May 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಾಲ್ದನೆ ಚರ್ಚ್ ನ ಲೀಜನ್ ಆಫ್‌ ಮೇರಿ ಸಂಘಟನೆಯ 9 ನೇ ವಾರ್ಷಿಕೋತ್ಸವ ಆಚರಣೆ

ಪಾಲ್ದನೆಯ ಸಂತ ತೆರೆಸಾ ಚರ್ಚ್ ನ ಲೀಜನ್ ಆಫ್‌ ಮೇರಿ ಸಂಘಟನೆಯ 9ನೇ ವಾರ್ಷಿಕೋತ್ಸವವು ಚರ್ಚ್ ಸಭಾಂಗಣದಲ್ಲಿ ನಡೆಯಿತು. ಚರ್ಚ್‌ನ ಪ್ರಧಾನ ಧರ್ಮಗುರುಗಳಾದ ವಂದನೀಯ ಫಾದರ್ ರಿಚ್ಚರ್ಡ್ ಅಲೋಶಿಯಸ್‌ ಕುವೆಲ್ಲೊರವರು ಅಧ್ಯಕ್ಷತೆ ವಹಿಸಿ ಲೀಜನ್ ಆಫ್‌ ಮೇರಿ ಸಂಘಟನೆಯ ಸದಸ್ಯರು ನಡೆಸುತ್ತಿರುವ ಬಡ ಬಗ್ಗರ ಸೇವೆ, ಅನಾರೋಗ್ಯ ಪೀಡಿತರಿಗೆ ಸಾಂತ್ವನ, ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿನ ಕಾಳಜಿಯನ್ನು ಶ್ಲಾಘಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿದ್ದ ಚರ್ಚ್ ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್‌ ರವರು ಲೀಜನ್ ಆಫ್‌ ಮೇರಿ ಸಂಘಟನೆಯ ಕಾರ್ಯ ಚಟುವಟಿಕೆಗಳನ್ನು ಕೊಂಡಾಡಿದರು. ಸಂಘಟನೆಯ ಅಧ್ಯಕ್ಷೆ ಹೆಲೆನ್ ಲೋಬೊ ಸ್ವಾಗತಿಸಿದರು. ಕಾರ್ಯದರ್ಶಿ ಜೂಡಿ ಲೋಬೊ ವರದಿ ಮಂಡಿಸಿದರು. ಉಪಾಧ್ಯಕ್ಷೆ ಜಾಯ್ಸ್ ಡಿಸೋಜ ವಂದಿಸಿದರು. ಕೋಶಾಧಿಕಾರಿ ಪ್ರೆಸಿಲ್ಲಾ ಪಿರೇರಾ ಪ್ರಾರ್ಥಿಸಿದರು. ಹಿರಿಯ ಸದಸ್ಯೆ ಸ್ಟೆಲ್ಲಾ ಮೊಂತೇರೊರವರ ಸೇವೆಯನ್ನು ಶ್ಲಾಘಿಸಿ ಸನ್ಮಾನಿಸಲಾಯಿತು.

ಚರ್ಚ್ ಪಾಲನಾ ಸಮಿತಿಯ ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಸರ್ವ ಆಯೋಗಗಳ ಸಂಚಾಲಕ ಜೊಸ್ಲಿನ್ ಲೋಬೊ ಉಪಸ್ಥಿತರಿದ್ದರು. ಸದಸ್ಯೆ ಫ್ಲೋಸಿ ಫೆರ್ನಾಂಡಿಸ್‌ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಭಗಿನಿ ವಿಭಾರವರು ಬಹುಮಾನ ವಿತರಿಸಿದರು.

You may also like

News

Mumbai Archbishop Cardinal Oswald Gracias Offers Solace to Residents of Saint Anthony’s Ashram

MANGALURU: His Eminence Cardinal Oswald Gracias, Archbishop of Mumbai and a member of the Pope’s Council of Cardinals, paid a
News

ಸೂರಿಕುಮೇರು – ಮಾಣಿಯಲ್ಲಿ ಅದ್ದೂರಿ ‘ಅನ್ಫಾಲ್ ರೆಸ್ಟೋರೆಂಟ್’ ಮೇ 3ರಂದು ಉದ್ಘಾಟನೆ

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಭಾಗಿ ಉದ್ಘಾಟನಾ ಭವ್ಯ ಸಮಾರಂಭದಲ್ಲಿ ಮೂವರು ಸಾಧಕರಾದ ಚೇತನ್ ರೈ, ನಾಗರಾಜ್ ಶೆಟ್ಟಿ ಹಾಗೂ ಯಾಸೀರ್ ಕಲ್ಲಡ್ಕ

You cannot copy content of this page