July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಭಟ್ಕಳದಲ್ಲಿ ಅಕ್ರಮ ಇಸ್ಪೀಟ್ ಜೂಜಾಟ – 8 ಜನರನ್ನು ಬಂಧಿಸಿದ ಪೊಲೀಸರು

ಭಟ್ಕಳ ತಾಲೂಕಿನ ಗೊರಟೆ ಗ್ರಾಮದಲ್ಲಿರುವ ಹೈಸ್ಕೂಲ್ ಆವರಣದಲ್ಲಿ ಅಕ್ರಮವಾಗಿ ಅಂದರ್–ಬಾಹರ್ ಇಸ್ಪೀಟ್ ಜೂಜಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಮೇರೆಗೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪಿಎಐ ಮಂಜುನಾಥ ಅಂಗಾರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಈ ದಾಳಿಯಲ್ಲಿ ಒಟ್ಟು 8 ಮಂದಿ ಆರೋಪಿತರನ್ನು ವಶಕ್ಕೆ ಪಡೆದು, ರೂಪಾಯಿ 1,02,910/- ಮೌಲ್ಯದ ನಗದು ಹಾಗೂ ಜೂಜಾಟಕ್ಕೆ ಬಳಸಿದ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಗಳ ವಿವರ:

ಚಂದ್ರಕಾಂತ ದೇವಯ್ಯ ಮೊಗೇರ (35), ಮೀನುಗಾರ, ಗೊರಟೆ, ಭಟ್ಕಳ, ವೆಂಕಟ್ರಮಣ ನಾರಾಯಣ ಮೊಗೇರ (35), ಮೀನುಗಾರ, ಗೊರಟೆ, ಭಟ್ಕಳ, ಶ್ರೀಧರ ಶಂಕರ ಮೊಗೇರ (52), ಮೀನುಗಾರ, ಗೊರಟೆ, ಭಟ್ಕಳ, ಜಗದೀಶ ಮಾದೇವ ಮೊಗೇರ (35), ಮೀನುಗಾರ, ಗೊರಟೆ, ಭಟ್ಕಳ, ಅಂಗರಾಜ ಹನುಮಂತ ಮೊಗೇರ (49), ಮೀನುಗಾರ, ಗೊರಟೆ, ಭಟ್ಕಳ, ನಾಗಪ್ಪ ಬೊಬ್ಬರಿಯ ಬೇಡುಮನೆ (51), ಮೀನುಗಾರ, ಗೊರಟೆ, ಭಟ್ಕಳ, ವೆಂಕಟ್ರಮಣ ನಾರಾಯಣ ಮೊಗೇರ (45), ಮೀನುಗಾರ, ಗೊರಟೆ, ಭಟ್ಕಳ, ನಾರಾಯಣ ಗಣಪತಿ ಮೊಗೇರ (40), ಮೀನುಗಾರ, ಗೊರಟೆ, ಭಟ್ಕಳ.

ಈ ಪ್ರಕರಣದ ಕುರಿತು ಕಲಂ 87 ಕೆ.ಪಿ. ಆ್ಯಕ್ಟ್ ಅಡಿಯಲ್ಲಿ ಕೇಸು ದಾಖಲಿಸಿದ್ದು, ಮುಂದಿನ ತನಿಖೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯವರು ನಡೆಸುತ್ತಿದ್ದಾರೆ. ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದು ಅಕ್ರಮ ಜೂಜಾಟ ಹಾಗೂ ಕಾನೂನು ಬಾಹಿರ ಚಟುವಟಿಕೆಗಳ ಬಗ್ಗೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲು ಕೋರಿದ್ದಾರೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page