April 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಭಟ್ಕಳದಲ್ಲಿ ಬಾಲಕಿಯ ಅಪಹರಣ – 6 ಗಂಟೆಯೊಳಗೆ ಪತ್ತೆ

ಪೊಲೀಸರ ತ್ವರಿತ ಕಾರ್ಯಾಚರಣೆಗೆ ಶ್ಲಾಘನೆ

ಭಟ್ಕಳದ ಹನಿಫಾಬಾದ ಪ್ರದೇಶದಿಂದ ಅಪಹರಣಕ್ಕೊಳಗಾದ ಬಾಲಕಿಯನ್ನು ಪೊಲೀಸರು ಕೇವಲ 6 ಗಂಟೆಗಳಲ್ಲೇ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಹಾವೇರಿ ಜಿಲ್ಲೆಯ ಶಿವಪುರ ನಿವಾಸಿ ಆಸೀಫ್ (ತಂದೆ ಜಮಾಲಸಾಬ) ಮತ್ತು ಭಟ್ಕಳದ ಜಾಲಿ ಗ್ರಾಮದ ಟಗ್ಗರಗೋಡ ನಿವಾಸಿ ಮೊಹಮ್ಮದ್ ಮೌಸೀನ (ತಂದೆ ಮೊಹಮ್ಮದ್ ರಿಜ್ವಾನ) ಎಂಬ ಇಬ್ಬರು ಆರೋಪಿಗಳು, ಬುಲೆರೋ ಪಿಕಪ್ ವಾಹನ (ನಂ. KA-47/8198) ಮೂಲಕ 14 ವರ್ಷ 11 ತಿಂಗಳ ಬಾಲಕಿಯನ್ನು ನಿನ್ನೆ ರಾತ್ರಿ ಭಟ್ಕಳದ ಹನಿಪಾಬಾದನಿಂದ ಅಪಹರಿಸಿದ್ದರು.

ಘಟನೆ ಆಗಸ್ಟ್ 14ರಂದು ಗುರುವಾರ ಬೆಳಗ್ಗೆ 11:30ರ ಸುಮಾರಿಗೆ ಸಂಭವಿಸಿತು. ಇದರಿಂದ ಆತಂಕಗೊಂಡ ತಾಯಿ 33 ವರ್ಷ ಪ್ರಾಯದ ಶಮಾದ ಬಾನು  ಭಟ್ಕಳ ಠಾಣೆಗೆ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಕ್ಷಣವೇ ತನಿಖೆ ಆರಂಭಿಸಿ, ಆರೋಪಿಗಳನ್ನು ಪತ್ತೆಹಚ್ಚಿ, ಬಾಲಕಿಯನ್ನು ಸುರಕ್ಷಿತವಾಗಿ ಕುಟುಂಬದ ವಶಕ್ಕೆ ಒಪ್ಪಿಸಿದ್ದಾರೆ. ಪೊಲೀಸರ ಈ ತ್ವರಿತ ಕಾರ್ಯಾಚರಣೆಗೆ ಸ್ಥಳೀಯರಿಂದ ಶ್ಲಾಘನೆ ವ್ಯಕ್ತವಾಗಿದೆ.

You may also like

News

ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ – ಏಪ್ರಿಲ್ 18ಕ್ಕೆ ಪೂರ್ವಭಾವಿ ಸಭೆ ಹಾಗೂ ಸ್ವಾಗತ ಸಮಿತಿ ರಚನೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಘಟಕದ ಸಹಯೋಗದಲ್ಲಿ ಮೇ 12ರಂದು ನಡೆಯಲಿರುವ ‘ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ’ದ ಸಿದ್ಧತೆಗಳು
News

ಮಂಗಳೂರು ಧರ್ಮಕ್ಷೇತ್ರದ ವಿವಿಧ ಧರ್ಮಗುರುಗಳ 2026 ನೇ ಸಾಲಿನ ವರ್ಗಾವಣೆ ಪಟ್ಟಿ ಪ್ರಕಟ

ಬಿಷಪ್ ಪರಮ ಪೂಜ್ಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರ ಆದೇಶ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ

You cannot copy content of this page