July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಆರ್‌ಟಿಐ ಮಾಹಿತಿ ನೀಡದ್ದಕ್ಕೆ ನಿರ್ಮಿತಿ ಕೇಂದ್ರಕ್ಕೆ ₹50,000 ದಂಡ – ಹೈಕೋರ್ಟ್‌

ರಾಜ್ಯ ಸರ್ಕಾರದ ನಿಯಂತ್ರಣದಲ್ಲಿರುವ ನಿರ್ಮಿತಿ ಕೇಂದ್ರ ಸಾರ್ವಜನಿಕ ಪ್ರಾಧಿಕಾರವಾಗಿದ್ದು, ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ವ್ಯಾಪ್ತಿಗೆ ಬರಲಿದೆ ಎಂದು ಸ್ಪಷ್ಟಪಡಿಸಿರುವ ಹೈಕೋರ್ಟ್, ಆರ್‌ಟಿಐ ಅಡಿ ಮಾಹಿತಿ ಒದಗಿಸಲು ನಿರಾಕರಿಸಿದ್ದ ಚಿತ್ರದುರ್ಗದ ನಿರ್ಮಿತಿ ಕೇಂದ್ರಕ್ಕೆ 50 ಸಾವಿರ ರೂಪಾಯಿ ದಂಡ ವಿಧಿಸಿದೆ.

ಆರ್‌ಟಿಐ ಅಡಿ ಕೋರಿದ್ದ ಮಾಹಿತಿ ಒದಗಿಸುವಂತೆ ಸೂಚಿಸಿ ರಾಜ್ಯ ಮಾಹಿತಿ ಹಕ್ಕು ಆಯೋಗ ಹೊರಡಿಸಿದ್ದ ಆದೇಶ ರದ್ದು ಕೋರಿ ಚಿತ್ರದುರ್ಗದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ರವರ ಪೀಠ, ಮಾಹಿತಿ ಹಕ್ಕು ಕಾಯ್ದೆ ಸೆಕ್ಷನ್‌ 2 (ಎಚ್‌) ರಲ್ಲಿ ತಿಳಿಸಿರುವಂತೆ ಸರ್ಕಾರದ ಆದೇಶದ ಮೂಲಕ ರಚನೆಯಾದ ಸಂಸ್ಥೆ. ಸರ್ಕಾರದಿಂದ ನೇರ ಅಥವಾ ಪರೋಕ್ಷವಾಗಿ ಹಣಕಾಸಿನ ನೆರವು ಪಡೆಯುವ ಯಾವುದೇ ಸಂಸ್ಥೆ ಸಹ ಸಾರ್ವಜನಿಕ ಪ್ರಾಧಿಕಾರವಾಗಲಿದೆ.

ನಿರ್ಮಿತಿ ಕೇಂದ್ರ ಸರ್ಕಾರದಿಂದ ಹಣಕಾಸು ನೆರವು ಪಡೆಯುತ್ತಿದೆ ಹಾಗೂ ಸರ್ಕಾರದ ನಿಯಂತ್ರಣದಲ್ಲಿದೆ. ಆದ್ದರಿಂದ ಕೇಂದ್ರವು ಆರ್‌ಟಿಐ ಅಡಿ ಮಾಹಿತಿ ನೀಡಬೇಕು. ಮಾಹಿತಿ ನೀಡದ ಕ್ರಮ ಒಪ್ಪಲಾಗದು ಎಂದು ತಿಳಿಸಿರುವ ನ್ಯಾಯಪೀಠವು 50 ಸಾವಿರ ರೂಪಾಯಿ ದಂಡದ ಮೊತ್ತವನ್ನು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪಾವತಿಸಲು ಸೂಚಿಸಿದೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page