April 8, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ತಾಕೊಡೆ ಚರ್ಚ್ ಧರ್ಮಗುರುಗಳು ನೀಡಿದ ಪತ್ರದ ದುರುಪಯೋಗ

ಚರ್ಚ್ ಆರ್ಥಿಕ ಸಮಿತಿಯ ಸದಸ್ಯೆಯಿಂದ ಪೊಲೀಸ್ ಠಾಣೆಗೆ ದೂರು

ವಿನೋದ್ ವಾಲ್ಟರ್ ಪಿಂಟೋ ವಿರುದ್ಧ ಪ್ರಕರಣ ದಾಖಲು

ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಹೋಲಿ ಕ್ರಾಸ್ ಚರ್ಚ್ ತಾಕೊಡೆ ಇಲ್ಲಿನ ಕಿಡ್ನಿ ರೋಗಿಯೊಬ್ಬರಿಗೆ ಆರ್ಥಿಕ ನೆರವು ನೀಡುವಂತೆ ಕೋರಿ ಚರ್ಚ್ ಧರ್ಮಗುರುಗಳು ನೀಡಿದ್ದ ಪತ್ರವನ್ನು ದುರುಪಯೋಗ ಪಡಿಸಿಕೊಂಡು ಹಣ ವಸೂಲಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗಸ್ಟ್ 18 ರಂದು ಸೋಮವಾರ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೋಲಿ ಕ್ರಾಸ್ ಚರ್ಚ್ ತಾಕೊಡೆ ಇದರ ಚರ್ಚ್ ಆರ್ಥಿಕ ಸಮಿತಿ ಸದಸ್ಯೆ ಐವಿ ಕ್ರಾಸ್ತಾ ಎಂಬವರು ದೂರು ನೀಡಿದ್ದು ಆರೋಪಿ ಅದೇ ಚರ್ಚ್ ನ ವಿನೋದ್ ವಾಲ್ಟರ್ ಪಿಂಟೋ ವಿರುದ್ಧ ಪ್ರಕರಣ ದಾಖಲಾಗಿದೆ.

ತಾಕೊಡೆ ಚರ್ಚ್ ಧರ್ಮ ಗುರುಗಳಾದ ವಂದನೀಯ ಫಾದರ್ ರೋಹನ್ ಲೋಬೊರವರು  ಚರ್ಚ್ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಸುರ್ಲಾಯ್ ಎಂಬಲ್ಲಿನ ಹೆನ್ರಿ ನೊರೋನ್ಹಾ ಇವರ ಮಗನಾದ ಮರ್ವಿನ್ ನೊರೊನ್ಹಾ ಎಂಬವರು ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ತಂದೆಯ ಕಿಡ್ನಿಯನ್ನು ವರ್ಗಾಯಿಸಲು ಆರ್ಥಿಕ ನೆರವನ್ನು ಕೋರಿ ಮರ್ವಿನ್ ನೊರೊನ್ಹಾ ಇವರ ಬ್ಯಾಂಕ್ ಖಾತೆ ಸಹಿತ ಒಂದು ಮನವಿ ಪತ್ರವನ್ನು ಚರ್ಚ್ ನ ವಾಟ್ಸಾಪ್ ಗ್ರೂಪ್ ನಲ್ಲಿ ಹಾಕಿದ್ದು, ಈ ಮನವಿ ಪತ್ರವನ್ನು  ಫೋಕಸ್ ಎಂಬ ವಾಟ್ಸಾಪ್ ಗ್ರೂಪಿನ ಅಡ್ಮಿನ್ ಆದ ವಿನೋದ್ ವಾಲ್ಮರ್ ಪಿಂಟೊ ಎಂಬಾತನು ದುರುಪಯೋಗಪಡಿಸಿಕೊಂಡು ಮನವಿ ಪತ್ರದಲ್ಲಿದ್ದ ಖಾತೆಯ ವಿವರಗಳನ್ನು ಅಳಿಸಿ ಹಾಕಿ State Bank of India ಮೂಡಬಿದ್ರೆ ಶಾಖೆಯ ವಿನೋದ್ ವಾಲ್ಟರ್ ಪಿಂಟೋ ಹೆಸರಿನಲ್ಲಿರುವ ಬ್ಯಾಂಕ್ ಉಳಿತಾಯ ಖಾತೆ ನಂಬರ್ : 64135690981 ಇದರ ವಿವರಗಳನ್ನು ಮುದ್ರಿಸಿ ಫೋಕಸ್ (Christian Unity Soldiers) ಎಂಬ ವಾಟ್ಸಾಪ್ ಗ್ರೂಪ್ ನಲ್ಲಿ ಹಾಕಿ ಹಣ ಸಂಗ್ರಹ ಮಾಡಿಕೊಂಡು ಮೋಸ ವಂಚನೆ ಮಾಡಿರುವುದಾಗಿ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 128/2025 ಕಲಂ: 314, 318(4) ಬಿ.ಎನ್.ಎಸ್ (ಕಲಂ 403, 420 ಐ.ಪಿ.ಸಿ) ರಂತೆ ಪ್ರಕರಣ ದಾಖಲಾಗಿದೆ.

ವಿನೋದ್ ವಾಲ್ಟರ್ ಪಿಂಟೋ ಎಂಬಾತನು ಚರ್ಚ್ ಧರ್ಮಗುರುಗಳು ನೀಡಿದ ಪತ್ರದ ದುರುಪಯೋಗ ಮಾಡಿ ವಂಚಿಸಿರುವುದು ಸ್ವಲ್ಪ ದಿನಗಳ ನಂತರ ಚರ್ಚ್ ಧರ್ಮಗುರುಗಳ ಗಮನಕ್ಕೆ ಬಂದಿರುತ್ತದೆ. ತಕ್ಷಣವೇ ಚರ್ಚ್ ಧರ್ಮಗುರುಗಳು ಚರ್ಚ್ ವಾಟ್ಸಾಪ್ ಗ್ರೂಪ್ ನಲ್ಲಿ ತುರ್ತಾಗಿ ಸಂದೇಶವನ್ನು ಹಾಕಿ ಭಕ್ತಾಧಿಗಳಿಗೆ ವಂಚನೆಯ ಬಗ್ಗೆ ತಿಳಿಸಿರುತ್ತಾರೆ.

ಆರೋಪಿ ವಿನೋದ್ ವಾಲ್ಟರ್ ಪಿಂಟೋ ಎಂಬಾತನನ್ನು ಪೊಲೀಸರು ಬಂಧಿಸಿ ವಶಕ್ಕೆ ಪಡೆದಿರುತ್ತಾರೆ ಎಂದು ತಿಳಿದು ಬಂದಿದೆ.

You may also like

News

ಆರಿಫ್ ಹತ್ಯೆ ಪ್ರಕರಣ – ಏಳು ಮಂದಿ ಪ್ರಮುಖ ಆರೋಪಿಗಳ ಬಂಧನ

ಮಂಗಳೂರು ಪೊಲೀಸ್ ಕಮೀಷನರ್ ಅವರಿಂದ ಪತ್ರಿಕಾ ಪ್ರಕಟನೆ ನಗರದ ಆರಿಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡವು ಮಹತ್ವದ ಪ್ರಗತಿ ಸಾಧಿಸಿದ್ದು, ಏಳು ಮಂದಿ ಪ್ರಮುಖ ಆರೋಪಿಗಳನ್ನು
News

Mangalore Physiocon 2026 – Pre-Conference Hands-on Workshop at Father Muller College of Physiotherapy

The Pre-conference Hands-on Workshop of Mangalore Physiocon 2026 was successfully conducted by Father Muller College of Physiotherapy in association with

You cannot copy content of this page