July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ

ನ್ಯಾಯಾಲಯದ ವಾರಂಟ್ ಇದ್ದರೂ ಕೂಡ ಎಲ್ಲರ ಕಣ್ಣು ತಪ್ಪಿಸಿ ಓಡಾಡುತ್ತಿರುವ ರಾಯಚೂರು ಮೂಲದ ಆರೋಪಿಯೊಬ್ಬನನ್ನು 4 ವರ್ಷಗಳ ಬಳಿಕ ಕೊಪ್ಪಳ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿದ್ದ ಆರೋಪಿ 35 ವರ್ಷ ಪ್ರಾಯದ ನಾಗರಾಜ್ ನಾರಾಯಣ ನಾಯ್ಕ ನ್ಯಾಯಾಲಯಕ್ಕೆ ಹಾಜರಗಿರಲಿಲ್ಲ, ಈಗ ಕೊನೆಗೆ ಕೊಪ್ಪಳ ಜಿಲ್ಲೆ ಕಾರಟಗಿಯಲ್ಲಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ಈತನ ವಿರುದ್ಧ ಭಟ್ಕಳ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ 2016ರ ಪ್ರಕರಣ ಸಂಖ್ಯೆ 157/2016 ಅಡಿಯಲ್ಲಿ IPC ಸೆಕ್ಷನ್ 457 ಮತ್ತು 380 ಅನ್ವಯ ಆರೋಪ ದಾಖಲಾಗಿತ್ತು. ಈ ಸಂಬಂಧ ಭಟ್ಕಳ ಜಿ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ CC ನಂ. 237/2019 ಕೇಸ್ ನಡೆಯುತ್ತಿದೆ.

ನಾಗರಾಜ್, ತಂದೆ ನಾರಾಯಣ ನಾಯ್ಕ, ಹಳೆಯ ವಿಳಾಸ: ಬೈಂದೂರು, ಉಡುಪಿ ಜಿಲ್ಲೆ – ಇವನು ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು.

Dysp ಮಹೇಶ ಕೆ.ಎಂ. ಮತ್ತು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ ಅರ್ಜುನ ಲಿಂಗಾರೆಡ್ಡಿ ಇವರ ಮಾರ್ಗದರ್ಶನದಲ್ಲಿ CHC 292 ಲೋಕೇಶ್ ನಾಯ್ಕ ಹಾಗೂ CHC 646 ಅರುಣ್ ನಾಯ್ಕ ಎಂಬವರು ಪರಿಶ್ರಮಪೂರ್ವಕ ತನಿಖೆಯ ಮೂಲಕ ಆಗಸ್ಟ್ 09ರಂದು ಶನಿವಾರ ಕಾರಟಗಿಯಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page