ನಿಗದಿತ ಸಮಯದೊಳಗೆ ಆಸ್ತಿ ಘೋಷಣೆ ಮಾಡದಿದ್ದರಿಂದ ಸದಸ್ಯತ್ವ ರದ್ದು
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಹಾಗೂ ಬೆಳ್ಳಾರೆ ಗ್ರಾಮ ಪಂಚಾಯತ್ 1ನೇ ವಾರ್ಡ್ನ ಚುನಾಯಿತ ಸದಸ್ಯ ಕೆ. ಮಹಮ್ಮದ್ ಇಕ್ಬಾಲ್ ರವರ ಸದಸ್ಯತ್ವವನ್ನು ರದ್ದುಪಡಿಸಲಾಗಿದೆ.

ರಾಜ್ಯ ಚುನಾವಣಾ ಆಯೋಗವು ನೀಡಿದ ಉಲ್ಲೇಖದ ಆದೇಶದಂತೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಕಲಂ 43(ಬಿ)(4)ರಡಿ, ಅವರು ನಿಗದಿತ ಅವಧಿಯೊಳಗೆ ಆಸ್ತಿ ಮತ್ತು ಹೊಣೆಗಾರಿಕೆಗಳ ಘೋಷಣೆಯನ್ನು ಸಲ್ಲಿಸದಿರುವ ಕಾರಣ ಸದಸ್ಯ ಸ್ಥಾನವನ್ನು ಕಳೆದುಕೊಂಡಿದ್ದಾನೆ.
ಇಕ್ಬಾಲ್ ಪ್ರಸ್ತುತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿ ಜೈಲಿನಲ್ಲಿದ್ದಾನೆ. ಇದರಿಂದಾಗಿ ಅವನ ಸದಸ್ಯ ಸ್ಥಾನವನ್ನು ಖಾಲಿ ಎಂದು ಅಧಿಕೃತವಾಗಿ ಘೋಷಿಸಲಾಗಿದೆ.




