April 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳ ತಾಲೂಕು ಕಚೇರಿಗೆ ಲೋಕಾಯುಕ್ತ ದಾಳಿ – ಉಪತಹಶೀಲ್ದಾರ್ ಸಹಿತ ಮೂವರ ವಿರುದ್ಧ ಪ್ರಕರಣ

ಬಂಟ್ವಾಳ ತಾಲೂಕು ಕಚೇರಿಗೆ ಇಂದು ಆಗಸ್ಟ್ 13ರಂದು ಬುಧವಾರ ಮಧ್ಯಾಹ್ನ ಲೋಕಾಯುಕ್ತ ದಾಳಿ ನಡೆದಿದ್ದು, ಉಪತಹಶೀಲ್ದಾರ್ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ತಹಶೀಲ್ದಾರ್ ಪಾತ್ರ ಇದೆಯೇ ಎಂಬುದನ್ನು ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಉಪತಹಶೀಲ್ದಾರ್ ರಾಜೇಶ್ ನಾಯ್ಕ, ಪ್ರಥಮ ದರ್ಜೆ ಸಹಾಯಕ ಸಂತೋಷ್ ಹಾಗೂ ಮಧ್ಯವರ್ತಿ ವಾಮದಪದವು ನಿವಾಸಿ ಗಣೇಶ್ ಇವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ರಾಜೇಶ್ ನಾಯ್ಕ್ – ಉಪ ತಹಶೀಲ್ದಾರ್, ಬಂಟ್ವಾಳ ತಾಲೂಕು

ಸಂತೋಷ್ ಕೇಸ್ ವರ್ಕರ್

ಗಣೇಶ್ ವಾಮದಪದವು ಬ್ರೋಕರ್

ಸಜೀಪಮುನ್ನೂರಿನ ಪುಷ್ಪರಾಜ್ ರವರ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು, ಬಿ.ಸಿ. ರೋಡಿನ ದೇವಸ್ಥಾನವೊಂದರ ಬಳಿ ಮಧ್ಯವರ್ತಿಯ ಮೂಲಕ ಹಣ ವ್ಯವಹಾರ ನಡೆಯುವ ಸಂದರ್ಭದಲ್ಲಿ ಪ್ರಕರಣವನ್ನು ಬೇಧಿಸಲಾಗಿದೆ. ಲೋಕಾಯುಕ್ತ ಎಸ್ಪಿ ಕುಮಾರಚಂದ್ರರವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಡಿವೈಎಸ್ಪಿಗಳಾದ ಗಾನಾ ಪಿ. ಕುಮಾರ್, ಸುರೇಶ್ ಕುಮಾರ್, ಇನ್ಸ್‌ಪೆಕ್ಟರ್ ಚಂದ್ರಶೇಖರ, ಭಾರತಿ ಹಾಗೂ ಸಿಬ್ಬಂದಿ ದಾಳಿ ನಡೆಸಿದೆ.

You may also like

News

ಬಂಟ್ವಾಳದ ತೌಹೀದ್ ಶಾಲೆಗೆ ಕೀರ್ತಿ ತಂದ ಆಭಿದುನ್ನೀಸ – SSLC ಪರೀಕ್ಷೆಯಲ್ಲಿ ಭರ್ಜರಿ ಸಾಧನೆ

ಇತ್ತೀಚೆಗೆ ಪ್ರಕಟಗೊಂಡ ರಾಜ್ಯ ಮಟ್ಟದ SSLC ಪರೀಕ್ಷಾ ಫಲಿತಾಂಶದಲ್ಲಿ ಬಂಟ್ವಾಳದ ತೌಹೀದ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಆಭಿದುನ್ನೀಸ ಎಂ. ಅವರು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ
News

ಪಾಲ್ದನೆ ಚರ್ಚ್‌ನಲ್ಲಿ ವಿದ್ಯಾರ್ಥಿಗಳಿಗೆ ಭವಿಷ್ಯದ ದಾರಿ – ವೃತ್ತಿ ಮಾರ್ಗದರ್ಶನ ಶಿಬಿರ ಯಶಸ್ವಿ

ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ನಂತರ ಸರಿಯಾದ ವೃತ್ತಿಜೀವನವನ್ನು ಆರಿಸಿಕೊಳ್ಳಲು ನೆರವಾಗುವ ನಿಟ್ಟಿನಲ್ಲಿ, ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಪಾಲ್ದನೆಯ ಸಂತ ತೆರೆಸಾ ಚರ್ಚ್‌ನ ಶೈಕ್ಷಣಿಕ ಆಯೋಗದ ವತಿಯಿಂದ ಇತ್ತೀಚೆಗೆ

You cannot copy content of this page