April 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳ ತಾಲೂಕು ಕಚೇರಿಗೆ ಲೋಕಾಯುಕ್ತ ದಾಳಿ – ಉಪತಹಶೀಲ್ದಾರ್ ಸಹಿತ ಮೂವರ ವಿರುದ್ಧ ಪ್ರಕರಣ

ಬಂಟ್ವಾಳ ತಾಲೂಕು ಕಚೇರಿಗೆ ಇಂದು ಆಗಸ್ಟ್ 13ರಂದು ಬುಧವಾರ ಮಧ್ಯಾಹ್ನ ಲೋಕಾಯುಕ್ತ ದಾಳಿ ನಡೆದಿದ್ದು, ಉಪತಹಶೀಲ್ದಾರ್ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ತಹಶೀಲ್ದಾರ್ ಪಾತ್ರ ಇದೆಯೇ ಎಂಬುದನ್ನು ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಉಪತಹಶೀಲ್ದಾರ್ ರಾಜೇಶ್ ನಾಯ್ಕ, ಪ್ರಥಮ ದರ್ಜೆ ಸಹಾಯಕ ಸಂತೋಷ್ ಹಾಗೂ ಮಧ್ಯವರ್ತಿ ವಾಮದಪದವು ನಿವಾಸಿ ಗಣೇಶ್ ಇವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ರಾಜೇಶ್ ನಾಯ್ಕ್ – ಉಪ ತಹಶೀಲ್ದಾರ್, ಬಂಟ್ವಾಳ ತಾಲೂಕು

ಸಂತೋಷ್ ಕೇಸ್ ವರ್ಕರ್

ಗಣೇಶ್ ವಾಮದಪದವು ಬ್ರೋಕರ್

ಸಜೀಪಮುನ್ನೂರಿನ ಪುಷ್ಪರಾಜ್ ರವರ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು, ಬಿ.ಸಿ. ರೋಡಿನ ದೇವಸ್ಥಾನವೊಂದರ ಬಳಿ ಮಧ್ಯವರ್ತಿಯ ಮೂಲಕ ಹಣ ವ್ಯವಹಾರ ನಡೆಯುವ ಸಂದರ್ಭದಲ್ಲಿ ಪ್ರಕರಣವನ್ನು ಬೇಧಿಸಲಾಗಿದೆ. ಲೋಕಾಯುಕ್ತ ಎಸ್ಪಿ ಕುಮಾರಚಂದ್ರರವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಡಿವೈಎಸ್ಪಿಗಳಾದ ಗಾನಾ ಪಿ. ಕುಮಾರ್, ಸುರೇಶ್ ಕುಮಾರ್, ಇನ್ಸ್‌ಪೆಕ್ಟರ್ ಚಂದ್ರಶೇಖರ, ಭಾರತಿ ಹಾಗೂ ಸಿಬ್ಬಂದಿ ದಾಳಿ ನಡೆಸಿದೆ.

You may also like

News

ಪ್ರಖ್ಯಾತ ವಕೀಲರಾದ ಮಹೇಶ್ ಕಜೆ ಅವರ ಪ್ರಬಲ ವಾದವನ್ನು ಎತ್ತಿಹಿಡಿದ ಸುಳ್ಯ ನ್ಯಾಯಾಲಯ – ಆರೋಪಿ ದೋಷಮುಕ್ತ!

ದೀರ್ಘಕಾಲದ ವಿಚಾರಣೆಯ ನಂತರ, ಸೂಕ್ತ ಸಾಕ್ಷ್ಯಾಧಾರಗಳಿಲ್ಲದ ಕಾರಣ ಆರೋಪಿಯನ್ನು ದೋಷಮುಕ್ತಗೊಳಿಸಿ ಸುಳ್ಯ ನ್ಯಾಯಾಲಯವು ಆದೇಶ ಹೊರಡಿಸಿದೆ. ಈ ಮೂಲಕ ಪ್ರಕರಣಕ್ಕೆ ಒಂದು ತಾರ್ಕಿಕ ಅಂತ್ಯ ಸಿಕ್ಕಂತಾಗಿದೆ. ಪ್ರಕರಣದ
News

National Workshop on Low-Cost Moulage Preparation at Father Muller

Father Muller Nursing College Thumbay, in collaboration with the Father Muller Simulation and Skill Centre, units of Father Muller Charitable

You cannot copy content of this page