May 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ಲಿ.) – ಬೆಳ್ತಂಗಡಿ ಶಾಖೆ ಶೀಘ್ರದಲ್ಲಿ ಆರಂಭ

ಮಂಗಳೂರಿನ ಬೆಂದೂರ್‌ವೆಲ್ ಇಲ್ಲಿ ಕೇಂದ್ರ ಕಛೇರಿ ಹೊಂದಿರುವ ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ಲಿ.) ಇದರ ಬೆಳ್ತಂಗಡಿ ಶಾಖೆಯು ಶೀಘ್ರದಲ್ಲಿ ಅಂದರೆ ಮುಂದಿನ ನವರಾತ್ರಿ ದಸರಾದಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸೊಸೈಟಿಯ ಪ್ರಕಟಣೆ ತಿಳಿಸಿದೆ. ಪ್ರಸ್ತುತ ಸೊಸೈಟಿಯ ಶಾಖೆಯು ಮಂಗಳೂರು, ಸುರತ್ಕಲ್, ಉಡುಪಿ ಹಾಗೂ ಬಂಟ್ವಾಳದಲ್ಲಿದ್ದು, ನೂತನ ಶಾಖೆಯನ್ನು ಬೆಳ್ತಂಗಡಿಯ ನೊರೊನ್ಹಾ ಕಾಂಪ್ಲೆಕ್ಸ್ ಚರ್ಚ್ ರೋಡ್ ಹತ್ತಿರ ಬೆಳ್ತಂಗಡಿ ಇಲ್ಲಿ ತೆರೆಯಲು ಸಜ್ಜಾಗಿದೆ. 30 ವರ್ಷಗಳ ವಿಶ್ವಾಸಾರ್ಹ ಸೇವೆ ಮಾಡುತ್ತಾ ಬಂದಿರುವ ಸೊಸೈಟಿಯು ಸತತ ಲಾಭಗಳಿಕೆಯೊಂದಿಗೆ, ಸದಸ್ಯರಿಗೆ ಸತತ 20% ಡಿವಿಡೆಂಡ್ ನೀಡುತ್ತಾ ಬರುತ್ತಿದೆ. ಸರ್ಕಾರದ ಅಡಿಟ್ ವರ್ಗೀಕರಣದಲ್ಲಿ ಸತತ ‘ಎ’ ವರ್ಗ ಪಡೆಯುವುದರೊಂದಿಗೆ ಉತ್ತಮ ಅಭಿವೃದ್ಧಿಗೆ ಎಸ್.ಡಿ.ಸಿ.ಸಿ. ಬ್ಯಾಂಕ್ ಸಾಧನ ಪ್ರಶಸ್ತಿಯನ್ನು ಸತತ ಪಡೆಯುತ್ತಾ ಬರುತ್ತಿದೆ.

ಎಲ್ಲಾ ಶಾಖೆಗಳು ಕಂಪ್ಯೂಟರಿಕೃತ ಲೆಕ್ಕ-ಪತ್ರ ವ್ಯವಸ್ಥೆ ಎಲ್ಲಾ ಭದ್ರತಾ ವ್ಯವಸೆಗಳೊಂದಿಗೆ ಗ್ರಾಹಕರಿಗೆ ಉತ್ತಮ ಬ್ಯಾಂಕಿಂಗ್ ಸೇವೆ ನೀಡುತ್ತಾ ಬರುತ್ತಿದೆ. ಬೆಳ್ತಂಗಡಿ ಶಾಖೆಯು ಆರಂಭದ ಕೊಡುಗೆಯಾಗಿ ಸಾಮಾನ್ಯ ಠೇವಣಿ 1 ವರ್ಷಕ್ಕೆ 8.50%, 2 ವರ್ಷಕ್ಕೆ 9%, 3 ವರ್ಷಕ್ಕೆ 9.50% ಹಾಗೂ ಹಿರಿಯ ನಾಗರಿಕರಿಗೆ 1 ವರ್ಷಕ್ಕೆ 9%, 2 ವರ್ಷಕ್ಕೆ 9.50%, 3 ವರ್ಷಕ್ಕೆ 10% ನೀಡುತ್ತಿದ್ದು ಗ್ರಾಹಕ ಬಂಧುಗಳು ಕೆಲವೇ ದಿನಗಳ ಅವಧಿ ನೀಡುವ ಈ ಕೊಡುಗೆಯ ಸದುಪಯೋಗ ಪಡೆದುಕೊಳ್ಳಲು ಸೊಸೈಟಿಯ ಪ್ರಕಟಣೆಯಲ್ಲಿ ಕೋರಲಾಗಿದೆ.

You may also like

News

Mumbai Archbishop Cardinal Oswald Gracias Offers Solace to Residents of Saint Anthony’s Ashram

MANGALURU: His Eminence Cardinal Oswald Gracias, Archbishop of Mumbai and a member of the Pope’s Council of Cardinals, paid a
News

ಸೂರಿಕುಮೇರು – ಮಾಣಿಯಲ್ಲಿ ಅದ್ದೂರಿ ‘ಅನ್ಫಾಲ್ ರೆಸ್ಟೋರೆಂಟ್’ ಮೇ 3ರಂದು ಉದ್ಘಾಟನೆ

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಭಾಗಿ ಉದ್ಘಾಟನಾ ಭವ್ಯ ಸಮಾರಂಭದಲ್ಲಿ ಮೂವರು ಸಾಧಕರಾದ ಚೇತನ್ ರೈ, ನಾಗರಾಜ್ ಶೆಟ್ಟಿ ಹಾಗೂ ಯಾಸೀರ್ ಕಲ್ಲಡ್ಕ

You cannot copy content of this page