮಹತ್ವದ ಹೆಜ್ಜೆ

You cannot copy content of this page