April 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

SIT ತನಿಖೆಯ ಭರದಲ್ಲಿ ಧರ್ಮಸ್ಥಳದ ಬಗ್ಯೆ ಅಪಪ್ರಚಾರಕ್ಕೆ ರಾಜ್ಯ ಸರ್ಕಾರ ತಕ್ಷಣ ಕಡಿವಾಣ ಹಾಕಬೇಕು – ಬಿ.ಜೆ.ಪಿ. ರಾಜ್ಯಾಧ್ಯಾಕ್ಷ ಬಿ.ವೈ. ವಿಜಯೇಂದ್ರ

ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದ ಬಗ್ಗೆ ಕಳೆದ ಕೆಲವು ದಿನಗಳಿಂದ ಸಮೂಹ ಮಾಧ್ಯಮಗಳಲ್ಲಿ SIT ತನಿಖೆಯ ನೆಪದಲ್ಲಿ ನಡೆಯುತ್ತಿರುವ ಅಪಪ್ರಚಾರದ ಬಗ್ಗೆ ಸರ್ಕಾರ ತಕ್ಷಣ ಕಡಿವಾಣ ಹಾಕಬೇಕು ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಒತ್ತಾಯಿಸಿದರು. ಅವರು ಆಗಸ್ಟ್ 17ರಂದು ಭಾನುವಾರ ಧರ್ಮಸ್ಥಳಕ್ಕೆ  ಭೆಟಿ ನೀಡಿ, ದೇವರ ದರ್ಶನ ಪಡೆದು, ವಿಶೇಷ ಸೇವೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಧರ್ಮಸ್ಥಳ, ಅಣ್ಣಪ್ಪಸ್ವಾಮಿ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ತೇಜೋವಧೆ ಬಗ್ಗೆ ಸಮೂಹ ಮಾಧ್ಯಮಗಳಲ್ಲಿ ಆಧಾರ ರಹಿತ ಸುಳ್ಳು ವದಂತಿಗಳ ಅಪಪ್ರಚಾರದಿಂದ ಅಸಂಖ್ಯಾತ ಭಕ್ತರು ಹಾಗೂ ಅಭಿಮಾನಿಗಳಲ್ಲಿ ಗೊಂದಲದ ವಾತಾವರಣ ಮೂಡಿದೆ. SIT ತನಿಖೆಯನ್ನು ಬಿ.ಜೆ.ಪಿ. ಸ್ವಾಗತಿಸುತ್ತದೆ. ಆದರೆ, ತನಿಖೆ ಪಾರದರ್ಶಕವಾಗಿ ನಡೆಯಬೇಕು ಎಂದು ಅವರು ಸಲಹೆ ನೀಡಿದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಷಡ್ಯಂತ್ರ ಇದೆ ಎಂದು ಹೇಳಿದ್ದಾರೆ. ಆದರೆ ಈ ಬಗ್ಗೆ ಯಾವುದೇ ಮಾಹಿತಿ ಅವರು ಬಹಿರಂಗಪಡಿಸಿಲ್ಲ. ಈ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂಬ ಬಗ್ಯೆಯೂ ತನಿಖೆಯಾಗಬೇಕು ಎಂದು ಅವರು ಹೇಳಿದರು. ದೂರುದಾರನ ಹಿನ್ನೆಲೆ ಬಗ್ಗೆ ಹಾಗೂ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ಬಗ್ಗೆಯೂ ತನಿಖೆಯಾಗಲಿ ಎಂದು ಅವರು ಆಶಿಸಿದರು. ಶವಗಳನ್ನು ಹೂತು ಹಾಕಿದ ಪ್ರಕರಣ ಕಪೋಲಕಲ್ಪಿತ ವಿಚಾರವಾಗಿದ್ದು, ಹದಿನೇಳು ಕಡೆಗಳಲ್ಲಿ ಹೊಂಡ ತೋಡಿದರೂ ಸಾಕ್ಷಿ, ಪುರಾವೆ ಏನೂ ಸಿಗಲಿಲ್ಲ. ಇದರಿಂದಾಗಿ, ಪ್ರಕರಣದ ವ್ಯವಸ್ಥಿತ ಷಡ್ಯಂತ್ರದ ಹಿಂದೆ ಅಪಪ್ರಚಾರ ಹಾಗೂ ಶ್ರದ್ಧಾ ಭಂಗದ ಹುನ್ನಾರವೂ ಇದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಶಾಸಕ ಹರೀಶ್ ಪೂಂಜ, ಛಲವಾದಿ ನಾರಾಯಣಸ್ವಾಮಿ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಸಿ.ಟಿ. ರವಿ, ಭಾಗೀರಥಿ ಮುರುಳ್ಯ, ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಯಶ್‌ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೋಳಿ, ಎಸ್.ಆರ್. ವಿಶ್ವನಾಥ್, ಧನಂಜಯ ಸರ್ಜಿ, ಕಿಶೋರ್ ಕುಮಾರ್ ಬೊಟ್ಯಾಡಿ, ಕೊರಣ್ ಕೊಡ್ಗಿ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಉಮಾನಾಥ ಕೋಟ್ಯಾನ್, ರವಿಕುಮಾರ್ ಮೈಸೂರು, ಶ್ರೀವಾತ್ಸವ ಹಾಗೂ ಅಪಾರ ಸಂಖ್ಯೆಯಲ್ಲಿ ಬಿ.ಜೆ.ಪಿ. ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. ಬಳಿಕ ಬಿ.ವೈ ವಿಜಯೇಂದ್ರ ಅವರು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

You may also like

News

ಬಂಟ್ವಾಳದ ತೌಹೀದ್ ಶಾಲೆಗೆ ಕೀರ್ತಿ ತಂದ ಆಭಿದುನ್ನೀಸ – SSLC ಪರೀಕ್ಷೆಯಲ್ಲಿ ಭರ್ಜರಿ ಸಾಧನೆ

ಇತ್ತೀಚೆಗೆ ಪ್ರಕಟಗೊಂಡ ರಾಜ್ಯ ಮಟ್ಟದ SSLC ಪರೀಕ್ಷಾ ಫಲಿತಾಂಶದಲ್ಲಿ ಬಂಟ್ವಾಳದ ತೌಹೀದ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಆಭಿದುನ್ನೀಸ ಎಂ. ಅವರು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ
News

ಪಾಲ್ದನೆ ಚರ್ಚ್‌ನಲ್ಲಿ ವಿದ್ಯಾರ್ಥಿಗಳಿಗೆ ಭವಿಷ್ಯದ ದಾರಿ – ವೃತ್ತಿ ಮಾರ್ಗದರ್ಶನ ಶಿಬಿರ ಯಶಸ್ವಿ

ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ನಂತರ ಸರಿಯಾದ ವೃತ್ತಿಜೀವನವನ್ನು ಆರಿಸಿಕೊಳ್ಳಲು ನೆರವಾಗುವ ನಿಟ್ಟಿನಲ್ಲಿ, ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಪಾಲ್ದನೆಯ ಸಂತ ತೆರೆಸಾ ಚರ್ಚ್‌ನ ಶೈಕ್ಷಣಿಕ ಆಯೋಗದ ವತಿಯಿಂದ ಇತ್ತೀಚೆಗೆ

You cannot copy content of this page