January 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ICYM ಕೊಲ್ಲಂಗಾನ ಘಟಕದಿಂದ ಸೂಚಕ ಫಲಕ ಶುದ್ಧೀಕರಣ ಕಾರ್ಯ

ಭಾರತೀಯ ಕಥೊಲಿಕ್ ಯುವ ಸಂಚಾಲನ (ICYM) ಕೊಲ್ಲಂಗಾನ ಘಟಕ ಇದರ ವತಿಯಿಂದ ಆಗಸ್ಟ್ 17ರಂದು ಭಾನುವಾರ ಬೆಳಿಗ್ಗೆ ಬಿ.ಸಿ. ರೋಡ್ ಕಲೆಕ್ಟರೇಟ್‌ನಿಂದ ಮಾನ್ಯವರೆಗೆ ಸೂಚಕ ಫಲಕ ಶುಚಿಗೊಳಿಸುವ ಕಾರ್ಯಕ್ರಮ ನಡೆಯಿತು. ಸುಮಾರು 20 ಮಂದಿ ಸದಸ್ಯರು ಪಾಲ್ಗೊಂಡ ಈ ಕಾರ್ಯದಲ್ಲಿ ಹಾಳಾಗಿದ್ದ ಫಲಕಗಳನ್ನು ದುರಸ್ತಿ ಮಾಡಿ, ರಸ್ತೆಯ ಬದಿಯ ಸೂಚಕ ಫಲಕಗಳನ್ನು ಸ್ವಚ್ಛಗೊಳಿಸಲಾಯಿತು.

ಕೊಲ್ಲಂಗಾನ ಸಂತ ತೋಮಸ್ ಚರ್ಚ್ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದ ಆರಂಭದಲ್ಲಿ ಚರ್ಚ್ ಧರ್ಮಗುರು ವಂದನೀಯ ಫಾದರ್ ರಿತೇಶ್ ರೊಡ್ರಿಗಸ್ ಎಲ್ಲರನ್ನೂ ಸ್ವಾಗತಿಸಿ ಸುಚಿತ್ವ ಕಾರ್ಯಕ್ರಮವನ್ನು ಕೈಗೊಂಡ ICYM ಕೊಲ್ಲಂಗಾನ ಘಟಕದ ಅಧ್ಯಕ್ಷ ಹಾಗೂ ಎಲ್ಲಾ ಸದಸ್ಯರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಚರ್ಚ್ ನ ಪಾಲನಾ ಸಮಿತಿಯ ಕಾರ್ಯದರ್ಶಿ ಸುನಿಲ್ ಡಿಸೋಜ ಧನ್ಯವಾದಗಳನ್ನು ಸಲ್ಲಿಸಿದರು. ಈ ಸ್ವಚ್ಛತಾ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದರು.

You may also like

News

ತುಳುಕೂಟ ಥೈಲ್ಯಾಂಡ್ ಸಹಕಾರದಿಂದ ಗ್ರೀನ್‌ವ್ಯೂ ಅಂಗನವಾಡಿ ಕೇಂದ್ರ ಸಂಪೂರ್ಣ ಪುನರ್‌ನವೀಕರಣ – ಹಸ್ತಾಂತರ ಹಾಗೂ ಸೇವಾ ಕಾರ್ಯಕ್ರಮಗಳು ಯಶಸ್ವಿ

ಅಧ್ಯಕ್ಷ ವಿನಯ್ ರೈ ಅವರ ಕಾರ್ಯ ವೈಖರಿಗೆ ವ್ಯಾಪಕ ಮೆಚ್ಚುಗೆ ಬಟ್ಟಾರಬೆಟ್ಟು–ಅಳಪೆ–ಪಡೀಲ್‌ನ ಗ್ರೀನ್‌ವ್ಯೂ ಅಂಗನವಾಡಿ ಕೇಂದ್ರವು ತುಳುಕೂಟ ಥೈಲ್ಯಾಂಡ್‌ನ ಅಮೂಲ್ಯ ಸಹಕಾರದಿಂದ ಸಂಪೂರ್ಣವಾಗಿ ಪುನರ್‌ನವೀಕರಣಗೊಂಡಿದ್ದು, ಇದರ ಹಸ್ತಾಂತರ
News

ಶಾಸಕಿ ಭಾಗೀರಥಿ ಮುರುಳ್ಯರ ಭಾವಚಿತ್ರ ಅವಹೇಳನ – ಬಿಜೆಪಿ ದಕ್ಷಿಣ ಕನ್ನಡದಿಂದ ಮಿನಿ ವಿಧಾನಸೌಧ ಎದುರು ಪ್ರತಿಭಟನೆ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಭಾವಚಿತ್ರಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವುದನ್ನು ಖಂಡಿಸಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ನಗರದ ಮಿನಿ ವಿಧಾನಸೌಧದ

You cannot copy content of this page