July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮೂಡಬಿದ್ರೆ ಅಲಂಗಾರ್ ಚರ್ಚ್ ಧರ್ಮಗುರುಗಳಾದ ಫಾದರ್ ಮೆಲ್ವಿನ್ ನೊರೊನ್ಹಾರವರಿಗೆ ಮಾತೃವಿಯೋಗ

ಆಗಸ್ಟ್ 10ರಂದು ಆದಿತ್ಯವಾರ ಸಂಜೆ 4:00 ಗಂಟೆಗೆ ತಾಕೊಡೆ ಚರ್ಚ್ ನಲ್ಲಿ ಅಂತ್ಯಕ್ರಿಯೆ

ಮಂಗಳೂರು ಧರ್ಮಕ್ಷೇತ್ರದ ಮೂಡಬಿದ್ರೆ ಅಲಂಗಾರ್ ಚರ್ಚ್ ಧರ್ಮಗುರುಗಳಾದ ವಂದನೀಯ ಫಾದರ್ ಮೆಲ್ವಿನ್ ನೊರೊನ್ಹಾರವರ ತಾಯಿ 79 ವರ್ಷ ಪ್ರಾಯದ ಲೀನಾ ನೊರೊನ್ಹಾರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ತಾಕೊಡೆಯ ದಿವಂಗತ ಪೀಟರ್ ನೊರೊನ್ಹಾರವರ ಪತ್ನಿಯಾಗಿರುವ ಲೀನಾ ನೊರೊನ್ಹಾರವರು ವಂದನೀಯ ಫಾದರ್ ಮೆಲ್ವಿನ್ ನೊರೊನ್ಹಾ ಸಹಿತ ನಾಲ್ವರು ಪುತ್ರರು, ಮೂವರು ಪುತ್ರಿಯರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ಫಾದರ್ ಮೆಲ್ವಿನ್ ನೊರೊನ್ಹಾರವರು ಮಂಗಳೂರು ಧರ್ಮಕ್ಷೇತ್ರದ ಅತ್ಯಂತ ಗೌರವಾನ್ವಿತ ಹಾಗೂ ಪ್ರಖ್ಯಾತ ಪ್ರಭೋದಕರಲ್ಲಿ ಒಬ್ಬರಾಗಿರುತ್ತಾರೆ. ಇವರು ಕಿನ್ನಿಗೋಳಿ, ಉಡುಪಿ, ಕುಲ್ಶೇಕರ, ಬೆಳ್ತಂಗಡಿ, ಮುಡಿಪು ಚರ್ಚ್ ಗಳಲ್ಲಿ ಸಹಾಯಕ ಧರ್ಮಗುರುಗಳಾಗಿ ಹಾಗೂ ಸೂರಿಕುಮೇರು ಬೊರಿಮಾರ್ ಮತ್ತು ಪಕ್ಷಿಕೆರೆ ಚರ್ಚ್ ಗಳಲ್ಲಿ ಪ್ರಧಾನ ಧರ್ಮಗುರುಗಳಾಗಿ ಪ್ರಸ್ತುತ ಮೂಡಬಿದ್ರೆ ಅಲಂಗಾರ್ ಚರ್ಚ್ ನಲ್ಲಿ ಪ್ರಧಾನ ಧರ್ಮಗುರುಗಳಾಗಿರುತ್ತಾರೆ.

ಆಗಸ್ಟ್ 10ರಂದು ಆದಿತ್ಯವಾರ ಸಂಜೆ 3:00 ಗಂಟೆಯಿಂದ ತಾಕೊಡೆಯಲ್ಲಿರುವ ಮನೆಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಳಿಕ 4:00 ಗಂಟೆಗೆ ತಾಕೊಡೆ ಚರ್ಚ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಗಣ್ಯರ ಸಂತಾಪ:

MLC ಐವನ್ ಡಿಸೋಜ, ಮಾಜಿ ಸಚಿವರಾದ ಬಿ. ರಮಾನಾಥ ರೈ, ಕೆ. ಅಭಯಚಂದ್ರ ಜೈನ್, ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಜೆ.ಆರ್. ಲೋಬೊ, ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ, ಶಾಸಕ ಉಮಾನಾಥ ಕೋಟ್ಯಾನ್, ಕರ್ನಾಟಕ ರಾಜ್ಯ ವಾಯುಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಹಾಗೂ ಉದ್ಯಮಿ ಪಿಯುಸ್ ಎಲ್. ರೊಡ್ರಿಗಸ್ ಬಂಟ್ವಾಳ, MCC ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ, ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಕೇಂದ್ರೀಯ ಅಧ್ಯಕ್ಷ ಸಂತೋಷ್ ಡಿಸೋಜ ಬಜ್ಪೆ, AICU ರಾಜಾಧಕ್ಷ ಆಲ್ವಿನ್ ಡಿಸೋಜ ಪಾನೀರ್ ಸಹಿತ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page