November 8, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕರಾವಳಿಯಲ್ಲಿ ಅಗ್ನಿಶಾಮಕ ದಳ ಬಲವರ್ಧನೆ ಅಗತ್ಯ – MLC ಕಿಶೋರ್ ಕುಮಾರ್ ಪುತ್ತೂರು

ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ಅಗ್ನಿಶಾಮಕ ದಳ ತಿದ್ದುಪಡಿ ವಿಧೇಯಕ 2025 ಕುರಿತು ಇಂದು ಆಗಸ್ಟ್ 21ರಂದು ಗುರುವಾರ ನಡೆದ ಚರ್ಚೆಯಲ್ಲಿ MLC ಕಿಶೋರ್ ಕುಮಾರ್ ಪುತ್ತೂರು ಮಾತನಾಡಿದರು. ಅವರು, “ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಾನ್ಸೂನ್ ಮಳೆಯ ಸಮಯದಲ್ಲಿ ಭಾರೀ ಹಾನಿ ಸಂಭವಿಸುತ್ತಿದೆ. ಆದರೆ ಅಲ್ಲಿ ಕಾರ್ಯನಿರ್ವಹಿಸುವ ಅಗ್ನಿಶಾಮಕ ದಳವು ಫಸ್ಟ್ ರೆಸ್ಪಾಂಡರ್ ಆಗಿ ಸೂಕ್ತವಾಗಿ ಕಾರ್ಯನಿರ್ವಹಿಸಲು ವಿಫಲವಾಗಿದೆ” ಎಂದು ವಿಷಾದ ವ್ಯಕ್ತಪಡಿಸಿದರು.

ಈ ವೇಳೆ ಮೊದಲು ಮಾತನಾಡಿದ MLC ಐವನ್ ಡಿಸೋಜರವರು “ಅಗ್ನಿಶಾಮಕ ದಳದ ಬಳಿ ಸೂಕ್ತ ವಾಹನಗಳಿಲ್ಲ, ತುಕ್ಕು ಹಿಡಿದು ಹೋಗಿದೆ” ಎಂದು ಹೇಳಿದಾಗ ಗೃಹಸಚಿವರು ಅವರ ಮಾತನ್ನು ನಿರ್ಲಕ್ಷಿಸಿ “ಐವನ್ ಟ್ರ್ಯಾಕ್ ತಪ್ಪಿದ್ದಾರೆ” ಎಂದು ಪ್ರತಿಕ್ರಿಯಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ಶಾಸಕ ಕಿಶೋರ್ ಕುಮಾರ್ ಪುತ್ತೂರುರವರು, “ಐವನ್ ಡಿಸೋಜರವರು ಟ್ರ್ಯಾಕ್ ತಪ್ಪಿಲ್ಲ. ನಮ್ಮ ಕರಾವಳಿಯಲ್ಲಿ ವರುಣನ ಆರ್ಭಟಕ್ಕೆ ಜನತೆ ತತ್ತರಿಸಿದ್ದಾರೆ. ಉಳ್ಳಾಲದಲ್ಲಿ ಸಂಭವಿಸಿದ ಘಟನೆಯಲ್ಲಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಮನೆ ಕುಸಿತದಲ್ಲಿ ಸಾವನ್ನಪ್ಪಿದರು; ಅವರ ತಾಯಿ ತನ್ನೆರಡು ಕಾಲುಗಳನ್ನು ಕಳೆದುಕೊಂಡರು. ಇಂತಹ ದುಃಖಕರ ಘಟನೆಗಳನ್ನು ತಡೆಯಲು ಜಿಲ್ಲೆಯಲ್ಲಿ ಅಗ್ನಿಶಾಮಕ ದಳದಲ್ಲಿ ಹೆಚ್ಚಿನ ಯುವಕರನ್ನು ಸೇರಿಸಿ, ವಿಶೇಷ ಟಾಸ್ಕ್ ಫೋರ್ಸ್ ರಚನೆ ಅಗತ್ಯವಾಗಿದೆ” ಎಂದು ಒತ್ತಾಯಿಸಿದರು.

ಅವರು ಗೃಹಸಚಿವರಲ್ಲಿ, “ಮುಂದೆ ಇಂತಹ ಪ್ರಕೃತಿ ಆಪತ್ತುಗಳು ಸಂಭವಿಸಿದರೆ ತಕ್ಷಣ ಸ್ಪಂದಿಸಲು ಮತ್ತು ಪ್ರಾಣ ಹಾನಿಯನ್ನು ಕಡಿಮೆ ಮಾಡಲು ಕರಾವಳಿ ಜಿಲ್ಲೆಗಳಲ್ಲಿ ಅಗ್ನಿಶಾಮಕ ದಳವನ್ನು ಬಲವರ್ಧಿಸಬೇಕು” ಎಂದು ಮನವಿ ಮಾಡಿದರು.

You may also like

News

ಮಾಣಿ ಗ್ರಾಮದಲ್ಲಿ ಹಳೆ ಮನೆ ದುರಸ್ತಿ ಪರವಾನಗಿ ಪಡೆದು ಸರಕಾರಿ ಜಮೀನಿನ ಮೇಲೆ ಅಕ್ರಮವಾಗಿ ನಿರ್ಮಿಸಿದ ಐಶಾರಾಮಿ ಬಂಗ್ಲೆ

ಯಾವುದೇ ದಾಖಲೆಗಳಿಲ್ಲದೆ ಸರಕಾರಕ್ಕೆ ವಂಚನೆ ಮಾಡಿದ್ದನ್ನು ಬಯಲಿಗೆಳೆದ ಸಾಮಾಜಿಕ ಕಾರ್ಯಕರ್ತ ಅತಿಕ್ರಮಿತ ಕಟ್ಟಡ ಕೂಡಲೇ ತೆರವುಗೊಳಿಸಲು ಲೂಸಿಯಾ ಮೆಟಿಲ್ಡಾ ಪಿಂಟೊರವರಿಗೆ ಬಂಟ್ವಾಳ ತಹಶೀಲ್ದಾರ್ ನೋಟಿಸ್ ಜಾರಿ ಮಾಣಿ
News

ನಕಲಿ ದಾಖಲೆ ಪ್ರಕರಣದಲ್ಲಿ ಆರೋಪಿ ಅಬ್ದುಲ್ ಹಾಶೀಮ್ ಬಂಧನ

ನಕಲಿ ದಾಖಲೆ ಸೃಷ್ಟಿಸಿ ನ್ಯಾಯಾಲಯವನ್ನು ವಂಚಿಸಿದ ಭೂಪ ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ 34 ವರ್ಷ ಪ್ರಾಯದ ಅಬ್ದುಲ್ ಹಾಶೀಮ್  ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ನವೆಂಬರ್ 6ರಂದು

You cannot copy content of this page