ಬೆಳ್ತಂಗಡಿಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ
ಬೆಳ್ತಂಗಡಿ ತಾಲೂಕಿನ ಬಜಿರೆ, ನಿಟ್ಟಿಡೆ ಮತ್ತು ಪಡ್ಡಂದಡ್ಕ ಕ್ಲಸ್ಟರ್ಗಳ ವಲಯ ಮಟ್ಟದ ಕಬಡ್ಡಿ ಪಂದ್ಯಾಟವು ಆಗಸ್ಟ್ 20ರಂದು ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕರಿಮಣೇಲು ಇಲ್ಲಿ ವಿಜೃಂಭಣೆಯಿಂದ ಜರಗಿತು. ಕಾರ್ಯಕ್ರಮವನ್ನು ವೇಣೂರು ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಕಾಶಿನಾಥ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಎಲ್.ಜೆ. ಫೆರ್ನಾಂಡಿಸ್ ವಹಿಸಿದರು.


ಸಮೂಹ ಸಂಪನ್ಮೂಲ ವ್ಯಕ್ತಿ ಆರತಿ, ನೋಡ್ಲ್ ಅಧಿಕಾರಿ ಪುಷ್ಪ, ಶಿಕ್ಷಕರ ಸಂಘದ ಕೋಶಾಧಿಕಾರಿ ರಾಜೇಶ್ ಕಾರ್ಯಕ್ರಮದಲ್ಲಿ ಹಾಜರಿದ್ದರು. ಶಾಲೆಯ ಮುಖ್ಯ ಶಿಕ್ಷಕಿ ಮಾರ್ಸೆಲಿನ್ ಅತಿಥಿಗಳನ್ನು ಸ್ವಾಗತಿಸಿದರು. ಸುಪ್ರೀತಾ ವಂದಿಸಿದರು. ಶಿಕ್ಷಕಿ ಮೀನಾ ಮೋನಿಸ್ ಕಾರ್ಯಕ್ರಮವನ್ನು ನಿರ್ವಹಿಸಿದರು.




