August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ICYM ಕೊಲ್ಲಂಗಾನ ಘಟಕದಿಂದ ಸೂಚಕ ಫಲಕ ಶುದ್ಧೀಕರಣ ಕಾರ್ಯ

ಭಾರತೀಯ ಕಥೊಲಿಕ್ ಯುವ ಸಂಚಾಲನ (ICYM) ಕೊಲ್ಲಂಗಾನ ಘಟಕ ಇದರ ವತಿಯಿಂದ ಆಗಸ್ಟ್ 17ರಂದು ಭಾನುವಾರ ಬೆಳಿಗ್ಗೆ ಬಿ.ಸಿ. ರೋಡ್ ಕಲೆಕ್ಟರೇಟ್‌ನಿಂದ ಮಾನ್ಯವರೆಗೆ ಸೂಚಕ ಫಲಕ ಶುಚಿಗೊಳಿಸುವ ಕಾರ್ಯಕ್ರಮ ನಡೆಯಿತು. ಸುಮಾರು 20 ಮಂದಿ ಸದಸ್ಯರು ಪಾಲ್ಗೊಂಡ ಈ ಕಾರ್ಯದಲ್ಲಿ ಹಾಳಾಗಿದ್ದ ಫಲಕಗಳನ್ನು ದುರಸ್ತಿ ಮಾಡಿ, ರಸ್ತೆಯ ಬದಿಯ ಸೂಚಕ ಫಲಕಗಳನ್ನು ಸ್ವಚ್ಛಗೊಳಿಸಲಾಯಿತು.

ಕೊಲ್ಲಂಗಾನ ಸಂತ ತೋಮಸ್ ಚರ್ಚ್ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದ ಆರಂಭದಲ್ಲಿ ಚರ್ಚ್ ಧರ್ಮಗುರು ವಂದನೀಯ ಫಾದರ್ ರಿತೇಶ್ ರೊಡ್ರಿಗಸ್ ಎಲ್ಲರನ್ನೂ ಸ್ವಾಗತಿಸಿ ಸುಚಿತ್ವ ಕಾರ್ಯಕ್ರಮವನ್ನು ಕೈಗೊಂಡ ICYM ಕೊಲ್ಲಂಗಾನ ಘಟಕದ ಅಧ್ಯಕ್ಷ ಹಾಗೂ ಎಲ್ಲಾ ಸದಸ್ಯರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಚರ್ಚ್ ನ ಪಾಲನಾ ಸಮಿತಿಯ ಕಾರ್ಯದರ್ಶಿ ಸುನಿಲ್ ಡಿಸೋಜ ಧನ್ಯವಾದಗಳನ್ನು ಸಲ್ಲಿಸಿದರು. ಈ ಸ್ವಚ್ಛತಾ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದರು.

You may also like

News

ಧರ್ಮಸ್ಥಳದಲ್ಲಿ ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ

ಆಯುರ್ವೇದದಿಂದ ಪಂಚೇಂದ್ರಿಯಗಳ ಬಲವರ್ಧನೆ, ಆರೋಗ್ಯಭಾಗ್ಯ ಸಾಧ್ಯ – ವೈದ್ಯ ಮನೀಷಾ ಕೋಟೆಕಾರ್ ಉಜಿರೆ: ಸಾವಿರಾರು ವರ್ಷಗಳ ಪಾರಂಪರಿಕ ಪರಂಪರೆಯನ್ನು ಹೊಂದಿರುವ ಆಯುರ್ವೇದ ಪದ್ಧತಿಯ ಮೂಲಕ ದೇಹದ ಪಂಚೇಂದ್ರಿಯಗಳನ್ನು
News

ಸಿಬ್ಬಂದಿ ಕೊರತೆ ನೀಗಿಸಲು ಮೆಸ್ಕಾಂಗೆ 395 ಪವರ್‌ಮ್ಯಾನ್‌ಗಳು – ಅಧ್ಯಕ್ಷ ಕೆ. ಹರೀಶ್ ಕುಮಾರ್

ಮಂಗಳೂರು: ವಿದ್ಯುತ್ ಸರಬರಾಜು ಮತ್ತು ನಿರ್ವಹಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮೆಸ್ಕಾಂ ವ್ಯಾಪ್ತಿಗೆ 395 ಹೊಸ ಪವರ್‌ಮ್ಯಾನ್‌ಗಳನ್ನು ನೇಮಕ ಮಾಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.

You cannot copy content of this page