April 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಾಲ್ದನೆ ಚರ್ಚ್ ನಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ

ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಕೊಂಕಣಿ ಮಾನ್ಯತಾ ದಿನವನ್ನು ಆಚರಿಸಲಾಯಿತು. ಚರ್ಚ್ ಧರ್ಮಗುರು ವಂದನೀಯ ಫಾದರ್ ರಿಚ್ಚರ್ಡ್ ಅಲೋಶಿಯಸ್ ಕುವೆಲ್ಲೊರವರು ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ ಕೊಂಕಣಿ ಮಾತೃ ಭಾಷೆಯವರು ತಮ್ಮ ಮನೆಗಳಲ್ಲಿ ಕೊಂಕಣಿಯಲ್ಲಿಯೇ ಮಾತನಾಡುವ ಮೂಲಕ ಈ ಭಾಷೆಯನ್ನು ಉಳಿಸಿ ಬೆಳೆಸಲು ಮುಂದಾಗಬೇಕು ಎಂದು ಕರೆ ನೀಡಿದರು.

ಮುಖ್ಯ ಅತಿಥಿಯಾಗಿದ್ದ ಮಂಗಳೂರು ಧರ್ಮಕ್ಷೇತ್ರದ ಸಾರ್ವಜನಿಕ ಸಂಪರ್ಕ ಅಧಿಕಾರಿ ಹಾಗೂ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ರೋಯ್ ಕ್ಯಾಸ್ತೆಲಿನೊರವರು  ಮಾತನಾಡಿ ಕೊಂಕಣಿ ಮಾನ್ಯತೆ ಲಭಿಸಿದ ಕುರಿತಂತೆ ಮಾಹಿತಿ ನೀಡಿ ನಮ್ಮ ಮಾತೃ ಭಾಷೆಯನ್ನು ಉಳಿಸಿ ಮುಂದಿನ ಪೀಳಿಗೆಗೆ ದಾಟಿಸಲು ಎಲ್ಲರೂ ಮುಂದಾಗಬೇಕು ಎಂದು ಸಲಹೆ ನೀಡಿದರು.

ಚರ್ಚ್ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ಸ್ವಾಗತಿಸಿದರು. ಕೊಂಕಣಿ ಮಾನ್ಯತಾ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ಗಾಯನ ಮತ್ತು ಕವಿತಾ ವಾಚನ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಕುರಿತಂತೆ ವಿಶಿಷ್ಟ ರೀತಿಯ ಸೇವೆ ಸಲ್ಲಿಸಿದ ಚರ್ಚಿನ ಸದಸ್ಯ ಚಾರ್ಲ್ಸ್ ಫೆರ್ನಾಂಡಿಸ್ ರವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಚರ್ಚ್ ನ ಸರ್ವ ಆಯೋಗಗಳ ಸಂಚಾಲಕ ಜೋಸ್ಲಿನ್ ಲೋಬೊ, ಎರಡು ಕಾನ್ವೆಂಟ್ ಗಳ ಸುಪೀರಿಯರ್ ಗಳಾದ ಭಗಿನಿ ಮೊಂತಿ ಮತ್ತು ಭಗಿನಿ ವಿಭಾ, ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ಪ್ಯಾಟ್ಸಿ ಮೊಂತೇರೊ ಉಪಸ್ಥಿತರಿದ್ದರು. ಚರ್ಚ್ ಪಾಲನಾ ಸಮಿತಿಯ ಕಾರ್ಯದರ್ಶಿ ಆಸ್ಟಿನ್ ಮೊಂತೇರೊ ವಂದಿಸಿದರು. ರೋಶನ್ ಕ್ರಾಸ್ತಾ ಕಾರ್ಯಕ್ರಮ ನಿರೂಪಿಸಿದರು.

You may also like

News

ಬಂಟ್ವಾಳದ ತೌಹೀದ್ ಶಾಲೆಗೆ ಕೀರ್ತಿ ತಂದ ಆಭಿದುನ್ನೀಸ – SSLC ಪರೀಕ್ಷೆಯಲ್ಲಿ ಭರ್ಜರಿ ಸಾಧನೆ

ಇತ್ತೀಚೆಗೆ ಪ್ರಕಟಗೊಂಡ ರಾಜ್ಯ ಮಟ್ಟದ SSLC ಪರೀಕ್ಷಾ ಫಲಿತಾಂಶದಲ್ಲಿ ಬಂಟ್ವಾಳದ ತೌಹೀದ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಆಭಿದುನ್ನೀಸ ಎಂ. ಅವರು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ
News

ಪಾಲ್ದನೆ ಚರ್ಚ್‌ನಲ್ಲಿ ವಿದ್ಯಾರ್ಥಿಗಳಿಗೆ ಭವಿಷ್ಯದ ದಾರಿ – ವೃತ್ತಿ ಮಾರ್ಗದರ್ಶನ ಶಿಬಿರ ಯಶಸ್ವಿ

ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ನಂತರ ಸರಿಯಾದ ವೃತ್ತಿಜೀವನವನ್ನು ಆರಿಸಿಕೊಳ್ಳಲು ನೆರವಾಗುವ ನಿಟ್ಟಿನಲ್ಲಿ, ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಪಾಲ್ದನೆಯ ಸಂತ ತೆರೆಸಾ ಚರ್ಚ್‌ನ ಶೈಕ್ಷಣಿಕ ಆಯೋಗದ ವತಿಯಿಂದ ಇತ್ತೀಚೆಗೆ

You cannot copy content of this page