July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪ್ರತಿಭಾವಂತ ಡಿ.ಜೆ. ಮರ್ವಿನ್ ರಸ್ತೆ ಅಪಘಾತದಲ್ಲಿ ದುರ್ಮರಣ

ಬೀದಿನಾಯಿಗಳು ಮತ್ತೆ ಕಸಿದುಕೊಂಡ ಜೀವ – ರಸ್ತೆ ಸುರಕ್ಷತೆಯ ಬಗ್ಗೆ ಎದ್ದ ಪ್ರಶ್ನೆ

ಬೆಳ್ಮಣ್ ಮೂಲದ 35 ವರ್ಷ ಪ್ರಾಯದ ಮರ್ವಿನ್ ಮೆಂಡೊನ್ಸಾರವರು ಇಂದು ಆಗಸ್ಟ್ 23ರಂದು ಶನಿವಾರ ರಸ್ತೆ ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ. ಉಡುಪಿ–ಮಂಗಳೂರು ಮಾರ್ಗದಲ್ಲಿ ಮೂಲೂರು ಹತ್ತಿರ ಕಾರು ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಆ ವೇಳೆ ಅವರು ವೀಡಿಯೋ ಎಡಿಟರ್ ಪ್ರಜ್ವಲ್ ಸುವರ್ಣ, ಪ್ರಸಾದ್, ವಿನೇಶ್ ಹಾಗೂ ಇನ್ನೊಬ್ಬರೊಂದಿಗೆ ಪ್ರಯಾಣಿಸುತ್ತಿದ್ದರು.

ಮಧ್ಯ ರಾತ್ರಿ ಸುಮಾರು 3 ಗಂಟೆಯ ಸಮಯದಲ್ಲಿ ರಸ್ತೆ ಮಧ್ಯೆ ಓಡಿಬಂದಿದ್ದ ನಾಯಿಯನ್ನು ತಪ್ಪಿಸಲು ಪ್ರಯತ್ನಿಸಿದಾಗ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಯಿತು. ತಕ್ಷಣವೇ ಆಂಬುಲೆನ್ಸ್ ಸಿಬ್ಬಂದಿ ಜಲಾಲುದ್ದೀನ್, ಹಮೀದ್ ಉಚ್ಚಿಲ, ಕೆ.ಎಂ. ಸಿರಾಜ್, ಅನ್ವರ್ ಹಾಗೂ ಪೊಲೀಸರು ಗಾಯಗೊಂಡವರನ್ನು ಉಡುಪಿ ಆದರ್ಶ ಆಸ್ಪತ್ರೆಗೆ ಸಾಗಿಸಿದರು. ಕಾರಿನಲ್ಲಿದ್ದ ಐವರು ಗಾಯಗೊಂಡಿದ್ದು, ಡಿ.ಜೆ. ಮರ್ವಿನ್ ಮಾತ್ರ ಗಂಭೀರ ಗಾಯಗಳಿಂದ ಬದುಕುಳಿಯಲಿಲ್ಲ. ಉಳಿದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದರು.

ಕೇವಲ ಒಂದು ದಿನದ ಹಿಂದಷ್ಟೇ ಮರ್ವಿನ್ ತಮ್ಮದೇ ನಿರ್ದೇಶನ ಹಾಗೂ ಚಿತ್ರೀಕರಣದಲ್ಲಿ ತಯಾರಿಸಿದ ಹೊಸ ಹಾಡನ್ನು ಎಪಿಡಿ ಮ್ಯೂಸಿಕ್ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆ ಮಾಡಿದ್ದರು. ಜೊತೆಗೆ ಹಲವು ಕೊಂಕಣಿ ಹಾಗೂ ತುಳು ಚಲನಚಿತ್ರ ಯೋಜನೆಗಳಲ್ಲಿ ತಮ್ಮ ಕಲಾತ್ಮಕ ಕೆಲಸದ ಮೂಲಕ ಹೆಸರು ಮಾಡಿದ್ದರು.

ರಸ್ತೆಗಳಲ್ಲಿ ನಿರ್ಬಂಧವಿಲ್ಲದೆ ಓಡಾಡುತ್ತಿರುವ ಬೀದಿನಾಯಿಗಳು ವಾಹನ ಸವಾರರಿಗೆ ದಿನೇ ದಿನೇ ಅಪಾಯಕಾರಿಯಾಗುತ್ತಿವೆ. ಇಂತಹ ಪ್ರಾಣಾಪಾಯದ ಘಟನೆಗಳು ಬೀದಿನಾಯಿಗಳ ನಿಯಂತ್ರಣ ಹಾಗೂ ರಸ್ತೆ ಸುರಕ್ಷತಾ ಕ್ರಮಗಳನ್ನು ಗಂಭೀರವಾಗಿ ಪರಿಗಣಿಸಬೇಕೆಂಬುದನ್ನು ಮತ್ತೊಮ್ಮೆ ನೆನಪಿಸುತ್ತವೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page